Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪುರಸಭೆ: ಕಸದ ಲಾರಿಯಲ್ಲೂ ಮತದಾನ ಜಾಗೃತಿ!
    ಊರ್ಮನೆ ಸಮಾಚಾರ

    ಪುರಸಭೆ: ಕಸದ ಲಾರಿಯಲ್ಲೂ ಮತದಾನ ಜಾಗೃತಿ!

    Updated:11/05/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಇಲ್ಲಿನ ಪುರಸಭೆಯ ಕಸದ ಲಾರಿಗಳಲ್ಲೂ ಮತದಾನ ಜಾಗೃತಿಯ ಫ್ಲೆಕ್ಸ್‌ ನೇತಾಡುತ್ತಿದೆ. ಚುನಾವಣೆ ಎಂಬ ಹಬ್ಬ ಬಂತು ಎಂದು ಯಕ್ಷಗಾನದ ಹಾಡು ಕೇಳುತ್ತಿದೆ. ಮತದಾನ ಜಾಗೃತಿಗೆ ಎಲ್ಲೆಡೆ ವಿವಿಧ ಪ್ರಯತ್ನ ನಡೆಯುತ್ತಿದೆ. ಚುನಾವಣಾ ಆಯೋಗವಂತೂ ಮತದಾನ ಪ್ರಮಾಣ ಹೆಚ್ಚವಾಗಲು ಇನ್ನಿಲ್ಲದ ಜಾಗೃತಿ ಅಭಿಯಾನ ನಡೆಸುತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ವಿವಿಧ ರೀತಿಯಲ್ಲಿ ಮತದಾನ ಮಾಡಿ ಎಂದು ಅರಿವು ಮೂಡಿಸುತ್ತಿದೆ. ನಗರದ ವಿವಿಧ ಭಾಗಗಳಲ್ಲಿ ಕನ್ನಡ ಹಾಗೂ ಕುಂದಗನ್ನಡದಲ್ಲಿ ಮತದಾನ ಮಾಡುತ್ತೇನೆ, ಏನೇ ಕೆಲಸ ಇದ್ದರೂ ಮತದಾನ ಮಾಡಿ ಎಂಬಿತ್ಯಾದಿ ಹೋರ್ಡಿಂಗ್‌ಗಳಿವೆ.

    Click Here

    Call us

    Click Here

    ಮತಯಂತ್ರ ಹಾಗೂ ವಿವಿ ಪ್ಯಾಟ್‌ ಕುರಿತು ಜಾಗೃತಿ ಅಭಿಯಾನ ನಡೆಯುತ್ತಿದೆ. ಪುರಸಭಾ ವ್ಯಾಪ್ತಿಯ ವಿವಿಧೆಡೆ ಮತಯಂತ್ರಗಳ ಪ್ರಾತ್ಯಕ್ಷಿಕೆ, ಅಣಕು ಮತದಾನ ಮೂಲಕ ಮತಯಂತ್ರ ಮೇಲೆ ಸಂಶಯ ಇದ್ದರೆ ಹೋಗಲಾಡಿಸುವ ಯತ್ನ ನಡೆಯುತ್ತಿದೆ. ಯಂತ್ರದ ಮೂಲಕ ಈ ಹಿಂದೆ ಮತದಾನ ನಡೆದಿದ್ದರೂ ಹೊಸಬರಿಗೆ ಮತಯಂತ್ರದ ಮೂಲಕ ಮತದಾನ ಮಾಡುವುದು ಹೇಗೆ ಎಂಬ ಮಾಹಿತಿ ಬೇಕಿದ್ದರೆ, ಹಳಬರಿಗೆ ಮತಯಂತ್ರದ ಮೂಲಕ ಮತದಾನ ಮಾಡುವುದು ಹೇಗೆ ಎಂದು ನೆನಪಿಲ್ಲದಿದ್ದರೆ ಎಂದು ಜನರಿದ್ದಲ್ಲಿಗೆ ತೆರಳಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.

    ಇಷ್ಟೇ ಅಲ್ಲ ಸಂಘ ಸಂಸ್ಥೆಗಳು ಅವಶ್ಯವಿದೆ ಎಂದು ತಿಳಿಸಿದರೆ ಅವರು ತಿಳಿಸಿದ ಸ್ಥಳಕ್ಕೆ ಅಧಿಕಾರಿಗಳು ತೆರಳಿ ಮತಯಂತ್ರದ ಪ್ರಾತ್ಯಕ್ಷಿಕೆ ನೀಡಲು ಸಿದ್ಧರಾಗಿದ್ದಾರೆ. ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ಹೇಳಲು 24 ತಾಸು ಕಾರ್ಯನಿರ್ವಹಿಸುವ ಕಂಟ್ರೋಲ್‌ ರೂಂನ್ನು ಸಹಾಯಕ ಆಯುಕ್ತರ ಕಚೇರಿಯಲ್ಲಿ ತೆರೆಯಲಾಗಿದೆ. ಪುರಸಭೆಯಲ್ಲೂ ಪ್ರತ್ಯೇಕ ಕಂಟ್ರೋಲ್‌ ರೂಂ ತೆರೆಯಲಾಗಿದೆ.

    ಇದಿಷ್ಟೂ ಸಾಲದು ಎಂಬಂತೆ ಇಲ್ಲಿನ ಪುರಸಭೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ಕಸದ ವಾಹನಗಳು ನಗರದ ಎಲ್ಲೆಡೆ ಸಂಚರಿಸುತ್ತವೆ. ಮನೆ ಮನೆಗೆ ತೆರಳುತ್ತವೆ. ಆಗಲೂ ಜನರಿಗೆ ಕಸ ಹಾಕುವಾಗ ಮತದಾನದ ಜಾಗೃತಿ ಮೂಡಬೇಕೆಂದು ಅದರಲ್ಲೂ ಮತದಾನ ಜಾಗೃತಿ ಫ‌ಲಕ ಅಳವಡಿಸಲಾಗಿದೆ. ಮೈಕ್‌ ವ್ಯವಸ್ಥೆ ಇರುವ ವಾಹನಗಳಲ್ಲಿ ತೆಂಕುತಿಟ್ಟು ಯಕ್ಷಗಾನ ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರು ಯಕ್ಷಗಾನೀಯವಾಗಿ ಹಾಡಿರುವ ಮಂಗಳೂರು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ. ಆರ್‌. ರವಿ ರಚಿಸಿದ ಹಬ್ಬ ಬಂತು ಹಬ್ಬ ಚುನಾವಣಾ ಹಬ್ಬ ಎಂಬ ಹಾಡನ್ನು ಕೇಳಿಸಲಾಗುತ್ತಿದೆ.

    ಇದು ಸದ್ಯದ ಮಟ್ಟಿಗೆ ಹೊಸ ಪ್ರಯೋಗವೂ ಹೌದು. ಜಿಲ್ಲೆಯ ಯಾವುದೇ ಪುರಸಭೆಗಳು ಇಂತಹ ಪ್ರಯತ್ನ ಮಾಡಿಲ್ಲ. ಈ ಮೊದಲು ಕಸದ , ಸ್ವತ್ಛತೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿತ್ತು. ಈಗ ಸಾಮೂಹಿಕವಾಗಿ ಮತದಾನ ಜಾಗೃತಿ ಉಂಟು ಮಾಡಲಾಗುತ್ತಿದೆ.

    Click here

    Click here

    Click here

    Call us

    Call us

    ಹಾಡು ಕೇಳುವ ವ್ಯವಸ್ಥೆ
    ಜನರಿಗೆ ಮತದಾನದ ಕುರಿತು ಜಾಗೃತಿ ಉಂಟಾಗಬೇಕು. ಮತದಾನ ಪ್ರಮಾಣದಲ್ಲಿ ಹೆಚ್ಚಳವಾಗಬೇಕು ಎಂದು ನಾವು ಈ ಪ್ರಯೋಗ ಮಾಡಿದ್ದೇವೆ. 3 ಟ್ರಾಕ್ಟರ್‌, 3 ಏಸ್‌ ವಾಹನ ಸೇರಿದಂತೆ ಒಟ್ಟು 8 ವಾಹನಗಳಲ್ಲಿ ಫ‌ಲಕ ಅಳವಡಿಸಿ ಹಾಡು ಕೇಳಿಸುವ ವ್ಯವಸ್ಥೆ ಮಾಡಿದ್ದೇವೆ.
    – ವಾಣಿ ಬಿ. ಆಳ್ವ,ಮುಖ್ಯಾಧಿಕಾರಿ

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.