Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉತ್ತಮ ಸಹಕಾರಿ ಪ್ರಶಸ್ತಿ ಪುರಸ್ಕೃತ ಎಸ್. ರಾಜು ಪೂಜಾರಿ ಹಾಗೂ ರತಿ ದಂಪತಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಉತ್ತಮ ಸಹಕಾರಿ ಪ್ರಶಸ್ತಿ ಪುರಸ್ಕೃತ ಎಸ್. ರಾಜು ಪೂಜಾರಿ ಹಾಗೂ ರತಿ ದಂಪತಿಗೆ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಜಿ.ಎಸ್. ಆಚಾರ್ ಅವರಂತಹ ಧುರೀಣರ ಗರಡಿಯಲ್ಲಿ ಪಳಗಿ ರಾಜಕೀಯದ ಕ್ಷೇತ್ರದಲ್ಲಷ್ಟೇ ಅಲ್ಲದೇ, ಸಹಕಾರ ಕ್ಷೇತ್ರದಲ್ಲಿ ಎರಡು ದಶಕಗಳ ಕಾಲ ತೊಡಗಿಸಿಕೊಂಡು ವಿವಿಧ ಸಹಕಾರಿ ಸಂಘಗಳ ಬೆಳವಣಿಗೆ ನಿರಂತರವಾಗಿ ಶ್ರಮಿಸಿರುವ ಎಸ್. ರಾಜು ಪೂಜಾರಿ ಅವರಿಗೆ ರಾಜ್ಯದ ಉತ್ತಮ ಸಹಕಾರಿ ಪ್ರಶಸ್ತಿ ದೊರೆತಿರುವುದು ಅವರ ಕಾರ್ಯತತ್ಪರತೆಗೆ ದೊರೆತ ಪ್ರತಿಫಲ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರು ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಹಳ್ಳಿಹೊಸೂರು ಶಾಲಾ ಆವರಣದಲ್ಲಿ ಇತ್ತಿಚಿಗೆ ಚಂದನ ಹಾಲಂಬೇರು ಮೂಡನಗದ್ದೆ ಭಾಗದ ನಾಗರಿಕರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ರಾಜ್ಯ ಉತ್ತಮ ಸಹಕಾರಿ ಪ್ರಶಸ್ತಿ ಪುರಸ್ಕೃತ ಸಹಕಾರಿ ಧುರೀಣ ಎಸ್. ರಾಜು ಪೂಜಾರಿ ಹಾಗೂ ರತಿ ರಾಜು ಪೂಜಾರಿ ದಂಪತಿಯನ್ನು ಅಭಿನಂದಿಸಿ ಬಳಿಕ ಮಾತನಾಡಿದರು.

    ಸಾಮಾಜಿಕ ರಂಗಕ್ಕೆ ಪಾದಾರ್ಪಣೆ ಮಾಡಿದ ಬಳಿಕ ಏಳು ಬೀಳುಗಳು ಸಾಮಾನ್ಯ. ಆದರೆ ಎಂಥಹ ಸಂದರ್ಭದಲ್ಲಿಯೂ ಜನಸಾಮಾನ್ಯರೊಂದಿಗೆ ಬೆರೆತು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರು ನಿಜವಾದ ಜನನಾಯಕರೆನಿಸಿಕೊಳ್ಳುತ್ತಾರೆ ಎಂದರು.

    ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಕಾರ್ಯದರ್ಶಿ ನಾಗರಾಜ ಗಾಣಿಗ ಅವರನ್ನು ಗೌರವಿಸಲಾಯಿತು. ಸ್ಥಳೀಯರಾದ ರಾಘವೇಂದ್ರ ಗಾಣಿಗ, ಸುಬ್ಬಯ್ಯ ಗಾಣಿಗ, ಹಿರಿಯ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

    ಬೈಂದೂರು ಕ್ಷೇತ್ರ ಕಾಂಗ್ರೆಸ್ ಕಿಸಾಸ್ ಘಟಕದ ಕಾರ್ಯದರ್ಶಿ ವೀರಭದ್ರ ಗಾಣಿಗ ಪ್ತಾಸ್ತಾವಿಕ ಮಾತುಗಳನ್ನಾಡಿದರು. ಮಂಜುನಾಥ ಗಾಣಿಗ ಕುಡ್ಲುಮನೆ ಸ್ವಾಗತಿಸಿ, ಮಂಜುನಾಥ ಗಾಣಿಗ ಮೂಡನಗದ್ದೆ ವಂದಿಸಿದರು. ಆಲಂದೂರು ಮಂಜುನಾಥ ಗಾಣಿಗ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ

    07/07/2026

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026
    Leave A Reply Cancel Reply

    5 × three =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.