Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಕ್ಷೇತ್ರಕ್ಕೆ ನಾಲ್ಕೂವರೆ ವರ್ಷದಲ್ಲಿ ರೂ. 2,000 ಕೋಟಿ ಅನುದಾನ: ಶಾಸಕ ಗೋಪಾಲ ಪೂಜಾರಿ
    ಊರ್ಮನೆ ಸಮಾಚಾರ

    ಬೈಂದೂರು ಕ್ಷೇತ್ರಕ್ಕೆ ನಾಲ್ಕೂವರೆ ವರ್ಷದಲ್ಲಿ ರೂ. 2,000 ಕೋಟಿ ಅನುದಾನ: ಶಾಸಕ ಗೋಪಾಲ ಪೂಜಾರಿ

    Updated:04/01/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಳೆದ ನಾಲ್ಕೂವರೆ ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಫಲಾನುಭವಿಗಳಿಗೆ ಈವರೆಗೆ ಸುಮಾರು 2,000 ಕೋಟಿ ಅನುದಾನ ರಾಜ್ಯ ಸರಕಾರದಿಂದ ಬಿಡುಗಡೆಗೊಂಡಿದ್ದು, ಈ ಪೈಕಿ ಬಹುಪಾಲು ಕಾಮಗಾರಿಗಳು ಪೂರ್ಣಗೊಂಡಿವೆ, ಇನ್ನಿತರ ಕಾಮಗಾರಿಗಳು ಪ್ರಗತಿಯ ಹಂತದಲ್ಲಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಬೈಂದೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಇಲಾಖಾವಾರು ವಿವರ ಬಿಡುಗಡೆ ಮಾಡಿದರು. ಲೋಕೋಪಯೋಗಿ ಇಲಾಖೆಯಿಂದ 178.22 ಕೋಟಿ, ಸಣ್ಣ ನೀರಾವರಿ ಇಲಾಖೆ 50.34 ಕೋಟಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಗ್ರಾಮೀಣಾಭಿವೃದ್ದಿ ಇಲಾಖೆ 45.11 ಕೋಟಿ, ವರಾಹಿ ನಿರಾವರಿ ನಿಗಮ 41.98 ಕೋಟಿ, ಕರಾವಳಿ ಪ್ರಾಧಿಕಾರ 1.45 ಕೋಟಿ, ಬಂದರು ಮತ್ತು ಮೀನುಗಾರಿಕಾ ಇಲಾಖೆ 241.45 ಕೋಟಿ, ಸಮಾಜ ಕಲ್ಯಾಣ ಇಲಾಖೆ 8.12 ಕೋಟಿ, ಸಮಗ್ರ ಗಿರಿಜನ ಅಭಿವೃದ್ದಿ ಇಲಾಖೆ (ಐ.ಟಿ.ಡಿ.ಪಿ) 37.19, ಕರ್ನಾಟಕ ರಸ್ತೆ ಸಾರಿಗೆ ನಿಗಮ 17.19 ಕೋಟಿ, ಪ್ರವಾಸೋದ್ಯಮ ಇಲಾಖೆ 12.58, ಗ್ರಾಮ ವಿಕಾಸ ಯೋಜನೆ 9.75 ಕೋಟಿ, ಎಡಿಬಿ ನೆರವಿನ ಯೋಜನೆ 92.23 ಕೋಟಿ, ಯೋಜನಾ ವಿಭಾಗ (ಪಿ.ಎಂ.ಜಿ.ಎಸ್.ವೈ) 63.49, ಮಲೆನಾಡು ಪ್ರದೇಶಾಬಿವೃದ್ದಿ ಯೋಜನೆ 1.58 ಕೋಟಿ, ಡಾ/ ಅಂಬೇಡ್ಕರ್ ಅಬಿವೃದ್ದಿ ನಿಗಮ (ವೈಯಕ್ತಿಕ ಸಾಲ ಸಹಾಯಧನ) 3.08 ಕೋಟಿ, ಡಾ. ದೇವರಾಜ್ ಅರಸು ಅಭಿವೃದ್ದಿ ನಿಗಮ (ವೈಯಕ್ತಿಕ ಸಾಲ ಸಹಾಯಧನ) 5.28 ಕೋಟಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿ. (ವೈಯಕ್ತಿಕ ಸಾಲ ಸಹಾಯಧನ) 10.50 ಕೋಟಿ, ದಾರ್ಮಿಕ ಕ್ಷೇತ್ರ ಅಬಿವೃದಿಗೆ 2.29, ಕಾಮಗಾರಿಳಿಗೆ ಕಳೆದ ನಾಲ್ಕೂವರೆ ವರ್ಷದ ಅವಧಿಯಲ್ಲಿ ನಡೆದಿದೆ. ಜನವರಿ 8ಕ್ಕೆ ಮುಖ್ಯಂತ್ರಿಗಳು ವಿವಿಧ ಇಲಾಖೆಗಳ ಒಟ್ಟು 490.97 ಕೋಟಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಬೈಂದೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3180 ಫಲಾನಿಭವಿಗಳಿಗೆ 94ಸಿ ಹಕ್ಕು ಪತ್ರ, 524 ಎನ್.ಸಿ.ಆರ್ ಹಕ್ಕು ಪತ್ರ ವಿತರಿಸಲಾಗಿದೆ. 3926 ಬಸವ ವಸತಿ ಮನೆ ಹಾಗೂ 503 ಮೀನುಗಾರಿಕಾ ಮನೆಗಳನ್ನು ಮಂಜೂರು ಮಾಡಲಾಗಿದೆ. ಕ್ಷೇತ್ರದ 3664 ವಸತಿಗಳ 104.94 ಕೋಟಿ ವಸತಿ ಸಾಲ ಮತ್ತು ಬಡ್ಡಿ ಮನ್ನ ಮಾಡಲಾಗಿದೆ, 43637 ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗಿದೆ ಎಂದವರು ವಿವರಿಸಿದರು.

    ಸಂಸದರ ಆಪ್ತ ಕಾರ್ಯದರ್ಶಿ ಆರೋಪಕ್ಕೆ ಉತ್ತರಿಸಲಾರೆ:
    ಕುಂದಾಪುರದಲ್ಲಿ ಸಂಸದರ ಕಾರ್ಯದರ್ಶಿ ನಡೆಸಿರುವ ಪತ್ರಿಕಾಗೋಷ್ಠಿಯ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಻ವರು ಬೈಂದೂರು ಕ್ಷೇತ್ರದಲ್ಲಿ ರಾಜ್ಯ ಸರಕಾರದ ಹಣದಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಕೇಂದ್ರ ಸರಕಾರದಿಂದ ಬಿಡುಗಡೆಗೊಂಡಿರುವುದು ಎಂದು ಬಿಂಬಿಸಿ ಸಂಸದರ ಆಪ್ತ ಕಾರ್ಯದರ್ಶಿ ನಡೆಸಿರುವ ಪತ್ರಿಕಾಗೋಷ್ಠಿ ಪತ್ರಿಕಾಗೋಷ್ಠಿಯ ಬಗ್ಗೆ ತಾನು ಪ್ರತಿಕ್ರಿಯಿಸುವುದಿಲ್ಲ. ಸಂಸದರೇ ಕೇಂದ್ರ ಸರಕಾರದ ಅನುದಾನದಲ್ಲಿ ಹಣ ಬಿಡುಗಡೆಗೊಳಿಸಿದ್ದೇವೆ ಎಂದು ಹೇಳಿದರೆ ಬಳಿಕ ತಾನು ದಾಖಲೆ ಸಮೇತ ಅಭಿವೃದ್ಧಿ ನಡೆಸಿರುವುದು ಯಾರು ಎಂಬುದನ್ನು ಬಯಲು ಮಾಡುತ್ತೇನೆ. ಯಾವ ಸರಕಾರದ ಹಣದಿಂದ ಅಭಿವೃದ್ಧಿ ನಡೆದಿದೆ ಎಂಬುದನ್ನು ಮಾಹಿತಿ ಹಕ್ಕಿನ ಮೂಲಕ ಸ್ಪಷ್ಟಪಡಿಸಿಕೊಳ್ಳಲಿ ಎಂದರು.

    ಸಂಸದರ ಆದರ್ಶ ಗ್ರಾಮಕ್ಕೆ ಹತ್ತಾರು ಕೋಟಿ ವಿನಿಯೋಗಿಸಿರುವ ಬಗ್ಗೆ ತಿಳಿಸಿದ್ದಾರೆ. ಆದರೆ ಎಲ್ಲಿ ಕೆಲಸ ಆಗಿದೆ ಎಂಬುದನ್ನು ತಿಳಿಸಬೇಕಿದೆ. ಆಸ್ಕರ್ ಫೆರ್ನಾಂಡಿಸ್ ಅವರು ದತ್ತು ತೆಗೆದುಕೊಂಡಿರುವ ಸಂಸದರ ಗ್ರಾಮ ಶಿರೂರು ಹಾಗೂ ಬಿ.ಎಸ್.ವೈ ಅವರು ದತ್ತು ತೆಗೆದುಕೊಂಡಿರುವ ಸಂಸದರ ಗ್ರಾಮವನ್ನು ತುಲನೆ ಮಾಡಿ ನೋಡಿ ಏನು ಅಭಿವೃದ್ಧಿ ಆಗಿದೆ ಎಂಬುದು ತಮಗೆ ತಿಳಿಯುತ್ತೆ ಎಂದರು.

    Click here

    Click here

    Click here

    Call us

    Call us

    ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಕಾರ್ಯದರ್ಶಿ ನಾಗರಾಜ ಗಾಣಿಗ, ತಾಪಂ ಸದಸ್ಯ ಜಗದೀಶ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

    ► ಜ.8ರಂದು ಬೈಂದೂರಿನಲ್ಲಿ ಮುಖ್ಯಮಂತ್ರಿಗಳಿಂದ 490 ಕೋಟಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ  – http://kundapraa.com/?p=27126

    ► ಕೇಂದ್ರದ ಅನುದಾನಕ್ಕೆ ರಾಜ್ಯದ ಹೆಸರು: ಬಿಎಸ್‌ವೈ ಆಪ್ತ ಕಾರ್ಯದರ್ಶಿ ಆರೋಪ – http://kundapraa.com/?p=27115 

    Like this:

    Like Loading...

    Related

    Byndoor MLA News
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d