ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಬಹುಮತದೊಂದಿಗೆ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬೈಂದೂರಿನಲ್ಲಿ ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಕುಂದಾಪುರದಲ್ಲಿ ನಡೆದ ವಿಜಯೋತ್ಸವದಲ್ಲಿ ಕುಂದಾಪುರ ಬಿಜೆಪಿ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಭಾಸ್ಕರ ಬಿಲ್ಲವ, ಮಹಿಳಾ ಮೋರ್ಚಾ ಅಧ್ಯಕ್ಷೆ ಜಾನಕಿ ಬಿಲ್ಲವ, ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಪುರಸಭಾ ಉಪಾಧ್ಯಕ್ಷ ರಾಜೇಶ್ ಕಾವೇರಿ, ಸದಸ್ಯ ವಿಜಯ ಪೂಜಾರಿ, ರವಿರಾಜ ಖಾರ್ವಿ, ಮೀನುಗಾರರ ಪ್ರಕೋಷ್ಠದ ಸದಾನಂದ ಬಳ್ಕೂರು, ಯುವ ಮೊರ್ಚಾ ಅಧ್ಯಕ್ಷ ಸತೀಶ್ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.
ಬೈಂದೂರಿನಲ್ಲಿ ನಡೆದ ವಿಜಯೋತ್ಸವದಲ್ಲಿ ಜಿ.ಪಂ. ಸದಸ್ಯರಾದ ಸುರೇಶ್ ಬಟವಾಡಿ, ಕೆ. ಬಾಬು ಶೆಟ್ಟಿ, ಪಕ್ಷದ ಪ್ರಮುಖರಾದ ಸದಾಶಿವ ಡಿ.ಪಡುವರಿ, ಜಯಾನಂದ ಹೋಬಳಿದಾರ್, ಶಂಕರ ದೇವಾಡಿಗ ಬಂಕೇಶ್ವರ, ಗೋಪಾಲ ಗಾಣಿಗ ಬಂಕೇಶ್ವರ, ಸಸಿಹಿತ್ಲು ವೆಂಕಟ ಪೂಜಾರಿ, ದೀಪಕ್ ಕುಮಾರ್ ಶೆಟ್ಟಿ, ಕೃಷ್ಣಯ್ಯ ಮಯ್ಯಾಡಿ, ಬಾಲಕೃಷ್ಣ ಬೈಂದೂರು, ಸುನಿಲ್, ರಾಜೇಂದ್ರ ಬಿಜೂರು, ಮಂಜುನಾಥ ರಾವ್, ವಿಘ್ನೇಶ್ ಮದ್ದೋಡಿ, ಸುರೇಶ್ ನಾಯ್ಕ್ ತಗ್ಗರ್ಸೆ ಹಾಗೂ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು.