Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸೆಸೆಲ್ಸಿ ಫಲಿತಾಂಶ : ಕುಂದಾಪುರ ವಲಯಕ್ಕೆ ಅಗ್ರಸ್ಥಾನ
    ಊರ್ಮನೆ ಸಮಾಚಾರ

    ಎಸೆಸೆಲ್ಸಿ ಫಲಿತಾಂಶ : ಕುಂದಾಪುರ ವಲಯಕ್ಕೆ ಅಗ್ರಸ್ಥಾನ

    Updated:11/05/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ. ಕಳೆದ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದ 5 ವಲಯಗಳಲ್ಲಿ ಈ ಬಾರಿಯೂ ಕುಂದಾಪುರ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ. ರಾಜ್ಯದಲ್ಲಿ 13ನೇ ಹಾಗೂ ಕರಾವಳಿಯಲ್ಲಿ 10 ನೇ ಸ್ಥಾನ ಗಳಿಸಿದ ಮೂಡಬಿದಿರೆ ಅನಂತರದ ಸ್ಥಾನವನ್ನು ಕುಂದಾಪುರ ವಲಯ ಪಡೆದುಕೊಂಡಿದೆ.

    Click Here

    Call us

    Click Here

    ಜಿಲ್ಲೆಯ 5 ವಲಯಗಳ ಪೈಕಿ ಕುಂದಾಪುರ ಪ್ರಥಮ, ಕಾರ್ಕಳ ಎರಡನೇ ಸ್ಥಾನ, ಉಡುಪಿ 3ನೇ, ಬ್ರಹ್ಮಾವರ 4ನೇ ಹಾಗೂ ಬೈಂದೂರು ವಲಯ 5ನೇ ಸ್ಥಾನ ಗಳಿಸಿದೆ. ಕಳೆದ ಬಾರಿಯೂ ಉಡುಪಿ ಜಿಲ್ಲೆಯ 5 ವಲಯಗಳ ಪೈಕಿ ಕುಂದಾಪುರ ಪ್ರಥಮ ಸ್ಥಾನ ಪಡೆದಿತ್ತು. ಬೈಂದೂರು ಕಳೆದ ಬಾರಿಯಂತೆ ಈ ಬಾರಿಯೂ 5ನೇ ಸ್ಥಾನ ಪಡೆದರೂ ಫಲಿತಾಂಶದಲ್ಲಿ ಹೆಚ್ಚಳವಾಗಿದೆ.

    ಕುಂದಾಪುರ: 5 ಶಾಲೆಗಳಿಗೆ ಶೇ. 100 ಫಲಿತಾಂಶ
    ಕುಂದಾಪುರ ವಲಯದಲ್ಲಿ 21 ಸರಕಾರಿ, 7 ಅನುದಾನಿತ ಹಾಗೂ 14 ಅನುದಾನ ರಹಿತ ಸೇರಿ ಒಟ್ಟು 41 ಪ್ರೌಢಶಾಲೆಗಳ ಪೈಕಿ ಸುಣ್ಣಾರಿ ಎಕ್ಸಲೆಂಟ್‌ ಪ.ಪೂ. ಕಾಲೇಜು (ಪ್ರೌಢಶಾಲೆ ವಿಭಾಗ), ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಗಂಗೊಳ್ಳಿಯ ಎಸ್‌.ವಿ. ಸರಸ್ವತಿ ವಿದ್ಯಾಲಯ, ಸಿದ್ದಾಪುರದ ಸರಸ್ವತಿ ವಿದ್ಯಾಲಯ ಹಾಗೂ ಕೋಟೇಶ್ವರದ ಮೊರಾರ್ಜಿ ದೇಸಾಯಿ ಪ್ರೌಢಶಾಲೆಗಳು ಶೇ. 100 ಫಲಿತಾಂಶ ಪಡೆದುಕೊಂಡಿದೆ. ಅದರಲ್ಲೂ ಕೋಟೇಶ್ವರದ ಮೊರಾರ್ಜಿ ದೇಸಾಯಿ ಪ್ರೌಢಶಾಲೆ ಕಳೆದ 5 ವರ್ಷಗಳಿಂದ ಶೇ. 100 ಫಲಿತಾಂಶ ಗಳಿಸಿದೆ. ಪರೀಕ್ಷೆ ಬರೆದ ಒಟ್ಟು 2373 ವಿದ್ಯಾರ್ಥಿಗಳ ಪೈಕಿ 2,140 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೋಟೇಶ್ವರ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ಸುಜಾತ ಭಟ್‌ -622 ಹಾಗೂ ಕುಂದಾಪುರದ ವೆಂಕಟರಮಣ ಪ್ರೌಢಶಾಲೆಯ ಎಸ್‌.ಪಿ. ಶಿಲ್ಪಾ -622 ಅಂಕಗಳನ್ನು ಪಡೆದು ಕುಂದಾಪುರ ವಲಯಕ್ಕೆ ಪ್ರಥಮ ಸ್ಥಾನಿಗರಾಗಿದ್ದಾರೆ.

    ಬೈಂದೂರು: 4 ಶಾಲೆಗಳಿಗೆ ಶೇ. 100 ಫಲಿತಾಂಶ
    ಬೈಂದೂರು ವಲಯದಲ್ಲಿ ಸರಕಾರಿ 16, ಅನುದಾನಿತ 5, ಅನುದಾನ ರಹಿತ 11 ಸೇರಿ ಒಟ್ಟು 32 ಪ್ರೌಢಶಾಲೆಗಳಿದ್ದು, ಈ ಪೈಕಿ ಸರಕಾರಿ ಪ್ರೌಢಶಾಲೆ ಕಂಬದಕೋಣೆ, ಸರಕಾರಿ ಪ್ರೌಢಶಾಲೆ ಬಿಜೂರು, ಸರಕಾರಿ ಪ್ರೌಢಶಾಲೆ ತಲ್ಲೂರು, ವಿವೇಕಾನಂದ ಪ್ರೌಢಶಾಲೆಯ ಉಪ್ಪುಂದ ಶಾಲೆಗಳು ಶೇ. 100 ಫಲಿತಾಂಶ ಗಳಿಸಿದೆ. ಪರೀಕ್ಷೆ ಬರೆದ 2,019 ವಿದ್ಯಾರ್ಥಿಗಳ ಪೈಕಿ 1,718 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಪ್ರೌಢಶಾಲೆಯ ವಿದ್ಯಾರ್ಥಿ ಗೋಪಾಲಕೃಷ್ಣ ಹೆಗಡೆ 618 ಅಂಕ ಗಳಿಸಿ ಬೈಂದೂರು ವಲಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.

    ವಲಯವಾರು ಫಲಿತಾಂಶ
    ಕುಂದಾಪುರ 90.18
    ಕಾರ್ಕಳ 89.44
    ಉಡುಪಿ 87.47
    ಬೈಂದೂರು 85.09

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    four + 1 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.