Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಅಭಿಮತ’ ದಶಮ ಸಂಭ್ರಮ, ಜನಸೇವಾ ಟ್ರಸ್ಟ್ ಅನಾವರಣ
    ಊರ್ಮನೆ ಸಮಾಚಾರ

    ‘ಅಭಿಮತ’ ದಶಮ ಸಂಭ್ರಮ, ಜನಸೇವಾ ಟ್ರಸ್ಟ್ ಅನಾವರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಸೈನಿಕರು ನಮ್ಮ ದೇಶಕ್ಕಾಗಿ ಊರು, ಕುಟುಂಬಗಳನ್ನು ತ್ಯಜಿಸಿ ಸೇವೆ ಸಲ್ಲಿಸುತ್ತಾರೆ. ಅವರ ಕುಟುಂಬಗಳಿಗೆ ಸಮಸ್ಯೆಯಾದಗ ಅದನ್ನು ವಿಚಾರಿಸಲು ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಅಗತ್ಯ ಎಂದು ಕರ್ನಾಟಕ ಪಶ್ಚಿಮ ವಲಯ ಐ.ಜಿ.ಪಿ. ಅರುಣ್ ಚಕ್ರವರ್ತಿ ಹೇಳಿದರು.

    Click Here

    Call us

    Click Here

    ಅವರು ಮೂಡುಗಿಳಿಯಾರು ಹಿ.ಪ್ರಾ.ಶಾಲೆ ಮೈದಾನದಲ್ಲಿ ಪತ್ರಕರ್ತ ವಿಷ್ಣು ವಕ್ವಾಡಿ ವೇದಿಕೆಯಲ್ಲಿ ಜರಗಿದ ಗಿಳಿಯಾರು ಜನಸೇವಾ ಟ್ರಸ್ಟ್ ಅನಾವರಣ ಹಾಗೂ ಅಭಿಮತ ದಶಮಾನೋತ್ಸವ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಜನಸೇವಾ ಟ್ರಸ್ಟ್ ಈ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಯಶಸ್ವಿಯಾಗಲಿ ಹಾಗೂ ಸಮಾಜಮುಖಿ ಕಾರ‍್ಯದಲ್ಲಿ ಮುಂದುವರಿಯಲಿ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಪ್ರಸನ್ನ ಗಣಪತಿ ದೇಗುಲದ ಧರ್ಮದರ್ಶಿ ಬೆಳ್ಳಿಪಾಡಿ ಹರಿಪ್ರಸಾದ್ ರೈ ಮಾತನಾಡಿ, ವಸಂತ್ ಗಿಳಿಯಾರ್ ನೇತೃತ್ವದಲ್ಲಿ ಉದ್ಘಾಟನೆಗೊಂಡಿರುವ ಜನಸೇವಾ ಟ್ರಸ್ಟ್ ಮಾದರಿ ಸಂಸ್ಥೆಯಾಗಿ ರೂಪುಗೊಳ್ಳುತ್ತದೆ ಎನ್ನುವುದು ಉದ್ಘಾಟನೆಯ ಸಂದರ್ಭದಲ್ಲೇ ಕೈಗೊಂಡಿರುವ ಸಮಾಜಮುಖಿ ಕಾರ‍್ಯಗಳಿಂದ ತಿಳಿದುಬಂದಿದೆ ಎಂದರು.

    ದುಬೈನ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಟ್ರಸ್ಟ್ ಉದ್ಘಾಟಿಸಿ ಶುಭ ಹಾರೈಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಹಲವು ಮಂದಿ ಗಣ್ಯರು ಟ್ರಸ್ಟ್‌ಗೆ ಸಹಕಾರ ನೀಡುವುದಾಗಿ ಘೋಷಿಸಿದರು.

    ಕೀರ್ತಿ ಕಲಶ ಗೌರವ:
    ಈ ಸಂದರ್ಭ ಸುದ್ದಿವಾಹಿನಿಯ ನಿರೂಪಕ ರಾಘವೇಂದ್ರ ಕಾಂಚನ್, ಸಾಮಾಜಿಕ ಜಾಲತಾಣದ ಕುಂದಗನ್ನಡದ ಹೀರೋ ಮನು ಹಂದಾಡಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಸಿರಿ ಕಂಬಳದ ಸಾಧಕ ರಾಘವೇಂದ್ರ ಶೆಟ್ಟಿ ಹಂಡಿಕೆರೆ ಅವರಿಗೆ ಕೀರ್ತಿ ಕಲಶ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿತೇಶ ಕರ್ಕೇರ, ಶರತ್ ಶೆಟ್ಟಿ ಕೊತ್ತಾಡಿ, ಅನಿಕೇತ್ ಶೆಣೈ, ಶರತ್ ಆಚಾರ‍್ಯ, ಸ್ವಾತಿ ಶೆಟ್ಟಿ ಅವರನ್ನು ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ದೇರಳಕಟ್ಟೆ ಇಲ್ಲಿನ ವೈದ್ಯರ ತಂಡದಿಂದ ಆರೋಗ್ಯ ತಪಾಸಣೆ, ಗಿಳಿಯಾರು ದಿ| ಐತ ಪೂಜಾರಿ ಸ್ಮರಣಾರ್ಥ ನೇತ್ರದಾನಕ್ಕೆ ಹೆಸರು ನೋಂದಣಿ ಶಿಬಿರ. ರವಿ ಬಸ್ರೂರು ಸಾರಥ್ಯದ ಪ್ರತಿಭಾನ್ವೇಷಣೆ ಅಲ್ಬಮ್ ಬಿಡುಗಡೆ, ಸೆಲಿ ವಿದ್ ಅಮ್ಮ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೆರವು, ಬಡ ಕುಟುಂಬದ ವಿದ್ಯಾರ್ಥಿನಿಯ ದತ್ತು ಸ್ವೀಕಾರ, ಎಲ್ಲಾ ಪ್ರೇಕ್ಷಕರಿಗೆ ಸೀಡ್ ಬಾಲ್ ವಿತರಣೆ, ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆ, ಕಾವ್ಯಶ್ರೀ ಅಜೇರು ಇವರಿಂದ ಯಕ್ಷ ರಸಕಾವ್ಯ, ಝೀ ವಾಹಿನಿಯ ಸರಿಗಮಪ ಖ್ಯಾತಿಯ ಸಾನ್ವಿ ಶೆಟ್ಟಿಯಿಂದ ಸಂಗೀತ ಸುಧೆ, ಅಗಲಿದ ಸೈನಿಕರಿಗೆ ಶ್ರದ್ಧಾಂಜಲಿ ಮುಂತಾದ ಕಾರ್ಯಕ್ರಮ ನಡೆಯಿತು.

    ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಲಕ್ಷ್ಮಣ ನಿಂಬರ್ಗಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿಶ್ವಸ್ಥ ವಿವೇಕ ಆಳ್ವ, ಬ್ರಹ್ಮಾವರ ಪ್ರೆಸ್ ಕ್ಲಬ್‌ನ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ, ಬೆಂಗಳೂರು ಯೂನಿವರ್ಸಲ್ ಕೋಚಿಂಗ್ ಸೆಂಟರ್‌ನ ಆರ್. ಉಪೇಂದ್ರ ಶೆಟ್ಟಿ, ಮಂಗಳೂರು ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಡಾ| ಮಹಾಬಲೇಶ್ವರ ಶೆಟ್ಟಿ, ಮೊಗವೀರ ಮುಂದಾಳು ಸುರೇಶ ಕಾಂಚನ್, ಉದ್ಯಮಿ ಮರಾಠ ಸುರೇಶ ಶೆಟ್ಟಿ, ಮುಂಬೈ ಬಂಟರ ಸಂಘದ ಉಳ್ತೂರು ಮೋಹನ್‌ದಾಸ್ ಶೆಟ್ಟಿ, ಬಡಾಮನೆ ರತ್ನಾಕರ ಶೆಟ್ಟಿ, ಅಭಯ್ ಗ್ರೂಪ್‌ನ ಮಂದಾರ್ತಿ ಉಮೇಶ ಶೆಟ್ಟಿ, ಜೈ ಭಾರ್ಗವ ಬಳಗದ ರಾಜ್ಯಾಧ್ಯಕ್ಷ ಅಜಿತ್ ಶೆಟ್ಟಿ ಕಿರಾಡಿ, ಕರುಣಾ ಬೆಳಕು ಟ್ರಸ್ಟ್‌ನ ಕರುಣಾಕರ ಹೆಗ್ಡೆ ಆನಗಳ್ಳಿ ಉಪಸ್ಥಿತರಿದ್ದರು.

    ಟ್ರಸ್ಟ್‌ನ ಅಜಿತ್ ಶೆಟ್ಟಿ ಉಳ್ತೂರು ಸ್ವಾಗತಿಸಿ, ವಸಂತ್ ಗಿಳಿಯಾರ್ ಪ್ರಾಸ್ತಾವಿಕ ಮಾತನಾಡಿ, ಪತ್ರಕರ್ತ ಚಂದ್ರಶೇಖರ್ ಬೀಜಾಡಿ, ಆರ್.ಜೆ. ರೇವತಿ ಶೆಡ್ತಿ ಕಾರ್ಯಕ್ರಮ ನಿರೂಪಿಸಿ, ನಾಗರಾಜ್ ಶೆಟ್ಟಿ ನಾಕಂಬ್ಳಿ ವಂದಿಸಿದರು.

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಸೈನಿಕರು ನಮ್ಮ ದೇಶಕ್ಕಾಗಿ ಊರು, ಕುಟುಂಬಗಳನ್ನು ತ್ಯಜಿಸಿ ಸೇವೆ ಸಲ್ಲಿಸುತ್ತಾರೆ. ಅವರ ಕುಟುಂಬಗಳಿಗೆ ಸಮಸ್ಯೆಯಾದಗ ಅದನ್ನು ವಿಚಾರಿಸಲು ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಅಗತ್ಯ ಎಂದು ಕರ್ನಾಟಕ ಪಶ್ಚಿಮ ವಲಯ ಐ.ಜಿ.ಪಿ. ಅರುಣ್ ಚಕ್ರವರ್ತಿ ಹೇಳಿದರು.

    ಅವರು ಮೂಡುಗಿಳಿಯಾರು ಹಿ.ಪ್ರಾ.ಶಾಲೆ ಮೈದಾನದಲ್ಲಿ ಪತ್ರಕರ್ತ ವಿಷ್ಣು ವಕ್ವಾಡಿ ವೇದಿಕೆಯಲ್ಲಿ ಜರಗಿದ ಗಿಳಿಯಾರು ಜನಸೇವಾ ಟ್ರಸ್ಟ್ ಅನಾವರಣ ಹಾಗೂ ಅಭಿಮತ ದಶಮಾನೋತ್ಸವ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಜನಸೇವಾ ಟ್ರಸ್ಟ್ ಈ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಯಶಸ್ವಿಯಾಗಲಿ ಹಾಗೂ ಸಮಾಜಮುಖಿ ಕಾರ‍್ಯದಲ್ಲಿ ಮುಂದುವರಿಯಲಿ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಪ್ರಸನ್ನ ಗಣಪತಿ ದೇಗುಲದ ಧರ್ಮದರ್ಶಿ ಬೆಳ್ಳಿಪಾಡಿ ಹರಿಪ್ರಸಾದ್ ರೈ ಮಾತನಾಡಿ, ವಸಂತ್ ಗಿಳಿಯಾರ್ ನೇತೃತ್ವದಲ್ಲಿ ಉದ್ಘಾಟನೆಗೊಂಡಿರುವ ಜನಸೇವಾ ಟ್ರಸ್ಟ್ ಮಾದರಿ ಸಂಸ್ಥೆಯಾಗಿ ರೂಪುಗೊಳ್ಳುತ್ತದೆ ಎನ್ನುವುದು ಉದ್ಘಾಟನೆಯ ಸಂದರ್ಭದಲ್ಲೇ ಕೈಗೊಂಡಿರುವ ಸಮಾಜಮುಖಿ ಕಾರ‍್ಯಗಳಿಂದ ತಿಳಿದುಬಂದಿದೆ ಎಂದರು.

    ದುಬೈನ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಟ್ರಸ್ಟ್ ಉದ್ಘಾಟಿಸಿ ಶುಭ ಹಾರೈಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಹಲವು ಮಂದಿ ಗಣ್ಯರು ಟ್ರಸ್ಟ್‌ಗೆ ಸಹಕಾರ ನೀಡುವುದಾಗಿ ಘೋಷಿಸಿದರು.

    ಕೀರ್ತಿ ಕಲಶ ಗೌರವ:
    ಈ ಸಂದರ್ಭ ಸುದ್ದಿವಾಹಿನಿಯ ನಿರೂಪಕ ರಾಘವೇಂದ್ರ ಕಾಂಚನ್, ಸಾಮಾಜಿಕ ಜಾಲತಾಣದ ಕುಂದಗನ್ನಡದ ಹೀರೋ ಮನು ಹಂದಾಡಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಸಿರಿ ಕಂಬಳದ ಸಾಧಕ ರಾಘವೇಂದ್ರ ಶೆಟ್ಟಿ ಹಂಡಿಕೆರೆ ಅವರಿಗೆ ಕೀರ್ತಿ ಕಲಶ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿತೇಶ ಕರ್ಕೇರ, ಶರತ್ ಶೆಟ್ಟಿ ಕೊತ್ತಾಡಿ, ಅನಿಕೇತ್ ಶೆಣೈ, ಶರತ್ ಆಚಾರ‍್ಯ, ಸ್ವಾತಿ ಶೆಟ್ಟಿ ಅವರನ್ನು ಗೌರವಿಸಲಾಯಿತು.

    ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ದೇರಳಕಟ್ಟೆ ಇಲ್ಲಿನ ವೈದ್ಯರ ತಂಡದಿಂದ ಆರೋಗ್ಯ ತಪಾಸಣೆ, ಗಿಳಿಯಾರು ದಿ| ಐತ ಪೂಜಾರಿ ಸ್ಮರಣಾರ್ಥ ನೇತ್ರದಾನಕ್ಕೆ ಹೆಸರು ನೋಂದಣಿ ಶಿಬಿರ. ರವಿ ಬಸ್ರೂರು ಸಾರಥ್ಯದ ಪ್ರತಿಭಾನ್ವೇಷಣೆ ಅಲ್ಬಮ್ ಬಿಡುಗಡೆ, ಸೆಲಿ ವಿದ್ ಅಮ್ಮ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೆರವು, ಬಡ ಕುಟುಂಬದ ವಿದ್ಯಾರ್ಥಿನಿಯ ದತ್ತು ಸ್ವೀಕಾರ, ಎಲ್ಲಾ ಪ್ರೇಕ್ಷಕರಿಗೆ ಸೀಡ್ ಬಾಲ್ ವಿತರಣೆ, ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆ, ಕಾವ್ಯಶ್ರೀ ಅಜೇರು ಇವರಿಂದ ಯಕ್ಷ ರಸಕಾವ್ಯ, ಝೀ ವಾಹಿನಿಯ ಸರಿಗಮಪ ಖ್ಯಾತಿಯ ಸಾನ್ವಿ ಶೆಟ್ಟಿಯಿಂದ ಸಂಗೀತ ಸುಧೆ, ಅಗಲಿದ ಸೈನಿಕರಿಗೆ ಶ್ರದ್ಧಾಂಜಲಿ ಮುಂತಾದ ಕಾರ್ಯಕ್ರಮ ನಡೆಯಿತು.

    ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಲಕ್ಷ್ಮಣ ನಿಂಬರ್ಗಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿಶ್ವಸ್ಥ ವಿವೇಕ ಆಳ್ವ, ಬ್ರಹ್ಮಾವರ ಪ್ರೆಸ್ ಕ್ಲಬ್‌ನ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ, ಬೆಂಗಳೂರು ಯೂನಿವರ್ಸಲ್ ಕೋಚಿಂಗ್ ಸೆಂಟರ್‌ನ ಆರ್. ಉಪೇಂದ್ರ ಶೆಟ್ಟಿ, ಮಂಗಳೂರು ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಡಾ| ಮಹಾಬಲೇಶ್ವರ ಶೆಟ್ಟಿ, ಮೊಗವೀರ ಮುಂದಾಳು ಸುರೇಶ ಕಾಂಚನ್, ಉದ್ಯಮಿ ಮರಾಠ ಸುರೇಶ ಶೆಟ್ಟಿ, ಮುಂಬೈ ಬಂಟರ ಸಂಘದ ಉಳ್ತೂರು ಮೋಹನ್‌ದಾಸ್ ಶೆಟ್ಟಿ, ಬಡಾಮನೆ ರತ್ನಾಕರ ಶೆಟ್ಟಿ, ಅಭಯ್ ಗ್ರೂಪ್‌ನ ಮಂದಾರ್ತಿ ಉಮೇಶ ಶೆಟ್ಟಿ, ಜೈ ಭಾರ್ಗವ ಬಳಗದ ರಾಜ್ಯಾಧ್ಯಕ್ಷ ಅಜಿತ್ ಶೆಟ್ಟಿ ಕಿರಾಡಿ, ಕರುಣಾ ಬೆಳಕು ಟ್ರಸ್ಟ್‌ನ ಕರುಣಾಕರ ಹೆಗ್ಡೆ ಆನಗಳ್ಳಿ ಉಪಸ್ಥಿತರಿದ್ದರು.

    ಟ್ರಸ್ಟ್‌ನ ಅಜಿತ್ ಶೆಟ್ಟಿ ಉಳ್ತೂರು ಸ್ವಾಗತಿಸಿ, ವಸಂತ್ ಗಿಳಿಯಾರ್ ಪ್ರಾಸ್ತಾವಿಕ ಮಾತನಾಡಿ, ಪತ್ರಕರ್ತ ಚಂದ್ರಶೇಖರ್ ಬೀಜಾಡಿ, ಆರ್.ಜೆ. ರೇವತಿ ಶೆಡ್ತಿ ಕಾರ್ಯಕ್ರಮ ನಿರೂಪಿಸಿ, ನಾಗರಾಜ್ ಶೆಟ್ಟಿ ನಾಕಂಬ್ಳಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    eleven + five =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.