ಫೆ.18ರಂದು ಬಹುನಿರೀಕ್ಷಿತ ‘ಕತ್ತಲೆಕೋಣೆ’ ಚಿತ್ರದ ಆಡಿಯೋ ಬಿಡುಗಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕನ್ನಡ ಚಿತ್ರರಂಗದಲ್ಲಿ ಕೌತುಕವನ್ನು ಹುಟ್ಟುಹಾಕಿರುವ ಬಹುನಿರೀಕ್ಷಿತ ‘ಕತ್ತಲೆಕೋಣೆ’ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಫೆ.18ರ ಸಂಜೆ 4:30ಕ್ಕೆ ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

Call us

Click Here

ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಉದ್ಘಾಟನೆ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ಡಾ. ಶಶಿಧರ್ ಭಟ್, ಸಂಗೀತಕಾರರಾದ ಬಿ.ಕೆ ಸುಮಿತ್ರ, ವಿ. ಮನೋಹರ್, ಡಾ. ಜಯಲಕ್ಷ್ಮಿ ಆಡಿಯೋ ಬಿಡಗಡೆ ಮಾಡಲಿದ್ದಾರೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕತ್ತಲೆಕೋಣೆ ಚಿತ್ರದ ನಟ, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ, ನಿರ್ಮಾಪಕ ಪುರುಷೋತ್ತಮ್ ಅಮೀನ್, ಸಹ ನಿರ್ಮಾಪಕ ಎಂ.ಎನ್. ಶ್ರೀನಿವಾಸ್ ಮೂರ್ತಿ ಶಿವಮೊಗ್ಗ, ಕಾರ್ಯಕಾರಿ ನಿರ್ಮಾಪಕ ರಾಘವೇಂದ್ರ ಎ. ಶೆಟ್ಟಿ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ಮಾಪಕ ರಾಜೀವ ಕೊಠಾರಿ, ಉದ್ಯಮಿ ರಾಜೇಂದ್ರ ಶೆಟ್ಟಿ, ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಂಕರ್ ಸುಗದೆ, ವಕೀಲರಾದ ರವಿಕಿರಣ್ ಮುರ್ಡೇಶ್ವರ್, ಮಂಜುನಾಥ ಸಾಲಿಯಾನ್ ತ್ರಾಸಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಆ ಬಳಿಕ ಡಾ. ಅಭಿಷೇಕ್ ರಾವ್, ಸರಿಗಮ ಖ್ಯಾತಿಯ ಮೆಹಬೂಬ್ ಸಾಬ್ ಮತ್ತು ಗಾಯಕಿ ದೀಪಿಕಾ ಶ್ರೀಕಾಂತ್ ಅವರ ಸಾರಥ್ಯದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿದೆ.

Leave a Reply