Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೀನುಗಾರರಿಗೆ ನೆರವಾಗಲಿದೆ ಬಿಜೆಪಿ ಆಡಳಿತ: ಯೋಗಿ
    ಊರ್ಮನೆ ಸಮಾಚಾರ

    ಮೀನುಗಾರರಿಗೆ ನೆರವಾಗಲಿದೆ ಬಿಜೆಪಿ ಆಡಳಿತ: ಯೋಗಿ

    Updated:11/05/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಮೀನುಗಾರರ ಕಲ್ಯಾಣಕ್ಕೆ ಈವರೆಗೆ ಯಾವೊಂದೂ ಕಾರ್ಯಕ್ರಮ ಹಾಕಿಕೊಳ್ಳದ ಕಾಂಗ್ರೆಸ್‌ ಸರಕಾರವನ್ನು ಅಧಿಕಾರದಿಂದ ಇಳಿಸಿ. ಕರಾವಳಿ ತೀರದಲ್ಲಿ ಬಂದರು ಸ್ಥಾಪನೆ ಮಾಡುವ ಮೂಲಕ ಯುವಕರಿಗೆ, ಮೀನುಗಾರರಿಗೆ, ವ್ಯಾಪಾರಸ್ಥರಿಗೆ, ಪ್ರವಾಸೋದ್ಯಮಕ್ಕೆ ನೆರವಾಗಲು ಬಿಜೆಪಿ ಆಡಳಿತ ಬರುವಂತೆ ಮಾಡಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದರು. ಅವರು ತ್ರಾಸಿಯಲ್ಲಿ ಮಂಗಳವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಂ. ಸುಕುಮಾರ ಶೆಟ್ಟಿ ಅವರ ಪರವಾಗಿ ಮತಯಾಚಿಸಿ ಮಾತನಾಡಿದರು.

    Click Here

    Call us

    Click Here

    ರಾಮ ವನವಾಸಕ್ಕೆ ಹೋಗುವಾಗ ಆತನ ಜತೆಗಿದ್ದುದು ಮೀನುಗಾರ ನಿಷಧರಾಜ ಹಾಗೂ ಕರ್ನಾಟಕದಲ್ಲಿ ಜನಿಸಿದ ಅಂಜನಿಪುತ್ರ ಹನೂಮಂತ. ಅಂತಹ ರಾಮಾಯಣದ ಆದರ್ಶಗಳನ್ನು ಹೊಂದಿದ ರಾಜ್ಯ ಇದು. ಆದರೆ ಇಲ್ಲಿ ಕಾಂಗ್ರೆಸ್‌ನ ತುಷ್ಟೀಕರಣ ನೀತಿಯಿಂದ ಜನ ಬೇಸತ್ತಿದ್ದಾರೆ. ಹಿಂದೂಗಳ , ಬಿಜೆಪಿ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಈ ಮೂಲಕ ಕಾಂಗ್ರೆಸ್‌ ಸರಕಾರ ಜೆಹಾದಿ ಆಡಳಿತ ಮಾಡುತ್ತಿದೆ. ಹಿಂದೂ ಹೃದಯ ಸಾಮ್ರಾಟ ಶಿವಾಜಿ ಆದರ್ಶವಾಗುವ ಬದಲು ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ಮೂಲಕ ಸರಕಾರ ಬಹುಸಂಖ್ಯಾಕ‌ರನ್ನು ನಿರ್ಲಕ್ಷಿಸಿದೆ. ಜನರಿಗೆ ರಕ್ಷಣೆ ನೀಡಲು ಸರಕಾರ ವಿಫ‌ಲವಾಗಿದೆ. ಯುವಕರಿಗೆ ಸರಕಾರದ ಮೇಲೆ ನಂಬಿಕೆ ಇಲ್ಲ. ಸಮಗ್ರ ಅಭಿವೃದ್ಧಿ ಸಾಧ್ಯವಾಗಿಲ್ಲ ಎಂದರು.

    ರಾಜೀವ ಗಾಂಧಿಯವರು ಹೇಳಿದ, ಸರಕಾರ 100 ರೂ. ಕೊಟ್ಟರೆ ಫ‌ಲಾನುಭವಿಗೆ 15 ರೂ. ತಲುಪುತ್ತದೆ ಎನ್ನುವ ಮಾತಿನಲ್ಲಿ ಕಾಂಗ್ರೆಸ್‌ಗೆ ನಂಬಿಕೆಯಿದೆ. ಆದರೆ ಸರಕಾರ ನೂರು ರೂ. ಕೊಟ್ಟರೆ ನೂರು ರೂ. ಕೂಡಾ ತಲುಪುವಂತೆ ಮಾಡಿದ್ದು ಮೋದಿ ಸರಕಾರದ ಹೆಗ್ಗಳಿಕೆ. 38 ಕೋಟಿ ಜನಧನ್‌ ಖಾತೆ ಮೂಲಕ ಬಡವರು, ಎಸ್‌ಸಿ,ಎಸ್‌ಟಿ, ಕೃಷಿಕರ ಸಬ್ಸಿಡಿ, ಅನುದಾನವನ್ನು ನೇರವಾಗಿ ಜನರಿಗೆ ತಲುಪಿಸುತ್ತಿದ್ದಾರೆ. ಹಲವಾರು ಜನಕಲ್ಯಾಣ ಯೋಜನೆಗಳ ಮೂಲಕ ಕೇಂದ್ರ ಸರಕಾರ ಜನಸಾಮಾನ್ಯರ ಪಾಲಿಗೆ ವರದಾನವಾಗಿದೆ. ಪ್ರಧಾನಮಂತ್ರಿ ಆವಾಜ್‌ ಯೋಜನೆಯ ಮನೆಗಳನ್ನು ಕಾಂಗ್ರೆಸ್‌ ಸರಕಾರ ಮೀನುಗಾರರಿಗೆ, ಎಸ್‌ಸಿ, ಎಸ್‌ಟಿಗಳಿಗೆ ವಿತರಿಸದೇ , ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕ ಅನುಷ್ಠಾನ ಮಾಡದೇ ಜನರನ್ನು ವಂಚಿಸಿದೆ ಎಂದರು.

    ಬಿಜೆಪಿ ಅಭಿವೃದ್ಧಿ ಕುರಿತು ಮಾತನಾಡುತ್ತದೆ. ಉತ್ತಮ ಸರಕಾರ ಕುರಿತು ಮಾತನಾಡುತ್ತದೆ. ಜನರ ಹಿತ, ಸುರಕ್ಷೆಯ ಕುರಿತು ಮಾತನಾಡುತ್ತದೆ. ಭೇದ ಭಾವ ಇಲ್ಲದ ಆಡಳಿತ ನೀಡುವ ಕುರಿತು ಮಾತನಾಡುತ್ತದೆ. ಆದರೆ ಕಾಂಗ್ರೆಸ್‌ ಟಿಪ್ಪು ಜಯಂತಿ ಬಗ್ಗೆ, ಜನರನ್ನು ಒಡೆದು ಆಳುವ ಕುರಿತು, ಜೆಹಾದಿ ತತ್ವದ ಕುರಿತು, ಭ್ರಷ್ಟಾಚಾರದ ಆಡಳಿತವೇ ಮಾತನಾಡುತ್ತದೆ. ಉತ್ತರ ಪ್ರದೇಶದಲ್ಲಿ 86 ಲಕ್ಷ ಕೃಷಿಕರ ಸಾಲ ಮನ್ನಾ ಮಾಡಲಾಗಿದೆ. 1 ವರ್ಷದಲ್ಲಿ 12 ಲಕ್ಷ ಬಡವರಿಗೆ ಮನೆ ಕಟ್ಟಿಸಿಕೊಡಲಾಗಿದೆ. ಶೌಚಾಲಯ, ವಿದ್ಯುತ್‌, ಉಚಿತ ಗ್ಯಾಸ್‌ ಎಂದು ಸೌಲಭ್ಯಗಳನ್ನು ಕೊಡಲಾಗಿದ್ದು ಮಾಫಿಯಾಗಳಿಗೆ ಕಡಿವಾಣ ಹಾಕಲಾಗಿದೆ. ಆದರೆ ಕಾಂಗ್ರೆಸ್‌ ಜನರ ದುಡ್ಡನ್ನು ಲೂಟಿ ಮಾಡಿ ಹೈಕಮಾಂಡಿಗೆ ತಲುಪಿಸುವ ಎಟಿಎಂ ಆಗಿದೆ ಎಂದರು.

    ಅಭ್ಯರ್ಥಿ ಬಿ.ಎಂ. ಸುಕುಮಾರ ಶೆಟ್ಟಿ, ಕಳೆದ 18 ವರ್ಷಗಳಿಂದ ಬೈಂದೂರು ಕ್ಷೇತ್ರ ಅಭಿವೃದ್ಧಿಯಾಗಿಲ್ಲ. ರಸ್ತೆ, ಶಾಲೆ, ಶಿಕ್ಷಣ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಿಲ್ಲ. ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿಲ್ಲ. ಮೂಲಭೂತ ಸೌಕರ್ಯಗಳಿಲ್ಲದ ಕ್ಷೇತ್ರವಾಗಿದೆ. ನನಗೆ ಮತ ನೀಡಿದರೆ ಬೈಂದೂರು ಕ್ಷೇತ್ರವನ್ನು ರಾಜ್ಯದಲ್ಲಿ ನಂ.1 ಕ್ಷೇತ್ರವಾಗಿಸಿ ಅಭಿವೃದ್ಧಿಯಲ್ಲಿ ಮಾದರಿಯಾಗಿಸುತ್ತೇನೆ ಎಂದರು.

    Click here

    Click here

    Click here

    Call us

    Call us

    ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ವಿಭಾಗ ಪ್ರಮುಖ್‌ ಉದಯ್‌ ಕುಮಾರ್‌ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ರವೀಂದ್ರ ಶೆಟ್ಟಿ, ಜಿ.ಪಂ. ಸದಸ್ಯರಾದ ಸುರೇಶ್‌ ಬಟ್ವಾಡಿ, ಶಂಕರ ಪೂಜಾರಿ, ವಂಡ್ಸೆ ಬಾಬು ಶೆಟ್ಟಿ, ಶೋಭಾ ಪುತ್ರನ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ರಮೇಶ್‌, ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯದರ್ಶಿನಿ ದೇವಾಡಿಗ, ಯುವ ಮೋರ್ಚಾ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ, ಕ್ಷೇತ್ರ ಪ್ರಭಾರಿ ಪ್ರವೀಣ್‌ ಗುರ್ಮೆ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ದೀಪಕ್‌ ಕುಮಾರ್‌ ಶೆಟ್ಟಿ, ಬಾಲಚಂದ್ರ ಭಟ್‌ ಉಪಸ್ಥಿತರಿದ್ದರು. ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು. ಯೋಗಿ ಆದಿತ್ಯನಾಥ್‌ ಅವರನ್ನು ಸಮ್ಮಾನಿಸಲಾಯಿತು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.