Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ. ನನಗೆ ರೈತರ ಕಷ್ಟಗಳ ಅರಿವಿದೆ: ಸಿ.ಎಂ. ಸಿದ್ಧರಾಮಯ್ಯ
    ಊರ್ಮನೆ ಸಮಾಚಾರ

    ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ. ನನಗೆ ರೈತರ ಕಷ್ಟಗಳ ಅರಿವಿದೆ: ಸಿ.ಎಂ. ಸಿದ್ಧರಾಮಯ್ಯ

    Updated:09/03/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ವಾರಾಹಿ ನೀರಾವರಿ ಯೋಜನೆಯ ಪ್ರಥಮ ಹಂತಹ ಕಾಮಗಾರಿ ಲೋಕಾರ್ಪಣೆ

    Click Here

    Call us

    Click Here

    ಸಿದ್ಧಾಪುರ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ನಮ್ಮ ಸರಕಾರ ಹೆಚ್ಚಿನ ಒತ್ತು ನೀಡಿದ್ದು ಅದರಲ್ಲಿ ವಾರಾಹಿ ಯೋಜನೆಯೂ ಸೇರಿದೆ. ಕೂಡ್ಲು ಸಂಗಮದ ಪಾದಯಾತ್ರೆ ಸಮಯದಲ್ಲಿ ನೀಡಿದ ವಾಗ್ದಾನದಂತೆ ಪ್ರತಿ ವರ್ಷ ನೀರಾವರಿ ಯೋಜನೆಗೆ 10 ಸಾವಿರ ಕೋಟಿ ಹಣವನ್ನು ವ್ಯಯಿಸುತ್ತಿದ್ದು, ಈ ಬಾರಿ ಮುಂಗಡ ಪತ್ರದಲಿ 12 ಸಾವಿರ ಕೋಟಿ ಹಣವನ್ನು ಮೀಸಲಿರಿಸಲಾಗಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

    ಅವರು ಹೊಳೆಶಂಕರನಾರಾಯಣ ವಾರಾಹಿ ನೀರಾವರಿ ಯೋಜನೆಯ ಪೂರ್ಣಗೊಂಡ ಪ್ರಥಮ ಹಂತದ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸಿದ್ಧಾಪುರದ ಫ್ರೌಡಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಮುಂದಿನ 2 ವರ್ಷಗಳಲ್ಲಿ ವಾರಾಹಿ ಯೋಜಯು ಸಂಪೂರ್ಣಗೊಳ್ಳಲಿದ್ದು, ಸುಮಾರು 40 ಸಾವಿರ ಎಕರೆ ಕೃಷಿ ಭೂಮಿಗೆ ನೀರುಣಿಸಲಿದೆ. ಈ ಬಗ್ಗೆ ಯಾರೂ ಕೂಡ ಸಂಶಯ ಹಾಗೂ ಆತಂಕ ಇಟ್ಟುಕೊಳ್ಳಬಾರದು ಎಂದರು.

    35 ವರ್ಷಗಳಿಂದ ಈ ವಾರಾಹಿ ಯೋಜನೆಯ ಬಗ್ಗೆ ಜನ ನಿರೀಕ್ಷೆಯನ್ನಿಟ್ಟುಕೊಂಡು ಕಾದಿದ್ದಾರೆ. ಕರಾವಳಿ ಭಾಗದ ಜನರು ಸಹನಶೀಲರು ಎಂಬುದಕ್ಕೆ ಇದೇ ಸಾಕ್ಷಿ. ಇಷ್ಟು ವರ್ಷಗಳ ಕಾಲ ನಿಷ್ಕ್ರಿಯವಾಗಿ ಉಳಿದಿದ್ದ ಯೋಜನೆಗೆ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮರುಜೀವ ನೀಡಿದ್ದು ಸುಮಾರು 60 ಶೇಖಡಾ ಕಾಮಗಾರಿಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದರು.

    Click here

    Click here

    Click here

    Call us

    Call us

    ರೈತರಿಗೆ ಮಾತ್ರ ರೈತರ ಕಷ್ಟ ಗೊತ್ತು
    ಸ್ವತಃ ವ್ಯವಸಾಯ ಮಾಡಿದವರಿಗೆ ರೈತರ ಕಷ್ಟವೇನು ಎಂಬುದು ಗೊತ್ತು. ಆದರೆ ರೈತರ ಕಷ್ಟಸುಖ ಗೊತ್ತಿಲ್ಲದವರು ಗಂಟೆಗಟ್ಟಲೆ ಮಾತನಾಡುತ್ತಾರೆ. ರೈತನೊಬ್ಬನ ಬಳಿ ಎಷ್ಟೇ ಜಮೀನಿದ್ದರೂ ಕೂಡ ಆತ ನಾಲ್ಕನೇಯ ದರ್ಜೆಯ ನೌಕರನಷ್ಟು ಸಂತೋಷವಾಗಿರುವುದಿಲ್ಲ. ನಾವುಗಳು ವ್ಯವಸಾಯ ಮಾಡಿದ್ದೇವೆ. ನಮಗೆ ರೈತರ ನೋವು ಅರ್ಥವಾಗುತ್ತದೆ. ಹಾಗಾಗಿ ಕೃಷಿ ಭೂಮಿಗಳಿಗೆ ನೀರು ನೀಡುವುದು ನಮ್ಮ ಮೊದಲ ಆದ್ಯತೆ ಎನ್ನುತ್ತಾ ಪರೋಕ್ಷವಾಗಿ ಮಣ್ಣಿನ ಮಕ್ಕಳ ಕುಟುಂಬದವರನ್ನು ಜಾಡಿಸಿದರು.

    ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಚಿಂತನೆ
    ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಮೊದಲ ಒಂದು ಸಮಿತಿಯನ್ನು ನೇಮಕ ಮಾಡಿ ಅದರ ಸಾಧಕ ಬಾಧಕಗಳನ್ನು ಚರ್ಚಿಸಿ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

    _MG_4422

    ವಿರೋಧ ಪಕ್ಷದವರ ಗೈರು
    ವಿರೋಧ ಪಕ್ಷದ ಯಾವೊಬ್ಬ ನಾಯಕರೂ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರುವುದನ್ನು ಟೀಕಿಸಿದ ಮುಖ್ಯಮಂತಿ ಸಿದ್ಧರಾಮಯ್ಯ, ಆರೋಪಗಳನ್ನು ಮಾಡುವವರು ನನ್ನ ಎದುರೇ ಆರೋಪ ಮಾಡಿದರೆ ಅಲ್ಲಿಯೇ ಉತ್ತರಿಸಲು ಸುಲಭವಾಗುತ್ತೆ. ಅದರ ಬದಲಿಗೆ ಎಲ್ಲಿಯೋ ಕುಳಿತು ಆರೋಪ ಮಾಡಿ ಸಮಯ ಹರಣ ಮಾಡುವುದು ಸರಿಯಲ್ಲ ಎಂದರು.

    ಗ್ರಾ.ಪಂ. ಚುನಾವಣೆಗಳನ್ನು ಮುಂದೂಡಿಲ್ಲ
    ಗ್ರಾಮ ಪಂಚಾಯತ್ ಚುನಾವಣೆಗಳನ್ನು ಮುಂದೂಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಆದರೆ ಚುನಾವಣೆಯನ್ನು ಮುಂದೂಡುವ ಪ್ರಶ್ನೆಯೇ ಇಲ್ಲ. ಬದಲಿಗೆ ಕಡ್ಡಾಯ ಮತದಾನ, ಗ್ರಾ.ಪಂ ಅಧ್ಯಕ್ಷರ ಅಧಿಕಾರಾವಧಿ ೫ವರ್ಷಕ್ಕೆ ಏರಿಕೆ, ಪುರುಷ ಮಹಿಳಾ ಮೀಸಲಾತಿಯನ್ನು ೫೦-೫೦ರಷ್ಟಕ್ಕೆ ತಿದ್ದುಪಡಿ ಮುಂತಾದ ಬದಲಾವಣಿಗಳನ್ನು ತರಲಾಗುತ್ತಿದೆ ಎಂದರು

    _MG_4549

    ನುಡಿದಂತೆ ನಡೆದ ಸರಕಾರ:
    ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ. ಚುನಾವಣೆಯ ವೇಳೆಯನ್ನು ಪ್ರನಾಳಿಕೆಯಲ್ಲಿ ನೀಡಿದ ೧೬೦ ಭರವಸೆಗಳಲ್ಲಿ ೧೦೦ ಭರವಸೆಗಳನ್ನು ಈಗಾಗಲೇ ಕಾರ್ಯರೂಪಕ್ಕೆ ತರಲಾಗಿದೆ. ಬಡವರು, ಹಿಂದುಳಿದ ವರ್ಗಗಳ ಜನರಿಗೆ ಸರಕಾರ ವಿವಿಧ ಯೋಜನೆಗಳನ್ನು ರೂಪಿಸುವುದರ ಮೂಲಕ ಅವರು ಸಮಾಜದಲ್ಲಿ ಸ್ವಾಭಿಮಾನ, ಗೌರವ, ಆರೋಗ್ಯಯುತವಾಗಿ ಬದುಕುವಂತೆ ಪ್ರೋತ್ಸಾಹಿಸಿದೆ ಎಂದರು.

    ಜಲಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ್ ಮಾತನಾಡಿ ಉಡುಪಿ ಜಿಲ್ಲೆಯ ಇತಿಹಾಸದಲ್ಲಿಯೇ ಇಂದು ಐತಿಹಾಸಿಕ ದಿನ. 560ಕೋಟಿ ರೂ. ವೆಚ್ಚದ ಕಾಮಗಾರಿಯ ಮೊದಲ ಹಂತವನ್ನು ಪೂರ್ಣಗೊಳಿಸಿ 216 ಹೆಕ್ಟೆರ್ ಭೂಮಿಗೆ ನೀರು ಹರಿಸುತ್ತಿದ್ದೇವೆ. ಒಟ್ಟಾರಿ 16 ಸಾವಿರ ಹೆಕ್ಟೆರ್ ಭೂಮಿಗೆ ನೀರು ಹರಿಸಲು ಮುಂದಿನ 2 ವರ್ಷಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದರು.

    ವಿವಿಧ ಯೋಜನೆಗಳ ಫಲಾನುಬಾವಿಗಳಿಗೆ ಸಾಂಕೇತಿಕವಾಗಿ ಸವಲತ್ತುಗಳನ್ನು ವಿತರಿಸಲಾಯಿತು, ವಿವಿಧ ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

    ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಚಂದ್ರ ಶೆಟ್ಟಿ, ಜಿ.ಪಂ ಸದಸ್ಯ ಮಮತಾ ಶೆಟ್ಟಿ, ತಾ.ಪಂ ಸದಸ್ಯರಾದ ರಾಜು ಪೂಜಾರಿ, ಕೊಲ್ಲೂರು ರಮೇಶ್ ಗಾಣಿಗ, ಜಿಲ್ಲಾಧಿಕಾರಿ ಡಾ. ವಿಶಾಲ ಕಾಂಗ್ರೆಸ್ ಮುಖಂಡ ಎಂ. ಎ. ಗಪೂರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕರಾರಿ ಎಂ ಕನಗವಲ್ಲಿ, ಕುಂದಾಪುರ ತಾಲೂಕು ಉಪವಿಭಾಗಾಧಿಕಾರಿ ಚಾರುಲತಾ, ತಹಶೀಲ್ದಾರದಾದ ಗಾಯತ್ರಿ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

    ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಆರ್. ರುದ್ರಯ್ಯ ಸ್ವಾಗತಿಸಿದರು.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.