Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಕ್ವಾಡಿ ಗುರುಕುಲದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಚೆಸ್ ಪಂದ್ಯಾವಳಿ ಸಂಪನ್ನ
    ಕ್ಯಾಂಪಸ್ ಕಾರ್ನರ್

    ವಕ್ವಾಡಿ ಗುರುಕುಲದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಚೆಸ್ ಪಂದ್ಯಾವಳಿ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಬೌದ್ಧಿಕ ಶಕ್ತಿ ಮತ್ತು ಭಾವನಾತ್ಮಕ ಮನೋಧರ್ಮ ಒಬ್ಬ ವ್ಯಕ್ತಿಯ ಸರ್ವಾಂಗೀಣ ವಿಕಾಸಕ್ಕೆ ಪ್ರಮುಖ ಅಂಶಗಳಾಗಿದೆ. ಚದುರಂಗ ಆಟವಾಡುವುದರಿಂದ ಬೌದ್ಧಿಕ ವಿಕಾಸ, ಸಂಯಮ, ತಾಳ್ಮೆ ಮತ್ತು ತಾರ್ಕಿಕ ಯೋಚನೆಗಳನ್ನು ಹೆಚ್ಚಿಸಿಕೊಳ್ಳಲು ಸಹಾಯಕವಾಗುತ್ತದೆ. ಬೆಳೆಯುವ ವಿದ್ಯಾರ್ಥಿಗಳಲ್ಲಿ ಚದುರಂಗ ಕ್ರೀಡೆ ಆಡುವುದರ ಕುರಿತು ಪ್ರೋತ್ಸಾಹ ನೀಡಬೇಕು ಎಂದು ಅಂತರಾಷ್ಟ್ರೀಯ ಚೆಸ್ ತರಬೇತುದಾರರಾದ ಡೆರಿಕ್ ಪಿಂಟೋ ರವರರು ಗುರುಕುಲ ವಿದ್ಯಾಸಂಸ್ಥೆ ವಕ್ವಾಡಿಯಲ್ಲಿ ನಡೆದ ರಾಜ್ಯಮಟ್ಟದ ಪ್ರಥಮ ಹೊನಲು ಬೆಳಕಿನ ಚೆಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಂಡ್ಯ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ .ಬಸ್ರೂರು ಅಪ್ಪಣ್ಣ ಹೆಗ್ಡೆರವರು ವಹಿಸಿದ್ದರು.

    Click Here

    Call us

    Click Here

    ಕರ್ನಾಟಕದ ಪ್ರಪ್ರಥಮ ಹಾಗೂ ಅಂತರಾಷ್ಟ್ರೀಯ ಗ್ರ್ಯಾಂಡ್ ಮಾಸ್ಟರ್ ತೇಜ್‌ಕುಮಾರ್ ಎಮ್.ಎಸ್ ಸಾಂಪ್ರದಾಯಿಕ ರಾಟೆ ಎಳೆಯುವುದರ ಮೂಲಕ ಆಕರ್ಷಕ ಬಹುಮಾನಗಳನ್ನು ಮತ್ತು ಪ್ರಶಸ್ತಿ ಪತ್ರಗಳನ್ನು ಉದ್ಘಾಟನೆ ಮಾಡಿದರಲ್ಲದೇ ತಮ್ಮ ಚದುರಂಗ ಆಟದ ಅನುಭವಗಳನ್ನು ವಿವರಿಸಿದರು. ಈ ಬಹುಮಾನ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಚಿನ್ಮಯಿ ಆಸ್ಪತ್ರೆಯ ನಿರ್ದೇಶಕರಾದ ಡಾ.ಉಮೇಶ್ ಪುತ್ರನ್ ರವರು ಚದುರಂಗ ಮತ್ತು ವೈಜ್ಞಾನಿಕತೆ ಎಂಬ ವಿಷಯದ ಕುರಿತು ಮಾತನಾಡಿದರಲ್ಲದೇ ಗುರುಕುಲ ವಿದ್ಯಾಸಂಸ್ಥೆಯ ಈ ಕಾರ್ಯಕ್ರಮವನ್ನು ಶ್ಲಾಘೀಸಿದರು.

    ಈ ಪಂದ್ಯಾಟವು ಕ್ರಮವಾಗಿ ಅಂಡರ್ 8,10,12,15 ಹಾಗೂ ಒಪನ್ ಎನ್ನುವ ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ರಾಜ್ಯದ ನಾನಾಭಾಗಗಳಿಂದ ೩೦೦ ಕ್ಕಿಂತಲೂ ಹೆಚ್ಚು ಸ್ಪರ್ಧಾಳುಗಳು ಆಗಮಿಸಿದ್ದರು. ಮುಖ್ಯ ನಿರ್ಣಾಯಕರಾಗಿ ವಸಂತ್ ಬಿ.ಎಚ್ ರವರು ಪಂದ್ಯಾವಳಿಯನ್ನು ಯಾವುದೇ ಗೊಂದಲಗಳಿಲ್ಲದೇ ನಡೆಸಿದರು ಹಾಗೂ ವಿಜೇತರ ಹೆಸರುಗಳನ್ನು ಘೋಷಿಸಿದರು. ಈ ಬಹುಮಾನ ವಿತರಣಾ ಸಮಾರಂಭದ ಅತಿಥಿಯಾಗಿ ಕರ್ನಾಟಕ ಚೆಸ್ ಅಸೋಸಿಯೆಶನ್‌ದ ಕಾರ್ಯದರ್ಶಿಗಳಾದ ಅರವಿಂದ್ ಶಾಸ್ತ್ರಿ ಉಪಸ್ಥಿತರಿದ್ದರು.

    ಈ ಕಾರ್ಯಕ್ರಮದಲ್ಲಿ ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರುಗಳಾದ ಕೆ. ಸುಭಾಶ್ಚಂದ್ರ ಶೆಟ್ಟಿ ಹಾಗೂ ಅನುಪಮ.ಎಸ್.ಶೆಟ್ಟಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಲ್ಲಿ ಚದುರಂಗದ ಬಗ್ಗೆ ಇರುವ ಆಸಕ್ತಿಯ ಬಗ್ಗೆ ಪ್ರಶಂಸಿಸಿದರು ಹಾಗೂ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಪುರಸ್ಕರಿಸಿದರು. ಖ್ಯಾತ ಆರ್‌ಜೆ ನಯನ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರುಗಳು ಈ ಕಾರ್ಯಕ್ರಮದ ಯಶಸ್ಸಿಗೆ ವಿಶೇಷವಾಗಿ ಸಹಕರಿಸಿದ ಕಶ್ವಿ ಚೆಸ್ ಕುಂದಾಪುರ ಹಾಗೂ ಪ್ರೋತ್ಸಾಹಿಸಿದ ಯು.ಕೆ.ಸಿ.ಎ ಮತ್ತು ಉಡುಪಿ ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಶನ್‌ರವರನ್ನು ಸ್ಮರಿಸಿದರು.

     

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    06/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d