Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ: ಕುಂದಾಪುರ-ಉಡುಪಿ ನ್ಯಾಯವಾದಿಗಳ ತಂಡಕ್ಕೆ ಪ್ರಶಸ್ತಿ
    ಊರ್ಮನೆ ಸಮಾಚಾರ

    ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ: ಕುಂದಾಪುರ-ಉಡುಪಿ ನ್ಯಾಯವಾದಿಗಳ ತಂಡಕ್ಕೆ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಹಾಸನದಲ್ಲಿ ನಡೆದ ರಾಜ್ಯ ಮಟ್ಟದ ಎಲ್ಲಾ ಬಾರ್ ಅಸೋಸಿಯೇಶನ್‌ಗಳಲ್ಲದೆ ಇತರ ತಂಡಗಳು ಸೇರಿದಂತೆ ೪೨ ಬಲಿಷ್ಠ ಕ್ರಿಕೆಟ್ ತಂಡಗಳು ಭಾಗವಹಿಸಿದ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಕುಂದಾಪುರ ಮತ್ತು ಉಡುಪಿ ವಕೀಲರ ಜಂಟೀ ತಂಡವು ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

    Click Here

    Call us

    Click Here

    ಹಾಸನ ಬಾರ್ ಅಸೋಸಿಯೇಶನ್ ನೇತೃತ್ವದಲ್ಲಿ ನಡೆದ ಪ್ರತಿಷ್ಠಿತ ವಕೀಲರ ಕ್ರೀಡಾಕೂಟದಲ್ಲಿ ವಕೀಲರಾದ ಸಚಿನ್ ಕುಮಾರ್ ಶೆಟ್ಟಿ ಮತ್ತು ರಾಘವೇಂದ್ರ ಚರಣ್ ನಾವುಡ ರ ನೇತೃತ್ವದ ಉಡುಪಿ-ಕುಂದಾಪುರ ವಕೀಲರ ತಂಡ ಎರಡು ದಿನಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ರಾಜ್ಯದ ಪ್ರತಿಷ್ಠಿತ ತಂಡಗಳನ್ನು ಸೋಲಿಸುವುದರ ಮುಖಾಂತರ ರಾಜ್ಯ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

    ಕ್ರೀಡಾಕೂಟದಲ್ಲಿ ಕುಂದಾಪುರ-ಉಡುಪಿ ತಂಡವು ಗುಲ್ಬರ್ಗ, ಸಕಲೇಶಪುರ, ಗದಗ, ಬೆಳಗಾವಿ, ಯಾದಗೀರ್, ಬೆಂಗಳೂರು ತಂಡಗಳನ್ನು ಸೋಲಿಸಿ ಫೈನಲ್ ಹಂತಕ್ಕೆ ತಲುಪಿತ್ತು. ಈ ಪಂದ್ಯಾಟದಲ್ಲಿ ಕುಂದಾಪುರದ ವಕೀಲರಾದ ವಿಶ್ವನಾಥ ಶೆಟ್ಟಿ ಹಾಗೂ ಲಿಂಗಪ್ಪ ರವರುಗಳು ಪಂದ್ಯ ಪುರುಶೋತ್ತಮ ಪ್ರಶಸ್ತಿ ಮತ್ತು ಜಗದೀಶ ರಾವ್ ಉತ್ತಮ ಕ್ಷೇತ್ರ ರಕ್ಷಕ ಪ್ರಶಸ್ತಿ ಪಡೆದರು.

    ಜವಾಬ್ದಾರಿಯುತ ೬ ಓವರ್‌ಗಳ ಫೈನಲ್ ಪಂದ್ಯಾಟದಲ್ಲಿ ಬಲಿಷ್ಠ ಮೈಸೂರು ವಕೀಲರ ತಂಡದ ವಿರುದ್ಧ ೮೧ ರನ್‌ಗಳನ್ನು ಕುಂದಾಪುರ-ಉಡುಪಿ ತಂಡ ಕಲೆ ಹಾಕಿದ್ದು, ಉಡುಪಿ ವಕೀಲರಾದ ದಿವ್ಯೇಶ್ ಶೆಟ್ಟಿ ೪ ಸಿಕ್ಸರ್‌ಗಳು ಹಾಗೂ ಕುಂದಾಪುರದ ವಕೀಲರಾದ ಲಿಂಗಪ್ಪರವರು ೩ ಸಿಕ್ಸರ್‌ಗಳನ್ನು ಸಿಡಿಸಿದರು. ಜವಾಬ್ದಾರಿಯುತ ಆಟವಾಡಿದ ನಾಯಕ ರಾಘವೇಂದ್ರ ಚರಣ್ ಒಂದು ಸಿಕ್ಸರ್ ನೊಂದಿಗೆ ತಂಡವನ್ನು ಅಂತ್ಯದವರೆಗೆ ಆದರಿಸಿದರು. ಮಾರಕ ಬೌಲಿಂಗ್‌ನ್ನು ನಡೆಸಿದ ವಿಶ್ವನಾಥ ಶೆಟ್ಟಿ, ಜಗದೀಶ ರಾವ್ ಮತ್ತು ನಾಯಕ ಸಚಿನ್ ತಂಡದ ಗೆಲುವಲ್ಲಿ ಪ್ರಧಾನ ಪಾತ್ರವಹಿಸಿದರು.

    ಸಚಿನ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಲಿಂಗಪ್ಪ, ದಿವ್ಯೇಶ್ ಶೆಟ್ಟಿ ಹಾಗೂ ಜಗದೀಶ ರವರು ವೈಯಕ್ತಿಕ ಪ್ರಶಸ್ತಿಗಳಿಗೆ ಭಾಜನರಾದರು. ಮೈಸೂರು ತಂಡದ ಗೌತಮ ಮಂದಣ್ಣ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ರಾಘವೇಂದ್ರ ನಾವಡ ಹಾಗೂ ಸಚಿನ್ ರವರ ನೇತೃತ್ವದ ಕುಂದಾಪುರ-ಉಡುಪಿ ವಕೀಲರ ತಂಡ ಸಂಘಟಿತ ದಾಳಿ, ಬ್ಯಾಟಿಂಗ್ ಮತ್ತು ಕ್ಷೇತ್ರ ರಕ್ಷಣೆಯಲ್ಲಿ ಯಶಸ್ವಿಯಾಗಿ ಪ್ರಥಮ ಪ್ರಶಸ್ತಿಯನ್ನು ಪಡೆಯಿತು.

    Click here

    Click here

    Click here

    Call us

    Call us

    ಹಾಸನದ ಶಾಸಕರಾದ ಹೆಚ್ ಎಸ್ ಪ್ರಕಾಶ್, ಹಾಸನ ಜಿಲ್ಲಾ ಬಾರ್ ಅಸೋಸಿಯೇಶನ್ ಅಧ್ಯಕ್ಷರಾದ ಶ್ರೀ ಎಂ. ಡಿ. ವೆಂಕಟೇಶ್, ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಕಾನೂನು ಸೇವೆಗಳ ಪ್ರಾಧೀಕಾರದ ಸದಸ್ಯ ಕಾರ್ಯದರ್ಶಿ ವಿಜಯ್ ಕುಮಾರ್ ರೈ, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಭ್ಯರ್ಥಿ ಹಾಗೂ ಹಾಸನದ ನ್ಯಾಯವಾದಿ ಕೆ. ಪಿ. ಶೇಖರ್, ಹಾಸನ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್ ಎನ್ ರಾಜೀವ್, ಸ್ಪೋಟ್ಸ್ ಆಂಡ್ ರಿಕ್ರೀಯೇಷನ್ ಕ್ಲಬ್ ನ ಅಧ್ಯಕ್ಷರಾದ ಬಿ ಸಿ ನಟರಾಜ್ ಮುಂತಾದವರು ಉಪಸ್ಥಿತರಿದ್ದರು.

    ಉಡುಪಿ ಬಾರ್ ಅಸೋಸಿಯೇಶನ್ ಅಧ್ಯಕ್ಷರಾದ ಹೆಚ್. ರತ್ನಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಹೆಬ್ಬಾರ್ ಮತ್ತು ಕುಂದಾಪುರ ಬಾರ್ ಅಸೋಸಿಯೇಶನ್ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರವೀಶ್ಚಂದ್ರ ಶೆಟ್ಟಿ ಹಾಗೂ ಉಡುಪಿಯ ವಕೀಲರಾದ ದೇವರಾಜ್ ಶೆಟ್ಟಿಗಾರ್, ಗಣೇಶ್ ಮಟ್ಟು ಮತ್ತು ಚಂದ್ರರವರು ಕಾರ್ಯಕ್ರಮವನ್ನು ಆಯೋಜಿಸಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.