Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ : ಕಿಡಿಗೇಡಿಗಳಿಂದ ಮತ್ತೆ ಬೈಕ್‌ಗೆ ಬೆಂಕಿ
    ಅಪಘಾತ-ಅಪರಾಧ ಸುದ್ದಿ

    ಗಂಗೊಳ್ಳಿ : ಕಿಡಿಗೇಡಿಗಳಿಂದ ಮತ್ತೆ ಬೈಕ್‌ಗೆ ಬೆಂಕಿ

    Updated:10/01/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಗಂಗೊಳ್ಳಿಯ ಮೀನು ಮಾರುಕಟ್ಟೆ ರಸ್ತೆ ಸಮೀಪವಿರುವ ಗೋಪಾಲ ಶೇರುಗಾರ್‌ ಅವರ ಮನೆಯ ಮೇಲಂತಸ್ತಿನ ಬಾಡಿಗೆ ಮನೆಯಲ್ಲಿ ವಾಸ್ತವ್ಯ ವಿರುವ ಬದ್ರುದ್ದೀನ್‌ ಅವರು ರಾತ್ರಿ ಕೆಲಸ ಮುಗಿಸಿ ಬಂದು, ಮನೆ ಪಕ್ಕ ನಿಲ್ಲಿಸಿದ್ದ ಪ್ಲಾಟಿನಾ ಬೈಕ್‌ಗೆ ಕಿಡಿಗೇಡಿಗಳು ಮಂಗಳವಾರ ಬೆಳಗ್ಗಿನ ಜಾವ 4.30ರ ಸುಮಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ರವಿವಾರ ತಡರಾತ್ರಿ ನಡೆದ ಬೈಕ್‌ಗೆ ಬೆಂಕಿಯಿಕ್ಕಿದ ಕೃತ್ಯದ ಬಳಿಕ ಮತ್ತೂಂದು ಬೈಕ್‌ಗೆ ಬೆಂಕಿ ಹಚ್ಚಿ ಸುಡಲು ಯತ್ನಿಸಿದ ಘಟನೆ ಮಂಗಳವಾರ ಬೆಳಗ್ಗಿನ ಜಾವ ಸಂಭವಿಸಿದೆ.

    Click Here

    Call us

    Click Here

    ಗಂಗೊಳ್ಳಿಯ ಮೀನು ಮಾರುಕಟ್ಟೆ ರಸ್ತೆ ಸಮೀಪವಿರುವ ಗೋಪಾಲ ಶೇರುಗಾರ್‌ ಅವರ ಮನೆಯ ಮೇಲಂತಸ್ತಿನ ಬಾಡಿಗೆ ಮನೆಯಲ್ಲಿ ವಾಸ್ತವ್ಯ ವಿರುವ ಬದ್ರುದ್ದೀನ್‌ ಅವರು ರಾತ್ರಿ ಕೆಲಸ ಮುಗಿಸಿ ಬಂದು, ಮನೆ ಪಕ್ಕ ನಿಲ್ಲಿಸಿದ್ದ ಪ್ಲಾಟಿನಾ ಬೈಕ್‌ಗೆ ಕಿಡಿಗೇಡಿಗಳು ಮಂಗಳವಾರ ಬೆಳಗ್ಗಿನ ಜಾವ 4.30ರ ಸುಮಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

    ಮನೆ ಮಾಲಕ ಗೋಪಾಲ ಶೇರು ಗಾರ್‌ ಮೂತ್ರ ವಿಸರ್ಜನೆಗೆಂದು ಎದ್ದಾಗ ಮನೆ ಹೊರಗಿನಿಂದ ಸುಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ ಹೊರ ಬಂದು ನೋಡಿ ದಾಗ ಬೈಕ್‌ ಹೊತ್ತಿ ಉರಿಯುತ್ತಿತ್ತು. ಕೂಡಲೇ ಅವರು ನೀರೆರಚಿ ಬೆಂಕಿ ನಂದಿಸಿದ್ದಾರೆ. ಬಳಿಕ ಮನೆ ಯವರು ಪೊಲೀಸರಿಗೆ ತಿಳಿಸಿ ದ್ದಾರೆ. ಬದ್ರುದ್ದೀನ್‌ ಅವರು ಗಂಗೊಳ್ಳಿ ಮ್ಯಾಂಗನೀಸ್‌ ರಸ್ತೆಯಲ್ಲಿ ಮೊಬೈಲ್‌ ಶಾಪ್‌ ಹೊಂದಿದ್ದಾರೆ. ಬೈಕ್‌ ಭಾಗಶಃ ಹಾನಿಗೀಡಾಗಿದ್ದು, ಸ್ಥಳಕ್ಕಾಗಮಿಸಿದ ಗಂಗೊಳ್ಳಿ ಪೊಲೀಸರು ಬೈಕನ್ನು ಠಾಣೆಗೆ ಕೊಂಡೊಯ್ದಿದ್ದಾರೆ.
    ಕಳೆದ ಒಂದು ವಾರದಿಂದ ಮುಸ್ಲಿಂ ಸಮುದಾಯದವರ ಬೈಕ್‌ಗಳಿಗೆ ಬೆಂಕಿ ಹಾಗೂ ಮನೆ, ಕಟ್ಟಡಗಳಿಗೆ ಕಲ್ಲು ತೂರಾಟ ನಡೆಸುತ್ತಿರುವ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮುಸ್ಲಿಂ ವರ್ತಕರು ಅಂಗಡಿ ಗಳನ್ನು ಮುಚ್ಚಿ ಕೆಲಕಾಲ ಬಂದ್‌ ನಡೆಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿಗಳು ಸ್ಥಳಕ್ಕಾಗಮಿಸಿ, ಮನವಿ ಸ್ವೀಕರಿಸ ಬೇಕು ಎಂದು ಮುಸ್ಲಿಂ ಸಂಘಟನೆಗಳು ಆಗ್ರಹಿಸಿದ್ದು, ಎಸ್‌ಪಿ ಬರುವುದಾಗಿ ಡಿವೈಎಸ್‌ಪಿ ಸಮಾಧಾನಪಡಿಸಿದ ಬಳಿಕ ವರ್ತಕರು ಪ್ರತಿಭಟನೆ ಹಿಂಪಡೆದರು.

    ಗುಂಪು ಚದುರಿಸಿದ ಪೊಲೀಸರು
    ರಾತ್ರಿ ವೇಳೆ ನಡೆಯುತ್ತಿರುವ ಕಿಡಿಗೇಡಿಗಳ ದುಷ್ಕೃತ್ಯವನ್ನು ಖಂಡಿಸಿ ಪಿಎಫ್‌ಐ ಗಂಗೊಳ್ಳಿ ಘಟಕಾಧ್ಯಕ್ಷ ತಬ್ರೇಜ್‌ ನೇತೃತ್ವದ ಯುವಕರ ತಂಡ ಸ್ಥಳದಲ್ಲಿ ಜಮಾಯಿಸಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಪ್ರವೀಣ್‌ ನಾಯ್ಕ ನೇತೃತ್ವದ ಪೊಲೀಸರ ತಂಡ ಗುಂಪನ್ನು ಚದುರಿಸಿದೆ.

    ಪತ್ತೆಗೆ ಕ್ರಮ: ಡಿವೈಎಸ್‌ಪಿ
    ಆರೋಪಿ ಗಳನ್ನು ಪತ್ತೆಹಚ್ಚಿ ಬಂಧಿ ಸಲು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಶಾಂತಿ ಕಾಪಾಡಲು ಎಲ್ಲರೂ ಸಹ ಕರಿಸ ಬೇಕು ಎಂದು ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಪ್ರವೀಣ್‌ ನಾಯ್ಕ ಮನವಿ ಮಾಡಿ ಕೊಂಡಿದ್ದಾರೆ.ಪದೇ ಪದೇ ಶಾಂತಿಭಂಗಕ್ಕೆ ಯತ್ನ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಕೋಮು ಸೂಕ್ಷ್ಮ ಘಟನೆಗಳಿಂದ ದುಷೆøàರಿತರಾಗಿ ಗಂಗೊಳ್ಳಿಯಲ್ಲಿಯೂ ಕೆಲವು ಕಿಡಿಗೇಡಿಗಳು ಕೋಮು ಸೌಹಾರ್ದ ಕೆಡಿಸಲು ಪ್ರಯತ್ನಿಸು ತ್ತಿರು ವುದು ಕಿಡಿಗೇಡಿಗಳ ಸರಣಿ ದುಷ್ಕೃತ್ಯ ಗಳಿಂದ ಸ್ಪಷ್ಟವಾಗಿದೆ. ರವಿವಾರ ತಡ ರಾತ್ರಿ ಗಂಗೊಳ್ಳಿಯ ಅಬ್ದುಲ್‌ ಮಜೀದ್‌ ಅವರ ಬೈಕ್‌ಗೆ ಬೆಂಕಿ ಹಾಕಿ ಸಂಪೂರ್ಣ ಸುಟ್ಟು ಹಾಕಲಾಗಿತ್ತು. ಅದಕ್ಕೂ ಮುನ್ನ ಕಟ್ಟಡ ವೊಂದಕ್ಕೆ ಕಲ್ಲು ತೂರಾಟ ನಡೆಸಿ ಕಿಟಕಿ ಗಾಜುಗಳನ್ನು ಪುಡಿಗೈಯ್ಯಲಾಗಿತ್ತು.

    Click here

    Click here

    Click here

    Call us

    Call us

    ಬಿಗಿ ಬಂದೋಬಸ್ತ್; ಎಸ್ಪಿ ಭೇಟಿ
    ಮುಂಜಾಗ್ರತಾ ಕ್ರಮವಾಗಿ ಅಧಿಕ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಗಂಗೊಳ್ಳಿಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ಡಿವೈಎಸ್‌ಪಿ ಪ್ರವೀಣ್‌ ನಾಯ್ಕ, ಕುಂದಾಪುರ ಸಂಚಾರಿ ಠಾಣೆಯ ಎಸ್‌ಐ ಸುಬ್ಬಣ್ಣ, ಬೈಂದೂರು ಪೊಲೀಸ್‌ ವೃತ್ತ ನಿರೀಕ್ಷಕ ಪರಮೇಶ್ವರ ಗುಣಗಿ, ಡಿಸಿಐಬಿ ಇನ್ಸ್‌ಪೆಕ್ಟರ್‌ ಸಂಪತ್‌ ಕುಮಾರ್‌ ಮೊದಲಾದವರು ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್‌ ನಿಂಬರ್ಗಿ ಅವರು ಮಂಗಳವಾರ ಗಂಗೊಳ್ಳಿಗೆ ಭೇಟಿ ನೀಡಿ, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d