Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದುಮಗಳು ನಾಪತ್ತೆ. ಮದುವೆಯ ಮನೆಯಲ್ಲೀಗ ನೀರವ ಮೌನ
    ವಿಶೇಷ ವರದಿ

    ಮದುಮಗಳು ನಾಪತ್ತೆ. ಮದುವೆಯ ಮನೆಯಲ್ಲೀಗ ನೀರವ ಮೌನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಆ ಮನೆಯವರೆಲ್ಲಾ ಮದುವೆಯ ಸಂಭ್ರಮದಲ್ಲಿದ್ದರು. ಇನ್ನೇನು ಎರಡು ದಿನ ಕಳೆದರೆ ಮದುವೆ ನಡೆದು ಹೋಗುವುದಿತ್ತು. ಆದರೆ ಮದುಮಗಳು ಮಾತ್ರ ಏಕಾಏಕಿ ನಾಪತ್ತೆಯಾಗಿದ್ದಾಳೆ! ಮದುವೆಯ ಸಡಗರವಿರಬೇಕಿದ್ದ ಮನೆಯಲ್ಲೀಗ ಈಗ ನೀರವ ಮೌನ ಆವರಿಸಿಕೊಂಡಿದೆ. ಇತ್ತಕಡೆ ವಧುವಿನ ಪ್ರಿಯಕನಾಗಿರುವ ಅನ್ಯಕೋಮಿನ ಯುವಕನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ನಾಪತ್ತೆಯಾದವಳ ಸುಳಿವು ಮಾತ್ರ ಇನ್ನೂ ಲಭ್ಯವಾಗಿಲ್ಲ.

    Click Here

    Call us

    Click Here

    ಪ್ರಕರಣದ ವಿವರ:
    ಶಿರೂರು ಗ್ರಾಮದ ದೊಂಬೆಯ ಪಡಿಯಾರಹಿತ್ಲು ರಾಮಚಂದ್ರ ಎಂಬುವವರ ಪುತ್ರಿ ಮಮತಾ (24) ಎಂಬುವವರಿಗೆ ಮೇ.3ರಂದು ವರನೊಂದಿಗೆ ಮದುವೆ ನಿಶ್ಚಯವಾಗಿತ್ತು. ಆದರೆ ಮಮತಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ತನಗೆ ಈ ಮದುವೆ ಇಷ್ಟವಿಲ್ಲ. ತಾನು ಬೆರೋಬ್ಬರನ್ನು ಪ್ರೀತಿಸಿರುವುದಾಗಿ ಆಕೆ ಮನೆಯವರಲ್ಲಿ ತಿಳಿಸಿದ್ದಾಗ, ಮನೆಯವರು ಇದಕ್ಕೆ ಸಹಜವಾಗಿ ಪ್ರತಿರೋಧವೊಡ್ಡಿದ್ದರು. ಪ್ರೀತಿಸಿದ ಹುಡುಗನ್ನು ಮರೆತು, ಮನೆಯವರು ಗೊತ್ತುಪಡಿಸಿದ ಹುಡುಗನೊಂದಿಗೆ ವಿವಾಹವಾಗಲು ಒಪ್ಪಿಸಿದ್ದರು. ಮೊದಲು ಮನೆಯವರು ಒಪ್ಪಿದ ಹುಡುಗನೊಂದಿಗೆ ವಿವಾಹವಾಗಲು ಅರೆಸಮ್ಮತಿ ಸೂಚಿಸಿದ್ದ ಮಮತಾ ಮದುವೆ ದಿನ ಹತ್ತಿರವಿರುವಾಗ ಮತ್ತೆ ಕ್ಯಾತೆ ತೆಗೆದಿದ್ದಳು.

    ಎಪ್ರಿಲ್ 28ನೇ ತಾರೀಕಿನಂದು ಬೈಂದೂರು ಠಾಣೆಗೆ ಬಂದ ಮಮತಾ ತನಗೆ ಇಷ್ಟವಿಲ್ಲದ ಹುಡುನೊಂದಿಗೆ ಮನೆಯವರು ಒತ್ತಾಯದಿಂದ ಮದುವೆ ಮಾಡಿಸುತ್ತಿದ್ದಾರೆ. ಈ ವಿಚಾರವಾಗಿ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಳು. ತಾನು ಒಬ್ಬ ಹುಡುಗನನ್ನು ಪ್ರೀತಿಸುತ್ತಿದ್ದು ಆತನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಾಳೆ. ಬಳಿಕ ತನ್ನ ಪ್ರಿಯಕರನಿಗೂ ಪೋನ್ ಮಾಡಿ ಪೊಲೀಸ್ ಠಾಣೆಗೆ ಬರಹೇಳಿದ್ದಾಳೆ. ಪೊಲೀಸರು ಆಕೆಯ ಮನೆಯವರನ್ನು ಕರೆಯಿಸಿಕೊಂಡು ಅವರ ಸಮ್ಮುಖದಲ್ಲಿಯೇ ಹುಡುಗ ಹುಡುಗಿ ಇಬ್ಬರಿಗೂ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆ. ಮನೆಯಲ್ಲಿಯೂ ಇದೆ ವಿಚಾರಕ್ಕೆ ರಾದ್ದಾಂತ ನಡೆದಿತ್ತು ಎನ್ನಲಾಗಿದೆ. ತಂದೆ ಮರ್ಯಾದೆಗಂಜಿ ಆತ್ಮಹತ್ಯೆಯ ಪ್ರಯತ್ನವನ್ನೂ ಮಾಡಿದ್ದಾರೆನ್ನಲಾಗಿದೆ. ಒಂದು ದಿನ ಸುಮ್ಮನಾಗಿದ್ದ ಹುಡುಗಿ ಎಪ್ರಿಲ್ 30ರ ಬೆಳಿಗ್ಗೆ ಮನೆಯಿಂದ ಹೊರಗೆ ಹೊದವಳು ಮರಳಿ ಬಂದಿಲ್ಲ. ಸಂಜೆಯ ವರೆಗೆ ಸ್ನೇಹಿತರ ಮನೆಗೆ ಹೊಗಿರಬಹುದು ಎಂದು ತಿಳಿದಿದ್ದ ಮನೆಯವರು ರಾತ್ರಿಯಾದರೂ ಮಗಳು ಮನೆಗೆ ಬಾರದಿದ್ದುದರಿಂದ ಗಾಬರಿಗೊಂಡು ಕೆಲವು ಸಂಬಂಧಿ ಹಾಗೂ ಮಮತಾಳ ಸ್ನೇಹಿತೆಯರ ಮನೆಯಲ್ಲಿ ವಿಚಾರಿಸಿದ್ದಾರೆ. ಅಲ್ಲಿಯೂ ಇಲ್ಲದಿರುವುದು ಖಾತ್ರಿಯಾದಾಗ ಆಕೆಯ ಪ್ರೀಯಕರನೊಂದಿಗೆ ಹೋಗಿರಬೇಕೆಂದು ಅನುಮಾನಗೊಂಡು ಆಕೆಯ ಪ್ರಿಯಕರನ ವಿರುದ್ಧ ಮೇ.1ರ ಬೆಳಿಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಕೆ ಆರಂಭಿಸಿದ್ದು ಆಕೆಯ ಪ್ರಿಯಕರನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಆಕೆ ತನ್ನೊಂದಿಗೆ ಬಂದಿಲ್ಲ ಎಂದು ಹೇಳಿಕೊಂಡಿದ್ದಾನೆ. ವಿವಿಧ ಹಂತದಲ್ಲಿ ತನಿಕೆ ಮುಂದುವರಿಸಿರುವ ಬೈಂದೂರು ಪೊಲೀಸರು ಆಕೆಯ ಮನೆಯವರ ಹೇಳಿಕೆಗಳನ್ನು ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.

    ನಾಲ್ಕು ವರ್ಷದ ಪ್ರೀತಿ:
    ಕಾಣೆಯಾಗಿರುವ ಮಮತಾ ಹಾಗೂ ಸುಹೈಲ್ ಎಂಬಾತನೊಂದಿಗೆ ನಾಲ್ಕು ವರ್ಷಗಳಿಂದ ಪ್ರೀತಿ ಇತ್ತೆನ್ನಲಾಗಿದೆ. ಹುಡುಗ ಅನ್ಯ ಕೋಮಿನವನಾದ್ದರಿಂದ ಇಬ್ಬರ ಮನೆಯಲ್ಲೂ ತೀವ್ರ ವಿರೋಧವಿತ್ತು. ಹುಡುಗಿಯ ವಿರೋಧದ ನಡುವೆಯೂ ಬೇರೊಬ್ಬ ಹುಡುಗನೊಂದಿಗೆ ವಿವಾಹವನ್ನು ನಿಶ್ಚಯ ಮಾಡಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದ ಮಮತಾ ಎ.28ರಂದು ಠಾಣೆಗೆ ಬಂದು ತನ್ನ ಪ್ರೀತಿಯ ವಿಚಾರವನ್ನು ಹೇಳಿಕೊಂಡಿದ್ದಾಳೆ. ಪ್ರೇಮ ಪ್ರಕರಣ ಠಾಣೆ ಮಟ್ಟಿಲೇರಿ ಪೊಲೀಸರು ಬುದ್ಧಿವಾದ ಹೇಳಿದ ಬಳಿಕ ಪ್ರಿಯಕರನೂ ಆಕೆಯಿಂದ ದೂರವೇ ಉಳಿದಿದ್ದ ಎನ್ನಲಾಗಿದೆ.

    ಮದುವೆಯಾಗುವ ವರನೂ ಒಲ್ಲೆ ಎಂದ:
    ಇನ್ನೊಂದೆಡೆ ಮಮತಾಳ ಪ್ರೇಮ ಪ್ರಕರಣ ಠಾಣೆಯ ಮೇಟ್ಟಿಲೇರಿವುದು ತಿಳಿದ ವರ ಆಕೆಯನ್ನು ಮದುವೆಯಾಗಲು ನೀರಾಕರಿಸಿದ್ದ ಎಂಬ ಮಾತುಗಳೂ ಕೇಳಿ ಬಂದಿವೆ. ಅತ್ತ ಪ್ರಿಯಕರನೂ ಇಲ್ಲ. ಇತ್ತ ಮದುವೆಗೆ ನಿಶ್ಚಯವಾದ ವರನೂ ಇಲ್ಲ ಎಂಬಂತಾಗಿತ್ತು ಆಕೆಯ ಸ್ಥಿತಿ. ಇದರಿಂದ ಮಮತಾ ಮತ್ತಷ್ಟು ನೊಂದುಕೊಂಡಿದ್ದಳು.

    Click here

    Click here

    Click here

    Call us

    Call us

    ಏಲ್ಲಿ ಹೋದಳು ಮಮತಾ?
    ಎಪ್ರಿಲ್ 30ರಂದು ಮನೆಯಿಂದ ತೆರಳಿದ ಮಮತಾಳ ಸುಳಿವು ಈವರೆಗೆ ಪತ್ತೆಯಾಗಿಲ್ಲ. ಸ್ನೇಹಿತರು, ಸಂಬಂಧಿಗಳ ಮನೆಯಲ್ಲಿ ಇಲ್ಲ ಎಂಬುದು ಸದ್ಯಕ್ಕೆ ಖಾತ್ರಿಯಾಗಿದೆ. ಪ್ರಿಯಕರ ತನ್ನ ಬಳಿ ಬಂದಿಲ್ಲ ಎಂದು ಹೇಳಿಕೊಂಡಿದ್ದಾನೆ. ಆದರೆ ಈತನೇ ನಾಟಕವಾಡುತ್ತಿರಬಹುದೇ ಎಂಬ ಅನುಮಾನ ಕೂಡ ಕೆಲವರನ್ನು ಕಾಡುತ್ತಿದೆ. ಮನೆಬಿಟ್ಟ ತೆರಳಿದ ಯುವತಿ ತನ್ನ ಮೊಬೈಲನ್ನು ಮನೆಯಲ್ಲೇ ಇಟ್ಟು ತೆರಳಿದ್ದಾಳೆ, ಹಣ, ಚಿನ್ನವನ್ನು ಕೊಂಡೊಯ್ದಿಲ್ಲ. ಇದು ತನಿಕೆಯ ಹಾದಿ ತಪ್ಪಿಸುವ ಪ್ರಯತ್ನ ಇದ್ದಿರಬಹುದೇ, ನಿಶ್ಚಯವಾದ ಮದುವೆಯನ್ನು ತಪ್ಪಿಸುವ ಮಾಡಿದ ಕೆಲಸವೇ? ಅಥವಾ ಇನ್ಯಾವುದೋ ಅನಾಹುತಕ್ಕೆ ತೆರೆದುಕೊಂಡಳೇ? ಯಾವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d