ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಊಟಬಲ್ಲವನಿಗೆರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲಾ ಎನ್ನೋದುಗಾದೆ ಮಾತು.ಪ್ರಸಕ್ತಯೋಗ ಬಲ್ಲವನಿಗೆರೋಗಇಲ್ಲಾಎಂದು ಬದಲಾಯಿಸುವಕಾಲ ಬಂದಿದೆ.ಯೋಗ ನಮ್ಮ ಪರಂಪರೆಯಅತ್ಯಾಮೂಲ್ಯಕೊಡುಗೆಯಾಗಿದ್ದು, ಗುರುತಿಸುವಲ್ಲಿ ನಾವು ಎಡವುತ್ತಿದ್ದೇವೆಎಂದುಕಾರ್ತಿಕೇಯ ಸ್ಕ್ಯಾನಿಂಗ್ ಸೆಂಟರ್ವೈದ್ಯಾಧಿಕಾರಿ ಡಾ. ಬಿ.ವಿ.ಉಡುಪ ಅಭಿಪ್ರಾಯಪಟ್ಟರು.
ಕುಂದಾಪುರಯೋಗಬಂಧುಆಶ್ರಯದಲ್ಲಿಪರಿಜಾತಾ ಹೊಟೇಲ್ ಪದ್ಮಾವತಿಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಸನ್ಮಾನಕಾರ್ಯಕ್ರಮಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಗ ಸ್ಪರ್ಧೆಯಲ್ಲಿ ಪಾಲ್ಗೊಂಡುಜಿಲ್ಲೆ ಹಾಗೂ ಕುಂದಾಪುರತಾಲೂಕುಹೆಸರು ವಿಶ್ವಮಟ್ಟಕ್ಕೆ ಏರಿಸಿದ ಕುಶ ಪೂಜಾರಿ ಸಾಧನೆ ಶ್ಲಾಘನೀಯಎಂದಅವರು, ಆರಂಭದಲ್ಲೇ ಪ್ರತಿಭೆಗಳ ಗುರುತಿಸಿ ಪ್ರೋತ್ಸಾಹಿಸಿದರೆ, ಯೋಗಕ್ಷೇತ್ರದಲ್ಲಿಇನ್ನಷ್ಟು ಪ್ರತಿಭೆಗಳು ಹೊರ ಬರಲು ಸಾಧ್ಯಎಂದರು.
ಅಂತಾರಾಷ್ಟ್ರೀಯಯೋಗ ಸ್ಪರ್ಧೆಯಲ್ಲಿತೃತೀಯ ಸ್ಥಾನ ಪಡೆದ ಕುಶ ಪೂಜಾರಿಮರವಂತೆಅವರಕುಂದಾಪುರಯೋಗ ಬಂದು ಪರವಾಗಿ ಸನ್ಮಾನಿಸಲಾಯಿತು. ಯೋಗಗುರು ಬಿ.ಎಂ.ಲಮಾಣಿ ಹಾಗೂ ಕುಶ ಪೂಜಾರಿ, ಮಾತೃಶ್ರೀ ಲೀಲಾವತಿ ಆರ್.ಪೂಜಾರಿ ಅವರನ್ನು ಅಭಿನಂದಿಸಲಾಯಿತು. ಪಾರಿಜಾತಾ ಹೊಟೇಲ್ ಮಾಲಕg ಮಚಂದ್ರ ಭಟ್ ನೀಡಿದ ೧೦ ಸಾವಿರ ನಗದು ಪುರಸ್ಕಾರಹಸ್ತಾಂತರಿಸಲಾಯಿತು.
ಆಧ್ಯಾತ್ಮ ಪತ್ರಿಕೆ ಸಂಪಾದಕ ಸತೀಶ್ ಶೆಟ್ಟಿ, ಹಿರಿಯ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ, ಯೋಗಬಂಧು ಸಂಜೀವಣ್ಣ, ಸಂತೋಷ್ ಹಾಗೂ ಇನ್ನಿತರರು ಇದ್ದರು. ಪೂರ್ವಿಚಾತ್ರ ಪ್ರಾರ್ಥಿಸಿದರು.ಶ್ರೀ ದುರ್ಗಾಂಬಾ ಮೋಟಾರ್ಸ್ ಆಡಳಿತ ಪಾಲುದಾರ ಅನಿಲ್ ಚಾತ್ರ ಸ್ವಾಗತಿಸಿದರು.ಲೇಖಕ ಜೈವಂತ್ ಪೈ ನಿರೂಪಿಸಿದರು.ಯೋಗಬಂಧು ನಾಗೇಶ್ ಸನ್ಮಾನ ಪತ್ರ ವಾಚಿಸಿದರು.ಯೋಗಬಂಧಗೋವಿಂದಣ್ಣವಂದಿಸಿದರು.
















