Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ದೇವಾಡಿಗರ ಒಕ್ಕೂಟದ ವಾರ್ಷಿಕ ಮಹಾಸಭೆ
    ಊರ್ಮನೆ ಸಮಾಚಾರ

    ಬೈಂದೂರು ದೇವಾಡಿಗರ ಒಕ್ಕೂಟದ ವಾರ್ಷಿಕ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಬೈಂದೂರು ದೇವಾಡಿಗರ ಒಕ್ಕೂಟದ ವಾರ್ಷಿಕ ಮಹಾಸಭೆ ಒತ್ತಿನಕಟ್ಟೆ ಶ್ರೀ ಮಹಾಸತಿ ದೇವಸ್ಥಾನದಲ್ಲಿ ನಡೆಯಿತು.

    Click Here

    Call us

    Click Here

    ಸಮಾರಂಭವನ್ನು ಉದ್ದೇಶಿಸಿ ಅರಣ್ಯ ಇಲಾಖಾ ನೌಕರರ ಮಹಾಮಂಡಲದ ರಾಜ್ಯಾಧ್ಯಕ್ಷ ರಘುರಾಮ ದೇವಾಡಿಗ ಮಾತನಾಡಿ ಸಮುದಾಯದ ಸಂಘಟನೆಯಿಂದ ನನಗೇನು ಸಿಕ್ಕಿದೆ ಅಥವಾ ಯಾವ ಪ್ರಯೋಜನ ದೊರಕಿದೆ ಎಂಬ ಸ್ವಾರ್ಥಕ್ಕಿಂತ ಸಮಾಜಕ್ಕಾಗಿ ನಾನೇನು ಮಾಡಿದ್ದೇನೆ, ನನ್ನ ಕರ್ತವ್ಯವೇನು ಎಂದು ಪ್ರತಿಯೊಬ್ಬರೂ ಚಿಂತಿಸಿದಾಗ ಮಾತ್ರ ಸಮಾಜದಲ್ಲಿ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಘಟನೆ ಅತೀ ಮುಖ್ಯವಾಗಿದ್ದು, ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದ ಆಚರಣೆ, ಅನುಭವ, ಸಮೂಹ ಜೀವನ ಹಾಗೂ ಸಂಸ್ಕಾರ ನಮ್ಮ ಸಮಾಜದ ಬೆಳವಣಿಗೆಗೆ ಸಹಕಾರಿಯಾಗಿದೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ವಾತಾವರಣ ನಿರ್ಮಾಣವಾಗಬೇಕು ಎಂಬ ನೆಲೆಯಲ್ಲಿ ಪ್ರತಿಯೊಂದು ಸಮುದಾಯದವರ ಸಂಘಟನೆಗಳು ಪ್ರಯತ್ನಿಸಬೇಕು. ಸಾಧಕರನ್ನು ಗುರುತಿಸಿ ಗೌರವಿಸುದರೊಂದಿಗೆ ಶೈಕ್ಷಣಿಕವಾಗಿ ಹಿಂದುಳಿದ ಬಡ ಮಕ್ಕಳಿಗೂ ಸಂಘಟನೆ ನೆರವಾಗಬೇಕು. ಉತ್ತಮ ಸಂಸ್ಕಾರ ನೀಡಿ ಮಕ್ಕಳನ್ನು ಬೆಳೆಸುವ ಮೂಲಕ ಭವಿಷ್ಯದಲ್ಲಿ ಹುಟ್ಟೂರಿಗೂ, ಸಮುದಾಯಕ್ಕೂ, ಹೆತ್ತವರಿಗೂ ಹಾಗೂ ದೇಶಕ್ಕೂ ಅವರು ಕೀರ್ತಿತರುವಂತಾಗಬೇಕು ಎಂದರು.

    ಒಕ್ಕೂಟದ ಅಧ್ಯಕ್ಷ ಹೊಸಾಡು ನಾರಾಯಣ ದೇವಾಡಿಗ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಸಮಾಜದ ಪ್ರಗತಿಪರ ಕೃಷಿಕ ಕೊರಾಡಿ ರಾಮ ದೇವಾಡಿಗ ಹಾಗೂ ಸ್ವರವಾದಕ ಮೌರ್ಕಾರ್‌ಮನೆ ನಾಗರಾಜ ದೇವಾಡಿಗರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

    ಒಕ್ಕೂಟದ ಗೌರವಾಧ್ಯಕ್ಷ ಕೆ. ಜಿ. ಸುಬ್ಬ ದೇವಾಡಿಗ, ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮೀ ದೇವಾಡಿಗ, ಬೆಂಗಳೂರು ದೇವಾಡಿಗ ನವೋದಯ ಸಂಘದ ಉಪಾಧ್ಯಕ್ಷ ಬಿ. ಆರ್. ದೇವಾಡಿಗ, ಭಟ್ಕಳ ದೇವಾಡಿಗರ ಸಂಘದ ಗೌರವಾಧ್ಯಕ್ಷ ಗಣಪತಿ ದುರ್ಗಯ್ಯ ದೇವಾಡಿಗ ಬೆಳ್ಳಿ, ಕೊಲ್ಲೂರು ಡಾಟ್ ಕಾಂ ಸಂಯೋಜಕಿ ಪ್ರಿಯದರ್ಶಿನಿ ದೇವಾಡಿಗ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಒಕ್ಕೂಟ ಸ್ಥಾಪಕಾಧ್ಯಕ್ಷ ನಾರಾಯಣ ದೇವಾಡಿಗ ಪ್ರಾಸ್ತಾವಿಸಿ, ಕಾರ್ಯದರ್ಶಿ ಸತ್ಯಪ್ರಸನ್ನ ವರದಿ ವಾಚಿಸಿದರು. ಕಳವಾಡಿ ರಾಘವೇಂದ್ರ ದೇವಾಡಿಗ ಸ್ವಾಗತಿಸಿ, ಹೊಸಾಡು ಮಾಲತಿ ದೇವಾಡಿಗ ವಂದಿಸಿದರು. ಜನಾರ್ದನ ದೇವಾಡಿಗ ನಿರೂಪಿಸಿದರು. ಬೆಳಿಗ್ಗೆ ದೇವಳದಲ್ಲಿ ಸಮಾಜ ಬಾಂಧವರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಿತು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.