Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಬೀಚ್ ಉತ್ಸವಕ್ಕೆ ಸಕಲ ಸಿದ್ಧತೆ, ವೈವಿಧ್ಯಮಯ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಬೈಂದೂರು ಬೀಚ್ ಉತ್ಸವಕ್ಕೆ ಸಕಲ ಸಿದ್ಧತೆ, ವೈವಿಧ್ಯಮಯ ಕಾರ್ಯಕ್ರಮ

    Updated:22/12/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಬೆಸುಗೆ ಫೌಂಡೇಶನ್ ರಿ. ಬೈಂದೂರು, ಗ್ರಾಮ ಪಂಚಾಯತ್ ಪಡುವರಿ, ಉಡುಪಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಬೈಂದೂರು ಸೋಮೇಶ್ವರ ಬೀಚ್‌ನಲ್ಲಿ ಡಿಸೆಂಬರ್ ೨೮ ಹಾಗೂ ೨೯ರಂದು ಬೈಂದೂರು ಬೀಚ್ ಉತ್ಸವ ಜರುಗಲಿದ್ದು, ಉತ್ಸವದ ಸಿದ್ದತೆಗಳ ಬಗ್ಗೆ ಬೆಸುಗೆ ಫೌಂಡೇಶನ್‌ನ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಬೈಂದೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

    Click Here

    Call us

    Click Here

    ತಾಲೂಕು ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಬೈಂದೂರು ಸುತ್ತಮುತ್ತಲಿನ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸರಕಾರ, ಇಲಾಖೆ, ಜನಪ್ರತಿನಿಧಿಗಳು, ಸಂಘ-ಸಂಸ್ಥೆ ಹಾಗೂ ನಾಗರಿಕರ ನಡುವಿನ ಕೊಂಡಿಯಾಗಿ ನಿಂತು ಮಾದರಿ ಪ್ರವಾಸೋದ್ಯಮ ತಾಣವನ್ನಾಗಿಸುವ ಉದ್ದೇಶದೊಂದಿಗೆ ಹುಟ್ಟಿಕೊಂಡ ’ಬೆಸುಗೆ ಫೌಂಡೇಶನ್ ರಿ. ಬೈಂದೂರು’ ಸಂಸ್ಥೆಯ ಸಾರಥ್ಯದಲ್ಲಿ ಪಡುವರಿ ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಪ್ರಪ್ರಥಮ ಭಾರಿಗೆ ಆಯೋಜನೆಗೊಂಡಿದೆ ಬೈಂದೂರು ಬೀಚ್ ಉತ್ಸವವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನ ದೊರೆಯುತ್ತಿದೆ ಎಂದರು.

    ದಿ. ೨೮ ಡಿಸೆಂಬರ್ ೨೦೧೭ರ ಗುರುವಾರ ಬೆಳಿಗ್ಗೆ ೯ ಗಂಟೆಗೆ ಗಾಳಿಪಟ ಉತ್ಸವ ಸ್ವರ್ಧೆಗೆ ಚಾಲನೆ, ೯:೩೦ಕ್ಕೆ ಸೂಪರ್ ಸೆಲ್ಫಿ ಸ್ವರ್ಧೆಗೆ ಚಾಲನೆ, ೧೦:೦೦ಕ್ಕೆ ಮರಳುಶಿಲ್ಪ ಅನಾವರಣ, ೧೦:೩೦ಕ್ಕೆ ಚಿತ್ರಸಿರಿ, ಚಿತ್ರಕಲಾ ಸ್ವರ್ಧೆ ಹಾಗೂ ಪ್ರದರ್ಶನ ಮಳಿಗೆ ಉದ್ಘಾಟನೆ, ೧೧:೦೦ ತಾರಾಪತಿ ಅಳುವೆಕೋಡಿಯಲ್ಲಿ ಕ್ರೀಡೋತ್ಸವ ಉದ್ಘಾಟನೆ (ಪುರುಷರಿಗೆ ತಾಲೂಕು ಮಟ್ಟದ ಸ್ವರ್ಧೆಗಳು), ಸಂಜೆ ೪ರಿಂದ ಕೋಟೆಬಾಗಿಲು ಹಾಗೂ ಬೈಂದೂರು ಶಾಲಾ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ೫ಕ್ಕೆ ಸವಿ ಸವಿ ನೆನಪು ಕಲಾತಂಡದಿಂದ ಸುಮಧುರ ಸಂಗೀತ, ೫:೩೦ಕ್ಕೆ ಗಾನ ನೃತ್ಯ ವೈಭವ ಮ್ಯೂಸಿಕಲ್ ಪಬ್ಲಿಸಿಟಿಯಿಂದ ಕಾರ್ಯಕ್ರಮ, ೬:೩೦ಕ್ಕೆ ಚಂದ್ರ ಬಂಕೇಶ್ವರ್ ಮತ್ತು ಸುಮಧುರ ಸಂಜೆ ಸಂಗೀತ, ೭ಕ್ಕೆ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಉದ್ಘಾಟನೆ, ರಾತ್ರಿ ೮ರಿಂದ ಉಡುಪಿ ಭಾರ್ಗವಿ ನೃತ್ಯ ತಂಡದಿಂದ ಸಾಂಸ್ಕೃತಿಕ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.೨೮ರಿಂದ ಜನವರಿ ೧ರ ತನಕ ಅಮ್ಯೂಸಮೆಂಟ್ ಪಾರ್ಕ್, ದೋಣಿ ವಿಹಾರ ಹಾಗೂ ಆಹಾರೋತ್ಸವ ಮುಂದುವರಿಯಲಿದೆ.

    ದಿ. ೨೯ ಡಿಸೆಂಬರ್ ೨೦೧೭ರ ಶುಕ್ರವಾರ ಬೆಳಿಗ್ಗೆ ೯ ಗಂಟೆಗೆ ತಾಲೂಕು ಮಟ್ಟದ ಯೋಗ ಸ್ವರ್ಧೆಗೆ ಚಾಲನೆ, ೧೦ಕ್ಕೆ ಮಹಿಳೆಯರಿಗಾಗಿ ಆಯೋಜಿಸಲಾದ ವಿವಿಧ ಗ್ರಾಮೀಣ ಸ್ಪರ್ಧೆ ಹಾಗೂ ಅಡುಗೆ ಸ್ವರ್ಧೆಗೆ ಚಾಲನೆ, ಸಂಜೆ ೪ರಿಂದ ತಾರಾಪತಿ ಹಾಗೂ ದೊಂಬೆ ಶಾಲಾ ಮಕ್ಕಳು ಹಾಗೂ ರಾಮಕ್ಷತ್ರಿಯ ಮಾತೃಮಂಡಳಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ೫:೩೦ರಿಂದ ಬೈಂದೂರು ನೃತ್ಯ ಸುರಭಿ ಕಲಾಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ, ೬ಕ್ಕೆ ಸೂರ್ಯನಮಸ್ಕಾರದಲ್ಲಿ ಗಿನ್ನಿಸ್ ದಾಖಲೆ ಬರೆದ ನಿರಂಜನ ಶೆಟ್ಟಿ ಅವರಿಂದ ಯೋಗ ಪ್ರದರ್ಶನ, ೭ಕ್ಕೆ ಬೀಚ್ ಉತ್ಸವದ ಸಮಾರೋಪ ಸಮಾರಂಭ, ರಾತ್ರಿ ೮ರಿಂದ ಬೆಂಗಳೂರು ಸಂಗೀತ ಸರ್‌ಗಮ್ ತಂಡದಿಂದ ಸಾಂಸ್ಕೃತಿಕ ಸೌರಭ, ರಾತ್ರಿ ಕಣ್ಮನ ತಣಿಸುವ ಸಿಡಿಮದ್ದು ಪ್ರದರ್ಶನ ನಡೆಯಲಿದೆ.

    ಸ್ವರ್ಧೆಗಳು:
    ದಿ. ೨೮ ಡಿಸೆಂಬರ್ ೨೦೧೭ರ ಗುರುವಾರ ಗಾಳಿಪಟ ಸ್ವರ್ಧೆ ಪ್ರಾಥಮಿಕ, ಮಾಧ್ಯಮಿಕ ಹಾಗೂ ಮುಕ್ತ ವಿಭಾಗದಲ್ಲಿ ನಡೆಯಲಿದೆ. ಸುಪರ್ ಸೆಲ್ಫಿ ಸ್ವರ್ಧೆ ವೈಯಕ್ತಿಯ ಹಾಗೂ ಗುಂಪು ಸ್ವರ್ಧೆ ವಿಭಾಗದಲ್ಲಿ ಸಾರ್ವಜನಿಕರಿಗಾಗಿ ನಡೆಯಲಿದೆ. ಪ್ರಾಥಮಿಕ, ಮಾಧ್ಯಮಿಕ ಹಾಗೂ ಮುಕ್ತ ವಿಭಾಗದಲ್ಲಿ ಚಿತ್ರಕಲಾ ಸ್ವರ್ಧೆ ನಡೆಯಲಿದೆ. ಪುರುಷರಿಗಾಗಿ ತಾರಾಪತಿ ಅಳುವೆಕೋಡಿಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ.

    Click here

    Click here

    Click here

    Call us

    Call us

    ದಿ. ೨೮ ಡಿಸೆಂಬರ್ ೨೦೧೭ರ ಶುಕ್ರವಾರ ಪ್ರಾಥಮಿಕ, ಪೌಡಶಾಲಾ ಹಾಗೂ ಮುಕ್ತ ವಿಭಾಗದಲ್ಲಿ ಬೈಂದೂರು ತಾಲೂಕು ಮಟ್ಟದ ಯೋಗ ಸ್ವರ್ಧೆ, ಮಹಿಳೆಯರಿಗಾಗಿ ಮಡಿಲು ನೇಯುವ ಸ್ವರ್ಧೆ, ಹೂಮಾಲೆ ಕಟ್ಟುವ ಸ್ವರ್ಧೆ, ರಂಗೋಲಿ ಸ್ವರ್ಧೆ ಹಾಗೂ ಅಡುಗೆ ಸ್ವರ್ಧೆ ಸೇರಿದಂತೆ ವಿವಿಧ ಸ್ವರ್ಧೆಗಳು ನಡೆಯಲಿದೆ.

    ಈ ಸಂದರ್ಭ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಪಡುವರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ, ಬೆಸುಗೆ ಫೌಂಡೇಶನ್‌ನ ಕೋಶಾಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಗಣಪತಿ ಹೋಬಳಿದಾರ್, ಕಾರ್ಯಕಾರಿ ಮಂಡಳಿ ಸದಸ್ಯರಾದ ಜಯಾನಂದ ಹೋಬಳಿದಾರ್, ಭೀಮೇಶ್ ಕುಮಾರ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.