Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಹಿರಿಯರ ಮಾರ್ಗದರ್ಶನ ಬದುಕಿನ ಸ್ಪೂರ್ತಿ- ವಿದ್ಯಾಧಿರಾಜತೀರ್ಥ ಸ್ವಾಮೀಜಿ
    ಊರ್ಮನೆ ಸಮಾಚಾರ

    ಗುರುಹಿರಿಯರ ಮಾರ್ಗದರ್ಶನ ಬದುಕಿನ ಸ್ಪೂರ್ತಿ- ವಿದ್ಯಾಧಿರಾಜತೀರ್ಥ ಸ್ವಾಮೀಜಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ರುಚಿಯಿಲ್ಲದ ಭೋಜನ, ಶೃತಿ, ಲಯ, ತಾಳವಿಲ್ಲದ ಸಂಗೀತ ನಮ್ಮ ಶರೀರ ಹಾಗೂ ಮನಸ್ಸಿಗೆ ಹೇಗೆ ಅಪಥ್ಯವಾಗುವುದೋ ಹಾಗೆಯೇ ಸಂಸ್ಕಾರವಿಲ್ಲದ ಜೀವನವೂ ಕೂಡಾ. ಮುಖ್ಯವಾಗಿ ಸಂಸ್ಕಾರವೇ ಮನುಷ್ಯನ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಗುತ್ತದೆ. ಆ ನೆಲೆಯಲ್ಲಿ ಗುರು-ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನ ನಮಗೆ ಜೀವನದಲ್ಲಿ ಸ್ಪೂರ್ತಿದಾಯಕವಾಗಿರುತ್ತದೆ ಎಂದು ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜತೀರ್ಥ ವಡೇರ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ನಾಯ್ಕನಕಟ್ಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬುಧವಾರ ನಡೆದ ಶತಕಲಾಭಿಷೇಕ ಹಾಗೂ ಲಘುವಿಷ್ಣು ಹವನದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಯಾವುದೇ ಸಮಾಜ ಉದ್ದಾರವಾಗಬೇಕಾದರೆ ಅಲ್ಲಿ ಆಚಾರ-ವಿಚಾರ, ದೇವರು, ಧರ್ಮವಿರಬೇಕು. ಅಗ ಮಾತ್ರ ಸಮಾಜದ ಸಮೃದ್ಧಿಯಾಗಿರಲು ಸಾಧ್ಯ ಎನ್ನುವುದು ತತ್ವಸಿದ್ಧಾಂತ. ಅದರಂತೆ ಲೋಕಕಲ್ಯಾಣಕ್ಕಾಗಿ ದೇವತಾರಾಧನೆ, ಯಜ್ಞ, ಯಗಾದಿಗಳನ್ನು ಮಾಡಲು ಪರಶುರಾಮ ದೇವರು ತ್ರಿಹೋತ್ರದಿಂದ ಸಾರಸ್ವತರನ್ನು ಗೋವಾಕ್ಕೆ ಕರೆತಂದರು ಎಂಬ ಉಲ್ಲೆಖವಿದೆ. ನಾಲ್ಕೂ ಕಡೆಗಳಲ್ಲಿನ ಪರ್ವತಶ್ರೇಣಿಯ ಮಧ್ಯದಲ್ಲಿ ನೆಲೆನಿಂತಂತಹ ಸಾರಸ್ವತರು ಅಷ್ಟ ಅಗ್ರಹಾರ ನಿರ್ಮಿಸಿ ಅಲ್ಲಿನ ಮೂವತ್ತು ಗ್ರಾಮಗಳಲ್ಲಿ ವಾಸವಾಗಿದ್ದರು. ಅಲ್ಲಿಂದ ಧರ್ಮ, ಸಂಸ್ಕೃತಿಯ ಸಂವರ್ಧನೆಗಾಗಿ ಸುಮರು ೪೨ ದೇವಾಲಯಗಳನ್ನು ನಿರ್ಮಿಸಲಾಯಿತು. ಮುಂದೆ ಪರಕೀಯರ ಆಕ್ರಮಣದಿಂದ ಬೇರೆಬೇರೆ ರಾಜ್ಯಗಳಿಗೆ ವಲಸೆಹೋಗಿ ಅಲ್ಲಲ್ಲಿ ನೆಲೆನಿಂತ ಸಾರವಂತ ಸಮಾಜ ತಮ್ಮ ಬುದ್ಧಿಮತ್ತೆಯಿಂದ ಕೃಷಿಭೂಮಿ ವಿಕಾಸದೊಂದಿಗೆ ಜೀವನ ನಡೆಸಲು ಪ್ರಾರಂಭಿಸಿದರು. ಧಾರ್ಮಿಕ ಮನೋಭಾವನೆ, ಭಕ್ತಿಯಿಂದ ಜೀವನದಲ್ಲಿ ಸುಖ-ಶಾಂತಿ ಪಡೆದವರು ಎನ್ನುವ ವಿಚಾರ ಸಾರಸ್ವತ ಪರಂಪರೆ ಇತಿಹಾಸ ಮತ್ತು ಪುರಾಣಗಳಲ್ಲಿಯೂ ಸಿಗುತ್ತದೆ ಎಂದ ಸಾರಸ್ವತ ಸಮಾಜದ ಇತಿಹಾಸವನ್ನು ಎಳೆಎಳೆಯಾಗಿ ತೆರೆದಿಟ್ಟರು.

    ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಕಿರಿಯ ಮಠಾಧೀಶ ಶ್ರೀ ವಿದ್ಯಾಧೀಶ ತೀಥ ಶ್ರೀಪಾದವಡೇರ ಸ್ವಾಮಿಜಿ ಮಾತನಾಡಿ, ಜೀವನದಲ್ಲಿ ದೇವರ ಉಪಾಸನೆಯನ್ನು ನಿತ್ಯ ನಿರಂತರ ಮಾಡಬೇಕು. ಉಪಾಸನೆಗೆ ಪ್ರಾಧಾನ್ಯತೆ ನೀಡಬೇಕು. ಅನನ್ಯ ಭಾವನೆಯಿಂದ ದೇವರ ಸೇವೆ ಮಾಡಿದರೆ ದೇವರು ನಮ್ಮ ಸಕಲ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ. ಪ್ರತಿಯೊಂದು ಮನೆಗಳಲ್ಲಿ ದೇವರ ಭಜನೆ, ನಾಮಸ್ಮರಣೆ ಮೊದಲಾದ ಧಾರ್ಮಿಕ ಚಟುವಟಿಕೆಗಳು ನಡೆದಾಗ ಜನರಲ್ಲಿ ಧಾರ್ಮಿಕತೆ ಬೆಳೆಯುತ್ತದೆ ಶ್ರೀದೇವರ ಮತ್ತು ಗುರುಗಳ ಸೇವೆ ಮಾಡುವುದರಿಂದ ನಮ್ಮ ಜೀವನ ಪಾವನವಾಗುತ್ತದೆ ಎಂದು ಅವರು ಆಶೀರ್ವದಿಸಿದರು.

    ಶ್ರೀವೆಂಕಟರಮಣ ಸೇವಾಸಮಿತಿ ಅಧ್ಯಕ್ಷ ದಾಮೋದರ ಪ್ರಭು, ಊರಿನ ಹತ್ತ ಸಮಸ್ತರ ಪರವಾಗಿ ಗುರುಗಳಿಗೆ ಪಾದ್ಯಪೂಜೆ ಸಲ್ಲಿಸಿದರು. ಈ ಸಂದರ್ಭ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಸ್ವಾಮೀಜಿ ಸನ್ಮಾನಿಸಿ ಹರಸಿದರು. ರಾಘವೇಂದ್ರ ಪ್ರಭು ಪ್ರಾಸ್ತಾವಿಸಿ, ಸಮಿತಿಯ ಕಾರ್ಯದರ್ಶಿ ಎನ್. ರಮೇಶ ಪೈ ನಿರೂಪಿಸಿದರು.

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    10 − 5 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.