Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೃಜನಶೀಲ ಮನಸುಗಳು ಒಂದಾಗಿರುವ ಲಾವಣ್ಯದಿಂದ ಸಮಾಜಕ್ಕೆ ಉತ್ತಮ ಸಂದೇಶ: ನರೇಂದ್ರ ಎಸ್.ಗಂಗೊಳ್ಳಿ
    ಊರ್ಮನೆ ಸಮಾಚಾರ

    ಸೃಜನಶೀಲ ಮನಸುಗಳು ಒಂದಾಗಿರುವ ಲಾವಣ್ಯದಿಂದ ಸಮಾಜಕ್ಕೆ ಉತ್ತಮ ಸಂದೇಶ: ನರೇಂದ್ರ ಎಸ್.ಗಂಗೊಳ್ಳಿ

    Updated:02/04/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಪ್ರಪಂಚದಲ್ಲಿ ಬಿಟ್ಟಿ ಸಲಹೆಗಳು ಬಹಳಷ್ಟು ಸಿಗುತ್ತದೆ. ಆದರೆ ನಮ್ಮ ಜೀವನಕ್ಕೆ ಅರ್ಥ ತುಂಬಬಲ್ಲ ಹಾಗೂ ಸ್ಪಷ್ಟವಾದ ಗುರಿ ತಲುಪಲು ಈ ಸಲಹೆಗಳು ಹೇಗೆ, ಎಷ್ಟು, ಮತ್ತು ಇದರಿಂದಾಗುವ ಒಳ್ಳೆಯ ಹಾಗೂ ಕೆಟ್ಟ ವಿಚಾರಗಳನ್ನು ನಿರ್ಧರಿಸಿ ಸಾಗುವುದು ಉತ್ತಮ ಎಂದು ಗಂಗೊಳ್ಳಿ ಎಸ್.ವಿ.ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ, ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು.

    Click Here

    Call us

    Click Here

    ಅವರು ಬೈಂದೂರಿನ ಲಾವಣ್ಯ ಆಶ್ರಯದಲ್ಲಿ ಇಲ್ಲಿನ ಶಾರದಾ ವೇದಿಕೆಯಲ್ಲಿ ನಡೆಯುತ್ತಿರುವ ರಂಗಪಂಚಮಿ -2018 ನಾಟಕೋತ್ಸವದ ಎರಡನೆಯ ದಿನದ ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದು ಮಾತನಾಡಿ ಟಿ.ವಿ ಮಾಧ್ಯಮದಲ್ಲಿ ಪ್ರಸಾರವಾಗುವ ಅಶ್ಲೀಲತೆ, ಅನೈತಿಕತೆಯಿಂದ ತುಂಬಿರುವ ಹಲವು ಧಾರಾವಾಹಿಗಳು ನಮ್ಮ ಸಂಸ್ಕೃತಿಗೆ ಪೂರಕವಾಗಿರುವುದಿಲ್ಲ. ಅವುಗಳನ್ನು ಕುಟುಂಬದ ಹಿರಿಯರು ಮಕ್ಕಳೊಡನೆ ಕುಳಿತು ನೋಡಲು ಆಗದು. ಮಕ್ಕಳ ಸೂಕ್ಷ್ಮ ಮನಸುಗಳ ಮೇಲೆ ಸದಾ ಕೆಡುಕನ್ನೇ ಪ್ರಚೋದಿಸುತ್ತಿರುವ ಧಾರಾವಾಹಿಗಳಿಂದ ಉತ್ತಮ ನಾಟಕಗಳತ್ತ ಆಕರ್ಷಿಸುವ ಮೂಲಕ ಅವರನ್ನು ವಿಮುಖಗೊಳಿಸಬೇಕು ಎಂದು ಸಲಹೆ ನೀಡಿದ ಅವರು ಸೃಜನಶೀಲ ಮನಸುಗಳು ಒಂದಾಗಿರುವ ಲಾವಣ್ಯ ತನ್ನ ಪ್ರೇಕ್ಷಕರಿಗೆ ಕಳೆದ 40 ವರ್ಷಗಳಿಂದ ಸದಾ ಶ್ರೇಷ್ಠವಾದುದನ್ನು ಕೊಡುವ ಗುರಿ ಇರಿಸಿಕೊಂಡು ಉತ್ತಮ ನಾಟಕಗಳ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುವ ಕೆಲಸಮಾಡುತ್ತಿದೆ. ಅದರ ಯಶಸ್ಸಿಗೆ ಈ ಅಂಶ ಪ್ರಮುಖ ಕಾರಣ ಎಂದರು.

    ಸಂಸ್ಥೆಯ ಗೌರವಾಧ್ಯಕ್ಷ ವಿ. ಆರ್. ಬಾಲಚಂದ್ರ ಅಧ್ಯಕ್ಷತೆ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಪಿ. ಸುಖಾನಂದ ಶೆಟ್ಟಿ, ವಿಷ್ಣು ಪಡಿಯಾರ್, ಧಾರ್ಮಿಕ ಮುಖಂಡ ಡಾ. ಕಾಶಿನಾಥ ಪೈ ಗಂಗೊಳ್ಳಿ, ಹಿರಿಯ ಪತ್ರಕರ್ತ ಶ್ರೀಪತಿ ಹೆಗ್ಡೆ ಹಕ್ಲಾಡಿ, ದಿನೇಶ ಗಾಣಿಗ, ಸದಾಶಿವ ಪಡುವರಿ, ಯು. ಶ್ರೀನಿವಾಸ ಪ್ರಭು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಸದಸ್ಯ ಕಲಾವಿದ ಎನ್. ನಾಗರಾಜ ಶೆಟ್ಟಿ, ಪಿ. ವಿಶ್ವನಾಥ ಶೆಟ್ಟಿ,ನಾರಾಯಣ ಕೆ, ಸುನಿಲ್‌ಕುಮಾರ್, ಬಾಲಕೃಷ್ಣ ಬೈಂದೂರು, ದಿನಕರ ಹೋಬಳಿದಾರ್ ರವರನ್ನು ಸಮ್ಮಾನಿಸಲಾಯಿತು.

    Click here

    Click here

    Click here

    Click Here

    Call us

    Call us

    ಸಂಸ್ಥೆಯ ಅಧಕ್ಷ ಗಿರೀಶ ಬೈಂದೂರು ಸ್ವಾಗತಿಸಿದರು.ಮಂಜುನಾಥ ಶಿರೂರು ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಮೋಹನ್ ಕಾರಂತ್ ವಂದಿಸಿದರು

    ಸಭಾ ಕಾರ್ಯಕ್ರಮದ ಬಳಿಕ ಮಂಗಳೂರಿನ ನಂದಗೋಕುಲ ಕಲಾವಿದೆಯರು ಪು.ತಿ. ನರಸಿಂಹಾಚಾರ್ ವಿರಚಿತ ಹಾಗೂ ವಿದ್ದು ಉಚ್ಚಿಲ್ ನಿರ್ದೇಶಿಸಿದ ಗೋಕುಲ ನಿರ್ಗಮನ ನೃತ್ಯ ನಾಟಕ ಪ್ರಸ್ತುತಪಡಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    five × two =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.