Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಜಿ.ಎ. ಬಾವ
    ಕುಂದಾಪ್ರದ್ ಸುದ್ಧಿ

    ಕುಂದಾಪುರದಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಜಿ.ಎ. ಬಾವ

    Updated:04/01/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ೨೦೧೩ರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ೧೬೫ ಆಶ್ವಾಸನೆಗಳಲ್ಲಿ ಸಂಪೂರ್ಣವಾಗಿ ೧೬೫ನ್ನು ಈಗಾಗಲೇ ಈಡೇರಿಸಿದೆ. ಮತ್ತು ಜನಪರವಾದ ಹಾಗೂ ಭ್ರಷ್ಟಾಚಾರ ರಹಿತವಾದ ಆಡಳಿತ ನೀಡಿದೆ. ಆ ಮೂಲಕ ಕರ್ನಾಟಕದಲ್ಲಿ ಮತ್ತೊಮ್ಮೆ ಸಿದ್ದಾರಾಮಯ್ಯನವರ ಸರಕಾರ ಅಧಿಕಾರಕ್ಕೆ ಬರುವುದು ಖಚಿತಗೊಂಡಿದೆ ಎಂದು ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ’ಮನೆ ಮನೆಗೆ ಕಾಂಗ್ರೆಸ್’ ಉಸ್ತುವಾರಿ ಜಿ.ಎ.ಬಾವ ಹೇಳಿದ್ದಾರೆ.

    Click Here

    Call us

    Click Here

    ಅವರು ಕುಂದಾಪುರ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆದ ಪುರಸಭಾ ಮಟ್ಟದ ’ಮನೆ ಮನೆಗೆ ಕಾಂಗ್ರೆಸ್’ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

    ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸದಾ ರೇಪ್, ಕೊಲೆ, ಲೂಟಿ, ಬ್ಲೂಫಿಲ್ಮ್, ಜೈಲುವಾಸ, ಭಿನ್ನಮತ, ಡಿನೋಡಿಫಿಕೇಶನ್, ರೆಸಾರ್ಟ್ ರಾಜಕಾರಣ ಮುಂತಾದ ಹಗರಣಗಳಲ್ಲೇ ಕಾಲ ಕಳೆದಿತ್ತು. ಆದರೆ ಸಿದ್ಧಾರಾಮಯ್ಯನವರ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಸರಕಾರ ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ, ಕ್ಷೀರಭಾಗ್ಯ, ಮೈತ್ರಿ, ವಿದ್ಯಾಸಿರಿ, ರಾಜೀವ್ ಆರೋಗ್ಯಭ್ಯಾಗ್ಯ, ಶುದ್ಧನೀರು, ಋಣಮುಕ್ತ, ವಸತಿಭಾಗ್ಯ, ಸೌರಭಾಗ್ಯ, ಶಾದಿಭಾಗ್ಯ, ಪಶುಭಾಗ್ಯ, ಹನಿ ನೀರಾವರಿ, ಮನಸ್ವಿನಿ, ನಿರ್ಮಲಭಾಗ್ಯ ಹೀಗೆ ನೂರಾರು ಜನಪರ ಯೋಜನೆಗಳನ್ನು ನಾಡಿಗೆ ನೀಡಿದೆ ಆ ಮೂಲಕ ಜನಮಾನಸದಲ್ಲಿ ನೆಲೆಸಿದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಇಂಟಕ್ ರಾಜ್ಯಾಧ್ಯಕ್ಷರಾದ ರಾಕೇಶ್ ಮಲ್ಲಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ನಾರಾಯಣ ಆಚಾರ್, ಕಾಂಗ್ರೆಸ್ ಹಿಂದುಳಿದ ವರ್ಗ ರಾಜ್ಯ ಉಪಾಧ್ಯಕ್ಷ ಮಾಣಿಗೋಪಾಲ್, ಮುಖಂಡರುಗಳಾದ ಹರಿಪ್ರಸಾದ್ ಶೆಟ್ಟಿ, ಕೃಷ್ಣದೇವ ಕಾರಂತ, ನಗರ ಪ್ರಾಧಿಕಾರ ಅಧ್ಯಕ್ಷ ವಿಕಾಸ ಹೆಗ್ಡೆ, ಕಾಂಗ್ರೆಸ್ ಐಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಎ.ಪಿಎಂ.ಸಿ ಉಪಾಧ್ಯಕ್ಷ ಗಣೇಶ ಶೇರೆಗಾರ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ತಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಪುತ್ರನ್,ಆಶಾ ಕಾರ್ವಾಲ್ಲೋ ಶೋಭಾ ಸಚ್ಚಿದಾನಂದ, ಶಾಲೆಟ್ ರೆಬೆಲ್ಲೋ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಕ್ವಾಡಿ ರಮೇಶ ಶೆಟ್ಟಿ, ಪುರಸಭಾ ಮಾಜಿ ಅಧ್ಯಕ್ಷರುಗಳಾದ ಹಾರುನ್ ಸಾಹೇನ್, ದೇವಕಿ ಸಣ್ಣಯ್ಯ, ಶಿವಾನಂದ ಕೆ., ಪುರಸಭಾ ಸದಸ್ಯರುಗಳಾದ ಚಂದ್ರಶೇಖರ ಖಾರ್ವಿ, ಶ್ರೀಧರ ಶೇರಿಗಾರ್, ಪ್ರಭಾಕರ ಕೋಡಿ, ಚಂದ್ರ ಅಮೀನ್, ಕೇಶವ ಭಟ್ಟ, ಕೆ.ಜಿ.ನಿತ್ಯಾನಂದ, ನಾಗರಾಜ ನಾಯ್ಕ, ಸದಾನಂದ ಖಾರ್ವಿ, ಐಟಿ ಸೆಲ್ ಜಿಲ್ಲಾಧ್ಯಕ್ಷ ವಿಶ್ವಾಸ್ ಶೆಟ್ಟಿ, ಆರ್‌ಜಿ ಬ್ರಿಗೇಡ್ ಜಿಲ್ಲಾಧ್ಯಕ್ಷ ರಟ್ಟಾಡಿ ಸಂಪತ್ ಕುಮಾರ್ ಶೆಟ್ಟಿ, ಕೃಷ್ಣ ಪೂಜಾರಿ, ತಿಮ್ಮಪ್ಪ ಪೂಜಾರಿ, ದಿನೇಶ್ ಖಾರ್ವಿ, ಅಬ್ಬು ಮಹಮ್ಮದ್, ಚಂದ್ರಕಾಂತ ಖಾರ್ವಿ, ಮಧುಕರ, ವಿಠಲ ಕಾಂಚನ್, ಸುರೇಶ್ ಕೆ., ಅಶೋಕ್ ಸುವರ್ಣ, ಗಣೇಶ್ ಶೆಟ್ಟಿ, ಕೋಡಿ ಸುನಿಲ್ ಪೂಜಾರಿ, ಶಶಿಕಾಂತ ಕಾಂಚನ್, ಆನಂದ ಕೋಡಿ, ರೋಶನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    13 − 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.