Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ: ಕಡಲ ಕೊರೆತದಿಂದ ರಸ್ತೆ ಹಾನಿ
    ಊರ್ಮನೆ ಸಮಾಚಾರ

    ಮರವಂತೆ: ಕಡಲ ಕೊರೆತದಿಂದ ರಸ್ತೆ ಹಾನಿ

    Updated:23/04/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಮರವಂತೆಯ ಸಮುದ್ರದಲ್ಲಿ ಭಾನುವಾರ ಮಧ್ಯಾಹ್ನದ ಬಳಿಕ ತೀವ್ರ ಗಾತ್ರದ ಉಬ್ಬರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವುದರಿಂದ ಮೀನುಗಾರರ ಮನೆಗಳಿಗೆ ಅಪಾಯ ಉಂಟಾಗಿದೆ. ನಿರ್ಮಾಣ ಹಂತದಲ್ಲಿರುವ ಮೀನುಗಾರಿಕಾ ಹೊರಬಂದರಿನ ಎರಡು ತಡೆಗೋಡೆಗಳ ನಡುವಿನ ಪ್ರದೇಶದಲ್ಲಿರುವ ಕರಾವಳಿ ಮಾರ್ಗದ ಒಂದು ಕಡೆ ಕೊರೆತ ಉಂಟಾಗಿದ್ದು, ರಸ್ತೆ ಕಡಿದು ಹೋಗುವ ಹಂತದಲ್ಲಿದೆ. ಅಲೆಗಳು ಚೆಲ್ಲುವ ನೀರು ರಸ್ತೆಯನ್ನು ದಾಟಿ ವಸತಿ ಪ್ರದೇಶಕ್ಕೆ ನುಗ್ಗುತ್ತಿದೆ. ಆ ಪ್ರದೇಶದಲ್ಲಿರುವ ಬುದ್ಧಿವಂತ ಮಂಜುನಾಥ ಖಾರ್ವಿ, ಸುಬ್ರಹ್ಮಣ್ಯ ಖಾರ್ವಿ, ಅಣ್ಣಪ್ಪ ಖಾರ್ವಿ, ಶೇಷಿ ಖಾರ್ವಿ ಮತ್ತು ಬೊಬ್ಬರ್ಯನಕೊಡಿ ರಾಮಚಂದ್ರ ಖಾರ್ವಿ ಮನೆಯ ಅಂಗಳಕ್ಕೆ ನೀರು ಹರಿಯುತ್ತಿದೆ. ಇದರಿಂದ ಮನೆಯಲ್ಲಿ ರಾತ್ರಿ ಕಳೆಯುವುದು ಅಪಾಯಕಾರಿ ಆದುದರಿಂದ ನೆರೆಹೊರೆಯವರ ಸಹಾಯದಿಂದ ಮನೆಯವರನ್ನು ಮತ್ತು ಸಾಮಗ್ರಿಗಳನ್ನು ಅನ್ಯರ ಮನೆಗೆ ಸ್ಥಳಾಂತರಿಸಲಾಗುತ್ತಿದೆ. ರಸ್ತೆ ಪೂರ್ತಿಯಾಗಿ ಕಡಿದುಹೋದಲ್ಲಿ ಹಲವು ಮನೆಗಳಿಗೆ ಅಪಾಯ ತಟ್ಟಲಿದೆ.

    Click Here

    Call us

    Click Here

    ಸುದ್ದಿ ತಿಳಿದು ಬಿ. ಎಂ. ಸುಕುಮಾರ ಶೆಟ್ಟಿ, ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ಜಗದೀಶ ಪೂಜಾರಿ , ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಆರ್. ಕೆ. ಸ್ಥಳಕ್ಕೆ ಭೇಟಿ ನೀಡಿದರು. ಗೋಪಾಲ ಪೂಜಾರಿ ಜಿಲ್ಲಾಧಿಕಾರಿ, ಕುಂದಾಪುರದ ಉಪ ವಿಭಾಗಾಧಿಕಾರಿ, ಬೈಂದೂರು ತಹಶೀಲ್ದಾರ್, ಬಂದರು ಮತ್ತು ಮೀನುಗಾರಿಕಾ ಇಂಜಿನಿಯರ್ ಅವರನ್ನು ಸಂಪರ್ಕಿಸಿ ತುರ್ತು ರಕ್ಷಣಾ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ಪುರಂಧರ ಹೆಗ್ಡೆ ಇಂಜಿನಿಯರ್ ಅವರನ್ನು ಕರೆಸಿ ತಾವೂ ಸ್ಥಳದಲ್ಲಿದ್ದು ತುರ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಪರಮೇಶ್ವರ ಗುನಗ, ತ್ರಾಸಿ ಎಸ್‌ಐ ಮಧು ಟಿ.ಎಂ ಮತ್ತು ಸಿಬ್ಬಂದಿ ಕೂಡ ಬಂದಿದ್ದು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ಅಗತ್ಯ ಎನಿಸಿದರೆ ಅಗ್ನಿ ಶಾಮಕ ದಳವನ್ನು ಕರೆಸಿಕೊಳ್ಳುವುದಾಗಿ ತಿಳಿಸಿದರು.

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಕಾರಣ ಸಮುದ್ರ ಪ್ರಕ್ಷುಬ್ಧ ಆಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಉಬ್ಬರ ನಾಳೆಯೂ ಮುಂದುವರಿಯಲಿದೆ ಎಂದು ಮೀನುಗಾರರಿಗೆ ಬಂದ ಮುನ್ನೆಚ್ಚರಿಕೆ ಸಂದೇಶ ತಿಳಿಸಿದೆ.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    12 − 8 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.