Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೀಜಾಡಿ ಮಿತ್ರ ಸಂಗಮದ ವಾರ್ಷಿಕೋತ್ಸವ: ರಫೀಕ್ ಬ್ಯಾರಿ ಅವರಿಗೆ ನಮ್ಮೂರ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಬೀಜಾಡಿ ಮಿತ್ರ ಸಂಗಮದ ವಾರ್ಷಿಕೋತ್ಸವ: ರಫೀಕ್ ಬ್ಯಾರಿ ಅವರಿಗೆ ನಮ್ಮೂರ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಕೃಷಿಯಲ್ಲಿ ಖುಷಿಯನ್ನು ಕಂಡವರಲ್ಲಿ ನಾನೂ ಒಬ್ಬ. ಕೃಷಿ ಮಾಡಬೇಕಾದರೆ ಎಕರೆಗಟ್ಟಲೆ ಭೂಮಿಯ ಅಗತ್ಯವಿಲ್ಲ.ಹತ್ತು ಸೆಂಟ್ಸ್ ಜಾಗದಲ್ಲಿಯೂ ಸಹ ಒಳ್ಳೆಯ ಕೃಷಿಯನ್ನು ಮಾಡಿ ಬದುಕು ನಡೆಸಬಹುದು. ಮಿತ್ರ ಸಂಗಮ ಸಂಸ್ಥೆ ಕೃಷಿಕನಾದ ನನ್ನನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿರುವುದು ನನಗೆ ಅತೀವ ಸಂತಸ ತಂದಿದೆ ಎಂದು ಮೂಡುಗೋಪಾಡಿಯ ಪ್ರಗತಿಪರ ಕೃಷಿಕ ರಫೀಕ್ ಬ್ಯಾರಿ ಹೇಳಿದರು.

    Click Here

    Call us

    Click Here

    ಅವರು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಬೀಜಾಡಿ ಗೋಪಾಡಿ ಮಿತ್ರ ಸಂಗಮದ 21ನೇಯ ವಾರ್ಷಿಕೋತ್ಸವದಲ್ಲಿ ಸಂಸ್ಥೆ ಕೊಡಮಾಡುವ ನಮ್ಮೂರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಗನ್ನಡದ ವಾಟ್ಸಪ್ ರಾಯಭಾರಿ ಮನು ಹಂದಾಡಿ ಮಾತನಾಡಿ,ಮಿತ್ರ ಸಂಗಮ ಅನ್ನ ನೀಡುವ ರೈತನನ್ನು ಸನ್ಮಾನಿಸಿ ಇತರ ಸಂಸ್ಥೆಗೆ ಮಾದರಿ ಎನಿಸಿದೆ. ಒಂದು ಸಂಸ್ಥೆ 21 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕಾದರೆ ಅದರ ಹಿಂದೆ ಒಂದಷ್ಟು ಸದಸ್ಯರ ಉತ್ಸಾಹ ಪೂರ್ಣವಾದ ದುಡಿಮೆ ಇದೆ ಎಂದರು.

    ಸಮಾರಂಭದ ಅಧ್ಯಕ್ಷತೆಯನ್ನು ಉದ್ಯಮಿ ಕೆ.ಆರ್.ನಾಯ್ಕ ವಹಿಸಿದ್ದರು.ಇದೇ ಸಂದರ್ಭದಲ್ಲಿ ಸ್ಥಳೀಯ ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕೃರ,ಬಡ ಕುಟುಂಬಕ್ಕೆ ಸೋಲಾರ್ ದೀಪ ಹಸ್ತಾಂತರ ನಡೆಯಿತು.

    ಸಂಸ್ಥೆಯ ಗೌರವಾಧ್ಯಕ್ಷ ಬಿ.ವಾದಿರಾಜ ಹೆಬ್ಬಾರ್ ಸ್ವಾಗತಿಸಿದರು.ಪ್ರದೀಪ ದೇವಾಡಿಗ,ಗಿರೀಶ್ ಕೆ.ಎಸ್. ಬಹುಮಾನಿತರ ಪಟ್ಟಿ,ಚಂದ್ರ ಬಿ.ಎನ್.ಸಂದೇಶ, ಕಾರ್ಯದರ್ಶಿ ಶ್ರೀಕಾಂತ್ ಭಟ್ ವರದಿ,ಅನೂಪ್‌ಕುಮಾರ್ ಬಿ.ಆರ್. ಸನ್ಮಾನ ಪತ್ರ ವಾಚಿಸಿದರು.ಸಂಸ್ಥೆಯ ಅಧ್ಯಕ್ಷ ಬಿ.ಜಿ.ನಾಗರಾಜ ವಂದಿಸಿದರು.ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು,ತೆಕ್ಕಟ್ಟೆ ಓಂಕಾರ ಕಲಾವಿದರಿಂದ ಡಿಸೆಂಬರ್-8 ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.