Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ: ಶ್ರೀ ಲಕ್ಷ್ಮೀವೆಂಕಟರಣ ದೇವರ ಪುನರ್‌ಪ್ರತಿಷ್ಟೆ
    ಊರ್ಮನೆ ಸಮಾಚಾರ

    ಉಪ್ಪುಂದ: ಶ್ರೀ ಲಕ್ಷ್ಮೀವೆಂಕಟರಣ ದೇವರ ಪುನರ್‌ಪ್ರತಿಷ್ಟೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಅಕ್ಷಯತೃತೀಯದ ಶುಭದಿನ ಉಪ್ಪುಂದ ಜಿಎಸ್‌ಬಿ ಸಮಾಜ ಬಾಂಧವರ ಶ್ರೀ ಲಕ್ಷ್ಮೀವೆಂಕಟರಣ ದೇವರ ಪುನರ್‌ಪ್ರತಿಷ್ಟೆ ದೇವಳದ ಪರ್ಯಾಯ ಅರ್ಚಕ ಹರೀಶ್ ಭಟ್ ನೇತೃತ್ವದಲ್ಲಿ ವೈಭವದಿಂದ ಜರುಗಿತು.

    Click Here

    Call us

    Click Here

    ಎ.15ರ ಮೇಷ ಸಂಕ್ರಂತಿಯಂದು ದೇವರ ಪ್ರಾರ್ಥನೆಯೊಂದಿಗೆ ಚೋರಶಾಂತಿ, ಶ್ವಾನಶಾಂತಿ, ಗರ್ಭಗೃಹಶುದ್ದಿಯಿಂದ ಆರಂಭಗೊಂಡ ಧಾರ್ಮಿಕ ವಿಧಿಗಳು ಎ.16ರ ಸೋಮವತಿ ಅಮಾವಾಸ್ಯೆಯಂದು ಪಂಚಗವ್ಯ ಹವನ, ಪವಮಾನ ಪಾರಾಯಣ, ಪ್ರಾಯಶ್ಚಿತ ಹವನ, ಶುದ್ಧಕಲಶ, ರಾಕ್ಷೋಘ್ನಹವನ, ವಾಸ್ತುಹವನ, ವಾಸ್ತುಬಲಿ, ಪ್ರಾಕಾರಬಲಿ ನಡೆಯಿತು. ಎ.17ರಂದು ನವಗೃಹಹವನ, ಗರ್ಭಗೃಹ ಪೀಠಕ್ಕೆ ನವಕಲಶ, ಗಣಪತಿಹವನ, ದ್ವಾದಶಕಲಶ ಸಂಪ್ರೋಕ್ಷಣೆ, ವಿಗ್ರಹಗಳ ಸಪ್ತಾಧಿವಾಸ ಪೂಜೆ, ಕಲಶಾಭಿಷೇಕ ನಡೆಯಿತು. ಬುಧವಾರ ಸುಪ್ರಭಾತ ಪೂಜೆ, ನಿಲಂಜನ ಆರತಿ, ಸಾನಿಧ್ಯಹವನ, 108 ಕಲಶಾಭಿಷೇಕ, ಸಾನಿಧ್ಯಹವನ, ಪೂರ್ಣಾಹುತಿಯೊಂದಿಗೆ ಶ್ರೀ ಲಕ್ಷ್ಮೀವೆಂಕಟರಮಣ ದೇವರ ಪುನರ್‌ಪ್ರತಿಷ್ಟೆ ನಡೆಯಿತು. ರಾತ್ರಿ ದೀಪೋತ್ಸವ, ಅವಭೃತಸ್ನಾನ, ವಸಂತಪೂಜೆ ಜರುಗಿತು.

    ಶ್ರೀಲಕ್ಷ್ಮೀವೆಂಕಟರಮಣ ಟ್ರಸ್ಟ್‌ನ ಅಧ್ಯಕ್ಷ ದಾಮೋದರ ಶೆಣೈ, ಕಾರ್ಯದರ್ಶಿ ಯು. ಪಾಂಡುರಂಗ ಪಡಿಯಾರ್ ಹಾಗೂ ಟ್ರಸ್ಟಿನ ಸದಸ್ಯರ ಮಾರ್ಗದರ್ಶನದಿಂದ ನಡೆದ ಕಾರ್ಯಕ್ರಮಕ್ಕೆ ಊರ-ಪರವೂರ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉತ್ಸವದ ಯಶಸ್ಸಿಗೆ ಸಹಕರಿಸಿದರು.

    ಈ ದೇವಸ್ಥಾನದಲ್ಲಿ ಎ.16 ರಂದು ಗರ್ಭಗುಡಿಯ ಹೊರಗಿನ ಹಾಗೂ ಗರ್ಭಗುಡಿಯ ಬಾಗಿಲನ್ನು ಆಯುಧಗಳಿಂದ ಮೀಟಿ ತೆಗೆದು ಅಲ್ಲಿರುವ ಬೆಳ್ಳಿ ಕವಚ ಹೊಂದಿರುವ ದೇವರ ಮೂರ್ತಿ, ಎರಡು ಪ್ರಭಾವಳಿ, ಬೆಳ್ಳಿಯ ಪರಿಕರಗಳು, ಚಿನ್ನಾಭರಣಗಳನ್ನು ಕಳ್ಳರು ದೋಚಿದ್ದರು. ದೇವಳದ ಹಿಂದಿರುವ ಮರ್ಲಮ್ಮಬೆಟ್ಟು (ದೈವದಮನೆ) ಎಂಬಲ್ಲಿ ದೇವರ ಪೀಠ, ಬೆಳ್ಳಿ ಕವಚ ರಹಿತ ದೇವರ ಚಂದನ ಮೂರ್ತಿ, ಅಲ್ಲಿಂದ ಸ್ವಲ್ಪ ದೂರದಲ್ಲಿ ಒಂದು ಬೆಳ್ಳಿಯ ಪ್ರಭಾವಳಿ ಹಾಗೂ ಇತರೇ ಸ್ವಲ್ಪ ಬೆಳ್ಳಿಯ ಪರಿಕರಗಳು ಸಿಕ್ಕಿದ್ದು, ಇನ್ನೂ ಸುಮಾರು 12,72,500 ರೂ. ಮೌಲ್ಯದ 25 ಕೆಜಿ ಬೆಳ್ಳಿ ಹಾಗೂ ಚಿನ್ನಾಭರಣಗಳು ಪತ್ತೆಯಾಗಬೇಕಿದೆ.

     

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.