Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಪುಟಾಣಿಗಳ ಪದವಿ ಪ್ರದಾನ ಸಮಾರಂಭ
    ಕ್ಯಾಂಪಸ್ ಕಾರ್ನರ್

    ಗುರುಕುಲ ಪುಟಾಣಿಗಳ ಪದವಿ ಪ್ರದಾನ ಸಮಾರಂಭ

    Updated:28/03/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಯುಕೆಜಿ ಮಕ್ಕಳ ಪದವಿ ಪ್ರದಾನ ಸಮಾರಂಭ ಮಂಗಳವಾರ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ರಶ್ಮಿ ಕುಂದಾಪುರ ಪ್ರೊಫೆಸರ್.ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ಮಂಗಳೂರು ಇವರು ಆಗಮಿಸಿದ್ದರು.

    Click Here

    Call us

    Click Here

    ಈ ಚಿಕ್ಕ ವಯಸ್ಸಿನಲ್ಲಿ ಮಕ್ಕಳು ಭಯವಿಲ್ಲದೇ ಎಲ್ಲರ ಮುಂದೆ ಬಂದು ತಮ್ಮ ವಿದ್ಯಾರ್ಥಿ ಜೀವನದ ಅನುಭವ ಹಂಚಿಕೊಳ್ಳುವುದು ನಿಜಕ್ಕೂ ಪ್ರಶಂಸನೀಯ. ಅದರಲ್ಲೂ ಅವರ ನಿಷ್ಕಲ್ಮಶ ನಗು ನಮ್ಮನ್ನು ಮೂಕವಿಸ್ಮಿತರನ್ನಾಗಿಸಿದೆ. ಅದೇ ರೀತಿ 5 ವರ್ಷದೊಳಗಿನ ಮಕ್ಕಳಿಗೆ ಬೇಕಿರುವುದು ಕೇವಲ ನಮ್ಮ ಪ್ರೀತಿ ಅದನ್ನು ಮಕ್ಕಳು ತಮ್ಮ ಮನೆಯ ಸದಸ್ಯರಿಂದ ಪಡೆಯಬಹುದು ಆದರೆ ಮಕ್ಕಳು ಶಾಲೆಗೆ ಬಂದಾಗ ಸಮಾಜದ ಜೊತೆ ಹೇಗೆ ಬೆರೆಯಬೇಕು ಎಂಬುವುದನ್ನು ಕಲಿಯುವುದರ ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ಹೊರ ಹಾಕಲು ಶಾಲೆ ಅವರಿಗೆ ವೇದಿಕೆಯನ್ನು ರೂಪಿಸುತ್ತದೆ. ನಂತರ 5ರಿಂದ 10 ವರ್ಷದ ಮಕ್ಕಳಿಗೆ ಪ್ರೀತಿಯ ಜೊತೆಗೆ ಶಿಸ್ತುಬದ್ದ ಜೀವನದ ಕುರಿತು ಸಮರ್ಪಕ ರೀತಿಯಲ್ಲಿ ಮಾಹಿತಿಕೊಟ್ಟಾಗ ಮುಂದೆ ಮಕ್ಕಳು ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಆ ನಿಟ್ಟಿನಲ್ಲಿ ಶಾಲಾ ಶಿಕ್ಷಕಿಯರ ಶ್ರಮವನ್ನು ಮೆಚ್ಚಲೇಬೇಕು. ಪ್ರತಿ ಮಗುವಿನ ಜನನದೊಂದಿಗೆ ತಂದೆ – ತಾಯಿಯರಿಗೂ ಕೂಡ ಮರುಜನ್ಮ ಸಿಕ್ಕ ಹಾಗೆ ಏಕೆಂದರೆ ಮಗುವಿನ ಬೆಳವಣಿಗೆಯ ಪ್ರತಿ ಹಂತದಲ್ಲಿ ಅವರು ಕೂಡ ಪ್ರತಿದಿನ ಹೊಸ ಹೊಸ ಅಧ್ಯಾಯಗಳನ್ನು ಕಲಿಯುತ್ತಾರೆ. ಇಂದು ಯುಕೆಜಿ ಪುಟಾಣಿಗಳಿಗೆ ಪದವಿ ಪ್ರದಾನ ನೀಡುವುದರರ್ಥ ಅವರ ಮುಂದಿನ ಶಿಸ್ತುಬದ್ಧ ಜೀವನಕ್ಕೆ ಅವರನ್ನು ಸಿದ್ಧರನ್ನಾಗಿ ಮಾಡುವುದು ಎಂದರ್ಥ. ಇಂದಿನ ಕಾರ್ಯಕ್ರಮದ ಮುಖ್ಯ ಉದ್ದೇಶ ಕೂಡ ಅದೇ ಎಂದು ಹೇಳುತ್ತಾ ಪುಟಾಣಿಗಳಿಗೆ ಶುಭ ಹಾರೈಸಿದರು.ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರುಕುಲ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕಿ ಅನುಪಮ.ಎಸ್.ಶೆಟ್ಟಿ ಮಕ್ಕಳಿಗೆ ಶುಭ ಹಾರೈಸಿ, ಒಂದು ಅರ್ಥಪೂರ್ಣಕಥೆಯೊಂದಿಗೆ ಪೋಷಕರಿಗೆ ಕಿವಿ ಮಾತು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಂಶುಪಾಲೆ, ಸುನಂದಾ ಪಾಟೀಲ್ , ಮುಖ್ಯ ಶಿಕ್ಷಕಿ ವಿಶಾಲಾಶೆಟ್ಟಿ ಹಾಗೂ ಎಲ್ಲಾ ಶಿಕ್ಷಕಿಯರು ಪೋಷಕರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಮಾ. ಪ್ರಥಮ್ ಸ್ವಾಗತಿಸಿದರು, ಕು.ಚಾರ್ವಿ ವಂದಿಸಿದರು ಹಾಗೂ ಕು. ಸನ್ನಿಧಿ ಮತ್ತು ಮಾ. ಇಲಾನ್ ಇಸ್ಮಾಯಿಲ್ ನಿರೂಪಿಸಿದರು.

     

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    3 × one =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.