ಎಸೆಸೆಲ್ಸಿ ಫಲಿತಾಂಶ : ಕುಂದಾಪುರ ವಲಯಕ್ಕೆ ಅಗ್ರಸ್ಥಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ. ಕಳೆದ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದ 5 ವಲಯಗಳಲ್ಲಿ ಈ ಬಾರಿಯೂ ಕುಂದಾಪುರ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ. ರಾಜ್ಯದಲ್ಲಿ 13ನೇ ಹಾಗೂ ಕರಾವಳಿಯಲ್ಲಿ 10 ನೇ ಸ್ಥಾನ ಗಳಿಸಿದ ಮೂಡಬಿದಿರೆ ಅನಂತರದ ಸ್ಥಾನವನ್ನು ಕುಂದಾಪುರ ವಲಯ ಪಡೆದುಕೊಂಡಿದೆ.

Call us

Click Here

ಜಿಲ್ಲೆಯ 5 ವಲಯಗಳ ಪೈಕಿ ಕುಂದಾಪುರ ಪ್ರಥಮ, ಕಾರ್ಕಳ ಎರಡನೇ ಸ್ಥಾನ, ಉಡುಪಿ 3ನೇ, ಬ್ರಹ್ಮಾವರ 4ನೇ ಹಾಗೂ ಬೈಂದೂರು ವಲಯ 5ನೇ ಸ್ಥಾನ ಗಳಿಸಿದೆ. ಕಳೆದ ಬಾರಿಯೂ ಉಡುಪಿ ಜಿಲ್ಲೆಯ 5 ವಲಯಗಳ ಪೈಕಿ ಕುಂದಾಪುರ ಪ್ರಥಮ ಸ್ಥಾನ ಪಡೆದಿತ್ತು. ಬೈಂದೂರು ಕಳೆದ ಬಾರಿಯಂತೆ ಈ ಬಾರಿಯೂ 5ನೇ ಸ್ಥಾನ ಪಡೆದರೂ ಫಲಿತಾಂಶದಲ್ಲಿ ಹೆಚ್ಚಳವಾಗಿದೆ.

ಕುಂದಾಪುರ: 5 ಶಾಲೆಗಳಿಗೆ ಶೇ. 100 ಫಲಿತಾಂಶ
ಕುಂದಾಪುರ ವಲಯದಲ್ಲಿ 21 ಸರಕಾರಿ, 7 ಅನುದಾನಿತ ಹಾಗೂ 14 ಅನುದಾನ ರಹಿತ ಸೇರಿ ಒಟ್ಟು 41 ಪ್ರೌಢಶಾಲೆಗಳ ಪೈಕಿ ಸುಣ್ಣಾರಿ ಎಕ್ಸಲೆಂಟ್‌ ಪ.ಪೂ. ಕಾಲೇಜು (ಪ್ರೌಢಶಾಲೆ ವಿಭಾಗ), ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಗಂಗೊಳ್ಳಿಯ ಎಸ್‌.ವಿ. ಸರಸ್ವತಿ ವಿದ್ಯಾಲಯ, ಸಿದ್ದಾಪುರದ ಸರಸ್ವತಿ ವಿದ್ಯಾಲಯ ಹಾಗೂ ಕೋಟೇಶ್ವರದ ಮೊರಾರ್ಜಿ ದೇಸಾಯಿ ಪ್ರೌಢಶಾಲೆಗಳು ಶೇ. 100 ಫಲಿತಾಂಶ ಪಡೆದುಕೊಂಡಿದೆ. ಅದರಲ್ಲೂ ಕೋಟೇಶ್ವರದ ಮೊರಾರ್ಜಿ ದೇಸಾಯಿ ಪ್ರೌಢಶಾಲೆ ಕಳೆದ 5 ವರ್ಷಗಳಿಂದ ಶೇ. 100 ಫಲಿತಾಂಶ ಗಳಿಸಿದೆ. ಪರೀಕ್ಷೆ ಬರೆದ ಒಟ್ಟು 2373 ವಿದ್ಯಾರ್ಥಿಗಳ ಪೈಕಿ 2,140 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೋಟೇಶ್ವರ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ಸುಜಾತ ಭಟ್‌ -622 ಹಾಗೂ ಕುಂದಾಪುರದ ವೆಂಕಟರಮಣ ಪ್ರೌಢಶಾಲೆಯ ಎಸ್‌.ಪಿ. ಶಿಲ್ಪಾ -622 ಅಂಕಗಳನ್ನು ಪಡೆದು ಕುಂದಾಪುರ ವಲಯಕ್ಕೆ ಪ್ರಥಮ ಸ್ಥಾನಿಗರಾಗಿದ್ದಾರೆ.

ಬೈಂದೂರು: 4 ಶಾಲೆಗಳಿಗೆ ಶೇ. 100 ಫಲಿತಾಂಶ
ಬೈಂದೂರು ವಲಯದಲ್ಲಿ ಸರಕಾರಿ 16, ಅನುದಾನಿತ 5, ಅನುದಾನ ರಹಿತ 11 ಸೇರಿ ಒಟ್ಟು 32 ಪ್ರೌಢಶಾಲೆಗಳಿದ್ದು, ಈ ಪೈಕಿ ಸರಕಾರಿ ಪ್ರೌಢಶಾಲೆ ಕಂಬದಕೋಣೆ, ಸರಕಾರಿ ಪ್ರೌಢಶಾಲೆ ಬಿಜೂರು, ಸರಕಾರಿ ಪ್ರೌಢಶಾಲೆ ತಲ್ಲೂರು, ವಿವೇಕಾನಂದ ಪ್ರೌಢಶಾಲೆಯ ಉಪ್ಪುಂದ ಶಾಲೆಗಳು ಶೇ. 100 ಫಲಿತಾಂಶ ಗಳಿಸಿದೆ. ಪರೀಕ್ಷೆ ಬರೆದ 2,019 ವಿದ್ಯಾರ್ಥಿಗಳ ಪೈಕಿ 1,718 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಪ್ರೌಢಶಾಲೆಯ ವಿದ್ಯಾರ್ಥಿ ಗೋಪಾಲಕೃಷ್ಣ ಹೆಗಡೆ 618 ಅಂಕ ಗಳಿಸಿ ಬೈಂದೂರು ವಲಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.

ವಲಯವಾರು ಫಲಿತಾಂಶ
ಕುಂದಾಪುರ 90.18
ಕಾರ್ಕಳ 89.44
ಉಡುಪಿ 87.47
ಬೈಂದೂರು 85.09

Click here

Click here

Click here

Click Here

Call us

Call us

 

Leave a Reply