Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಳೆದ 10 ವರ್ಷದಿಂದ ರಾಜಕೀಯ ನಾಯಕರು ಸುಂದರ ಕರ್ನಾಟಕದ ಕನಸೇ ಕಂಡಿಲ್ಲ: ಚಕ್ರವರ್ತಿ ಸೂಲಿಬೆಲೆ
    ಊರ್ಮನೆ ಸಮಾಚಾರ

    ಕಳೆದ 10 ವರ್ಷದಿಂದ ರಾಜಕೀಯ ನಾಯಕರು ಸುಂದರ ಕರ್ನಾಟಕದ ಕನಸೇ ಕಂಡಿಲ್ಲ: ಚಕ್ರವರ್ತಿ ಸೂಲಿಬೆಲೆ

    Updated:17/12/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕರ್ನಾಟಕ ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲಿ 3 ಪ್ರಮುಖ ರಾಜಕೀಯ ಪಕ್ಷದ ಐವರು ಮುಖ್ಯಮಂತ್ರಿಗಳು ರಾಜ್ಯಭಾರ ಮಾಡಿದ್ದರೂ ಕೂಡ ಸುಂದರ ಕರ್ನಾಟಕದ ಬಗ್ಗೆ ಕನಸೇ ಕಂಡಿಲ್ಲ. ಬದಲಾಗಿ ಅಧಿಕಾರ ಉಳಿಸಿಕೊಳ್ಳುವ ಬಗ್ಗೆ ಚಿಂತೆ ಮಾಡಿರುವುದರಿಂದ ರಾಜ್ಯ ಅಭಿವೃದ್ಧಿ ವಿಚಾರದಲ್ಲಿ 25 ವರ್ಷ ಹಿಂದುಳಿದಿದೆ ಎಂದು ಯುವ ಬ್ರಿಗೇಡ್‌ನ ಮಾರ್ಗದರ್ಶಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.

    Click Here

    Call us

    Click Here

    ಅವರು ತಲ್ಲೂರಿನ ಕುಂತಿ ಅಮ್ಮ ದೇವಸ್ಥಾನದ ಆವರಣದಲ್ಲಿ ಯುವ ಬ್ರಿಗೇಡ್ ಕುಂದಾಪುರ ವತಿಯಿಂದ ಆಯೋಜಿಸಿದ ನನ್ನ ಕನಸಿನ ಕರ್ನಾಟಕ ಕುರಿತ ಬಹಿರಂಗ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿ ಶಿರಾಡಿ ಘಾಟ್ ಪ್ರತಿ ಮಳೆಗಾಲದಲ್ಲೂ ಸಂಚಾರ ಸ್ಥಗಿತವಾಗುತ್ತದೆ. ನಮ್ಮನ್ನಾಳುವ ವರ್ಗಕ್ಕೆ ಕನಿಷ್ಠ 10 ವರ್ಷಕ್ಕೆ ಬಾಳಿಕೆ ಬರುವ ರಸ್ತೆ ನಿರ್ಮಿಸಲು ಇಷ್ಟು ವರ್ಷದಲ್ಲಿ ಇನ್ನೂ ಸಾಧ್ಯವಾಗಿಲ್ಲ. ಕೃಷ್ಣ- ಗೋದಾವರಿ ನದಿ ನೀರಿನ ದೊಡ್ಡ ಯೋಜನೆಯನ್ನು ಆಂಧ್ರಪ್ರದೇಶದಲ್ಲಿ ಕೇವಲ ಒಂದೇ ವರ್ಷದಲ್ಲಿ ಪೂರ್ಣ ಮಾಡಿರುವ ಉದಾಹರಣೆಯಿದ್ದರೂ, ನಾನು ಹುಟ್ಟಿದ 3ನೇ ವರ್ಷಕ್ಕೆ ಆರಂಭವಾದ ಉಡುಪಿಯ ಅತಿ ದೊಡ್ಡ ನದಿ ನೀರಿನ ಯೋಜನೆ ವಾರಾಹಿ ಇನ್ನೂ ಅದೇ ಆರಂಭಿಕ ಹಂತದಲ್ಲೇ ಇದೆ. 32 ವರ್ಷಗಳಲ್ಲಿ ಹನಿ ನೀರಿಗಾಗಿ ಈ ಭಾಗದ ಜನ ಪರಿತಪಿಸುತ್ತಿದ್ದಾರೆ ಎಂದವರು ವಿಷಾದಿಸಿದರು.

    ರಾಜಕೀಯ ಪ್ರವೇಶಿಸೋಲ್ಲ:
    ನಾನು ಮುಂಬರುವ ಚುನಾವಣೆ ಸಲುವಾಗಿ ಖಂಡಿತ ಇಲ್ಲಿಗೆ ಬಂದಿಲ್ಲ. ಚುನಾವಣೆಗೆ ಸ್ಪರ್ಧಿಸುವುದಾದರೆ ನಿನ್ನೆ ಕಲ್ಬುರ್ಗಿ, ಮೊನ್ನೆ ಅಥಣಿ ಹೀಗೆ ಕರ್ನಾಟಕದ ಊರೂರು ಸುತ್ತುತ್ತಿರಲಿಲ್ಲ. ಕಳೆದ ಬಾರಿ ಇಲ್ಲಿನ ಶಾಸಕರೊಬ್ಬರು ನೀವು ಟಿಕೇಟ್ ಪಡೆದು ಗೆದ್ದು ಬನ್ನಿ ಎಂದಿದ್ದರು. ಆದರೆ ನನಗೆ ಉಡುಪಿ ಎಂಪಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕರೂ, ನಾನು ನಯವಾಗಿಯೇ ತಿರಸ್ಕರಿಸಿದ್ದೇನೆ. ನನ್ನ ಕನಸಿನ ಕರ್ನಾಟಕಕ್ಕಾಗಿ ಶ್ರಮಿಸುತ್ತಿದ್ದೇನೆ ಎಂದರು.

    ಮಣಿಪಾಲ ಎಂಐಟಿಯ ಪ್ರೊ| ಎಸ್.ವಿ. ಉದಯಕುಮಾರ ಶೆಟ್ಟಿ ಮಾತನಾಡಿ, ಯುವಕರಲ್ಲಿ ಅತಿಯಾದ ಆತ್ಮವಿಶ್ವಾಸವಿರಬಾರದು. ನಿಮ್ಮ ಬಗ್ಗೆ ನಿಮಗೆ ಮೊದಲು ನಂಬಿಕೆ ಇರಲಿ. ದೈವಭಕ್ತಿ, ದೇಶಭಕ್ತಿ, ಮಾತೃಭಕ್ತಿ ನಿಮ್ಮಲ್ಲಿ ಇದ್ದರೆ ಯಶಸ್ಸು ಖಂಡಿತ ಸಾಧ್ಯ ಎಂದರು. ತಲ್ಲೂರು ಕುಂತಿ ಅಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಟಿ.ಎನ್. ರಘುರಾಮ್ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.