Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಂಗಭೂಮಿಯಲ್ಲಿ ತೊಡಗಿಸಿಕೊಂಡವರಿಗೆ ಬದುಕಿನ ಗಟ್ಟಿತನ ಕರಗತ: ಡಾ. ಗಣೇಶ್ ಅಮೀನಗಡ
    Recent post

    ರಂಗಭೂಮಿಯಲ್ಲಿ ತೊಡಗಿಸಿಕೊಂಡವರಿಗೆ ಬದುಕಿನ ಗಟ್ಟಿತನ ಕರಗತ: ಡಾ. ಗಣೇಶ್ ಅಮೀನಗಡ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವವರಿಗೆ ಜಾತಿ, ಅಂತಸ್ತು ಅರ್ಹತೆಯ ಅಗತ್ಯವಿಲ್ಲ. ನಾಟಕಗಳ ಮೂಲಕವೇ ಉತ್ತಮ ಬದುಕು ಕಟ್ಟಿಕೊಳ್ಳುವ ಗಟ್ಟಿತನತನವನ್ನು ರಂಗಭೂಮಿಯಲ್ಲಿ ತೊಡಗಿಸಿಕೊಂಡವರಿಗೆ ಕರಗತವಾಗುವಷ್ಟು ಅಂಕಗಳ ಬೆನ್ನತ್ತಿ ಉದ್ಯೋಗ ಗಿಟ್ಟಿಸಿಕೊಳ್ಳುವವರಿಗೆ ಬದುಕಿನ ಗಟ್ಟಿತನ ಕರಗತವಾಗದು ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಡಾ. ಗಣೇಶ್ ಅಮೀನಗಡ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಆಶ್ರಯದಲ್ಲಿ ನಡೆಯುತ್ತಿರುವ ನಾಡೋಜ ಏಣಗಿ ಬಾಳಪ್ಪ ಸಂಸ್ಮರಣೆಯ ರಂಗಸುರಭಿ 2017  ನಾಟಕ ಸಪ್ತಾಹವನ್ನು ಉದ್ಘಾಟಿಸಿ, ಏಣಗಿ ಬಾಳಪ್ಪ ಅವರ ಭಾವಚಿತ್ರಕ್ಕೆ ಪುಪ್ಪ ಸಮರ್ಪಿಸಿ ಬಳಿಕ ಮಾತನಾಡಿದರು. ನಾಟಕ ಉತ್ಸವದ ನೆಪದಲ್ಲಿ ರಂಗಾಸಕ್ತರು ಸೇರುವಂತೆ ಮಾಡುವುದೇ ದೊಡ್ಡ ಕೆಲಸ. ಒಳ್ಳೆಯ ನಾಟಕಗಳನ್ನು ನೋಡುವುದೆಂದರೆ ಉತ್ತಮ ಕೃತಿಗಳನ್ನು ಓದಿದಂತೆ. ನೈಜವಾಗಿರುವ ರಂಗಭೂಮಿ ಪ್ರೇಕ್ಷಕರಿಗೆ ಸದಾ ಆಪ್ತವಾಗುತ್ತದೆ ಎಂದವರು ಹೇಳಿದರು.

    ನಾಡೋಜ ಏಣಗಿ ಬಾಳಪ್ಪ ಅವರು ನಡೆದಾಡುವ ರಂಗಭೂಮಿ ಎಂದೆಸಿನಿಕೊಂಡವರು. ಬಡತನದ ಮಧ್ಯೆ ಬೆಳೆದು ಬಂದ ಅವರಿಗೆ ಅಚಾನಕವಾಗಿ ಒದಗಿ ಬಂದ ನಟಿಸುವ ಅವಕಾಶ ಬದುಕಿನ ಕೊನೆಯ ತನಕವೂ ರಂಗಪಯಣದೊಂದಿಗೆ ನಡೆಯುವಂತೆ ಮಾಡಿತು. ನಟಿಸುತ್ತಾ, ನಾಟಕ ಕಂಪೆನಿ ಕಟ್ಟಿ ಉತ್ತಮ ನಾಟಕಗಳನ್ನು ಪ್ರದರ್ಶಿಸುತ್ತಾ ನಾಕಟಗಳಿಗಾಗಿಯೇ ಬದುಕು ಮೀಸಲಿಟ್ಟ ಅವರು, ಕೊನೆಯಲ್ಲಿ ನಷ್ಟ ಅನುಭವಿಸಿ ನಾಟಕ ಕಂಪೆನಿಗಳನ್ನು ಮುಚ್ಚಬೇಕಾದ ಸಂದರ್ಭ ಬಂದಿತ್ತು. ಆದಾಗ್ಯೂ ಅವರು ಬದುಕಿನ ಕೊನೆಯ ತನಕವೂ ಹಾಡುವುದನ್ನು ನಿಲ್ಲಿಸಿರಲಿಲ್ಲ ಎಂದರು.

    ಈ ಸಂದರ್ಭ ಬರಹಗಾರ್ತಿ ಹಾಗೂ ರಂಗ ನಿರ್ದೇಶಕಿ ಅಭಿಲಾಷಾ ಅವರನ್ನು ಸನ್ಮಾನಿಸಲಾಯಿತು. ಸುರಭಿ ಕಲಾಗ್ರಾಮಕ್ಕೆ ಯು. ಚಂದ್ರಶೇಖರ ಹೊಳ್ಳ ಅವರು 1 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಿದರು. ಗಣೇಶ್ ಅಮಿನಗಡ ಅವರು ಬರೆದ ಶತಾಯುಶಿ ನಾಡೋಜ ಏಣಗಿ ಬಾಳಪ್ಪ ಅವರ ರಂಗಾನುಭವದ ಕಥನ ’ಬಣ್ಣದ ಬದುಕಿನ ಚಿನ್ನದ ದಿನಗಳು’ ಪುಸ್ತಕ ಲೋರ್ಕಾಪಣೆಗೊಂಡಿತು.

    ಸುರಭಿ ರಿ. ಬೈಂದೂರು ಇದರ ಗೌರವಾಧ್ಯಕ್ಷ, ಹಿರಿಯ ಸಾಹಿತಿ ಯು. ಚಂದ್ರಶೇಖರ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಯಡ್ತರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾಗರಾಜ ಶೆಟ್ಟಿ, ಉದ್ಯಮಿ ಮೋಹನ ರೇವಣ್ಕರ್, ಸುರಭಿ ಸಂಸ್ಥೆಯ ಅಧ್ಯಕ್ಷ ಶಿವರಾಮ ಕೊಠಾರಿ, ಯಸ್ಕೊರ್ಡ್ ಟ್ರಸ್ಟ್ ನಿರ್ದೇಶಕ ಕೃಷ್ಣಮೂರ್ತಿ ಉಡುಪ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಸುರಭಿ ನಿರ್ದೇಶಕ  ಸುಧಾಕರ ಪಿ. ಬೈಂದೂರು ಪ್ರಸ್ತಾವನೆಗೈದರು. ನಿರ್ದೇಶಕ ಗಣಪತಿ ಹೋಬಳಿದಾರ್ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮಣ ವೈ ಕೊರಗ ವಂದಿಸಿದರು. ಶಿಕ್ಷಕ ಆನಂದ ಮದ್ದೋಡಿ ಹಾಗೂ ಭ್ರಮರ ಉಡುಪ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಡಾ. ಹೆಚ್. ಎಸ್. ಶಿವಪ್ರಕಾಶ್ ಅವರ ರಚನೆಯ, ರೋಹಿತ್ ಎಸ್. ಬೈಕಾಡಿ ಅವರ ನಿರ್ದೇಶಕದ ಭೂಮಿಕಾ ಹಾರಾಡಿ ತಂಡ ಅಭಿನಯಿಸಿದ ಮದುವೆ ಹೆಣ್ಣು ನಾಟಕ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌

    17/12/2025

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.