Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಗಡಿ ಮುಂದೆ ಮಾಟ ಮಂತ್ರ. ವಿಜ್ಞಾನ ಶಿಕ್ಷಕನ ಮುಂದೆ ನಡೆಯಲಿಲ್ಲ ತಂತ್ರ
    ಕುಂದಾಪ್ರದ್ ಸುದ್ಧಿ

    ಅಂಗಡಿ ಮುಂದೆ ಮಾಟ ಮಂತ್ರ. ವಿಜ್ಞಾನ ಶಿಕ್ಷಕನ ಮುಂದೆ ನಡೆಯಲಿಲ್ಲ ತಂತ್ರ

    Updated:30/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಭಯ ಎಂಬುದು ಜಾತಿ ಧರ್ಮವನ್ನು ಮೀರಿದ್ದು! ಮೊದಲು ಎದುರಾದ ಕಂಟಕಕ್ಕೊಂದು ಅಂತ್ಯ ಸಿಕ್ಕರೆ ಸಾಕು ಎಂದು ಜನಸಾಮಾನ್ಯರು ಬಯಸುತ್ತಾರೆ. ಇಂದು ಮುಂಜಾನೆಯೇ ಕುಂದಾಪುರ ಪೇಟೆಯ ಪ್ಯಾನ್ಸಿ ಅಂಗಡಿಯ ಮುಂಭಾಗದಲ್ಲಿ ಯಾರೋ ಕಿಡಿಗೇಡಿಗಳಿಂದಾಗಿ ಎದುರಾದ ಕಂಟಕವೊಂದು ಅಂಗಡಿಯ ಮಾಲಿಕರನ್ನು ಕ್ಷಣಕಾಲ ವಿಚಲಿತರಾಗುವಂತೆ ಮಾಡಿತ್ತಾದರೂ ಅಲ್ಲಿಗೆ ವಿಜ್ಞಾನದ ಶಿಕ್ಷಕರೊರ್ವದಿಂದ ಪರಿಸ್ಥಿತಿ ತಿಳಿಯಾಯಿತು.

    Click Here

    Call us

    Click Here

    ಏನಿದು ಘಟನೆ?
    ಕುಂದಾಪುರದ ಸಿಟಿ ಜೇಸಿಸ್ ಸ್ಥಾಪಕಾಧ್ಯಕ್ಷ, ಬ್ಯೂಟಿ ಕ್ವೀನ್ ಅಂಗಡಿ ಮಾಲಕ ಹುಸೇನ್ ಹೈಕಾಡಿ ಎಂಬುವರ ಎಂದಿನಂತೆಯೇ ಶಟರ್ ಎಳೆದು ಅದರ ಬಲಭಾಗದಲ್ಲಿ ಬೀಗ ಹಾಕಿ ಮನೆಗೆ ತೆರಳಿದ್ದರು. ಬೆಳಿಗ್ಗೆ ಬಂದು ನೋಡಿದರೆ, ಶಟರಿನ ಎಡಭಾಗದಲ್ಲಿ ಒಂದು ಬೊಂಡವನ್ನಿಟ್ಟು, ಅದರ ಮೇಲೊಂದು ನಿಂಬೆ ಹಣ್ಣು ಇಡಲಾಗಿತ್ತು. ಮೂರೂ ಬದಿಗೆ ಬೊಂಡದ ಸುತ್ತ ಮೂರು ನಿಂಬೆ ಹಣ್ಣು ಇಡಲಾಗಿತ್ತು. ಕುಂಕುಮ ಮತ್ತು ಅರಶಿನಪುಡಿ ಚೆಲ್ಲಲಾಗಿತ್ತು. ಉರಿಸದ ಊದುಬತ್ತಿಯ ಕಟ್ಟನ್ನು ಶೆಟರ್‌ಗೆ ಸಿಕ್ಕಿಸಿಡಲಾಗಿತ್ತು. ಬೆಳಿಗ್ಗೆ ಸ್ಥಳೀಯ ಉಪನ್ಯಾಸಕರೊಬ್ಬರು ನಡೆದು ಬರುತ್ತಿದ್ದಾಗ ಗಮನಿಸಿ ಅಂಗಡಿ ಮಾಲೀಕರಿಗೆ ಸುದ್ಧಿ ಮುಟ್ಟಿಸಿದ್ದಾರೆ.

    KND_APR.29_3(2)

    ತಕ್ಷಣ ಅಂಗಡಿಗೆ ಬಂದ ಹುಸೇನ್ ಹೈಕಾಡಿಗೆ ಜೀವಭಯ ಕಾಡಿದೆ. ಗಲಿಬಿಲಿಗೊಂಡ ಅಂಗಡಿ ಮಾಲೀಕ ವಿಜಯವಾಣಿ ವರದಿಗಾರ ಜಯಶೇಖರ್ ಮಡಪ್ಪಾಡಿಗೆ ವಿಷಯ ತಿಳಿಸಿದ್ದು, ತಕ್ಷಣ ಪವಾಡ ರಹಸ್ಯ ಬಯಲು ತಜ್ಞ, ವಿಜ್ಞಾನ ಶಿಕ್ಷಕ ಉದಯ ಗಾಂವ್ಕರ್ ಅವರ ಜೊತೆಗೆ ವಿಜಯವಾಣಿ ವರದಿಗಾರ ಸ್ಥಳಕ್ಕೆ ಆಗಮಿಸಿ ಅಂಗಡಿ ಮಾಲೀಕರಿಗೆ ಧೈರ್ಯ ತುಂಬಿದ್ದಾರೆ. ನಂತರ ಅಂಗಡಿಯ ಮುಂಭಾಗದ ಸ್ಥಳವನ್ನು ಸ್ವಚ್ಛಗೊಳಿಸಿ, ಅಲ್ಲಿ ಇರಿಸಲಾಗಿದ್ದ ನಿಂಬೆಹಣ್ಣನ್ನು ಕತ್ತರಿಸಿ ಜ್ಯೂಸ್ ತಯಾರಿಸಿದ ಉದಯ ಗಾಂವ್ಕರ್ ಅಲ್ಲಿಯೇ ಅದನ್ನು ಕುಡಿದು ಬೇರೆಯವರಿಗೂ ನೀಡಿ ಕುಡಿಯಲು ಹೇಳಿ ಈಗ ಆರೋಗ್ಯವಾಗಿದ್ದಾರೆ.

    ಮಂತ್ರಿಸಿ ಇಟ್ಟಿದ್ದ ಲಿಂಬುವನ್ನು ಕತ್ತರಿಸಿ ಮಾಟಮಂತ್ರವೆಂಬುದು ಮೂಡನಂಬಿಕೆ ಎಂಬ ಸಂದೇಶವನ್ನು ಜನಸಾಮಾನ್ಯರಿಗೆ ನೀಡಿರುವ ಗಾಂವ್ಕರ್, ಮಾಟಮಂತ್ರಕ್ಕೆಲ್ಲ ಹೆದರುವುದಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನೂ ಲಿಂಬು ಜ್ಯೂಸ್ ತಯಾರಿಸಿ ಕುಡಿಯುವ ಮೂಲಕ ಕಿಡಿಗೇಡಿಗಳಿಗೆ ರವಾನಿಸಿದ್ದಾರೆ!

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d