Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ್ರಾ.ಪಂ.ಗಳನ್ನು ಬಿಜೆಪಿ ತೆಕ್ಕೆಗೆ ತನ್ನಿ: ಕರಂದ್ಲಾಜೆ
    ಊರ್ಮನೆ ಸಮಾಚಾರ

    ಗ್ರಾ.ಪಂ.ಗಳನ್ನು ಬಿಜೆಪಿ ತೆಕ್ಕೆಗೆ ತನ್ನಿ: ಕರಂದ್ಲಾಜೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    DSC_2239ಮರವಂತೆ: ಗ್ರಾಮೀಣ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಸಂಘಟನೆಯನ್ನು ಬಲಗೊಳಿಸುವ ಮತ್ತು ಮುಂದಿನ ಚುನಾವಣೆಗಳಲ್ಲಿ ಪಕ್ಷದ ಗೆಲುವನ್ನು ಖಾತರಿಗೊಳಿಸುವ ಉದ್ದೇಶಕ್ಕೆ ಅಧಿಕ ಸಂಖ್ಯೆಯ ಗ್ರಾಮ ಪಂಚಾಯತ್‌ಗಳನ್ನು ಪಕ್ಷದ ಕಾರ್ಯಕರ್ತರು ವಶಕ್ಕೆ ತೆಗೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ಗ್ರಾಮ ಪಂಚಾಯತ್‌ಗಳಿಗೆ ಅನುದಾನವನ್ನು ನೇರ ಬಡುಗಡೆಗೊಳಿಸಲಿದ್ದು, ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದ ದೃಷ್ಟಿಯಿಂದಲೂ ಅವುಗಳಲ್ಲಿ ಪಕ್ಷ ಕಾರ್ಯಕರ್ತರು ಇರಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಹೇಳಿದರು.
    ಮರವಂತೆಗೆ ಭೇಟಿ ನೀಡಿದ ಅವರು ಅಲ್ಲಿನ ಪಕ್ಷ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮೀಣ ಅಭಿವೃದ್ಧಿಯನ್ನು ಕಡೆಗಣಿಸಿದ ರಾಜ್ಯ ಸರಕಾರದ ವಿರುದ್ಧ ಅವರು ಟೀಕಾಪ್ರಹಾರ ನಡೆಸಿದರು. ಗ್ರಾಮ ಪಂಚಾಯತ್‌ಗಳಿಗೆ ಅನುದಾನ ಕಡಿತ ಮಾಡಲಾಗುತ್ತಿದೆ. ಬೇಕಾಬಿಟ್ಟಿ ಆದೇಶ, ಸುತ್ತೋಲೆ ಹೊರಡಿಸುವ ಮೂಲಕ, ಅಭಿವೃದ್ಧಿ ಅಧಿಕಾರಿಗಳನ್ನು ವಿವೇಚನಾ ರಹಿತವಾಗಿ ವರ್ಗಮಾಡುವ ಮೂಲಕ ಗೊಂದಲ ಸೃಷ್ಟಿಸಲಾಗುತ್ತಿದೆ. ಸರಕಾರ ಜನಮರುಳು ಕಾರ್ಯಕ್ರಮಗಳಾದ ಅನ್ನ ಭಾಗ್ಯ, ಕ್ಷೀರಭಾಗ್ಯದಂತಹ ಯೋಜನೆಗಳಿಗೆ ರಾಜ್ಯದ ಖಜಾನೆ ಸೂರೆಯಾಗುತ್ತಿದೆ. ತೆರಿಗೆ ಸಂಗ್ರಹದಲ್ಲೂ ಕುಸಿತ ಉಂಟಾಗಿದೆ. ಈ ಸ್ಥಿತಿಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಹಣ ನೀಡುವುದು ಸಾಧ್ಯವಾಗುತ್ತಿಲ್ಲ ಎಂದು ಅವರು ದೂರಿದರು.
    ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷ ಬಿ. ಎಂ. ಸುಕುಮಾರ ಶೆಟ್ಟಿ ಸ್ವಾಗತಿಸಿದರು. ಕ್ಷೇತ್ರದ 39 ಗ್ರಾಮ ಪಂಚಾಯತ್‌ಗಳಿಗೆ ನಡೆಯುವ ಚುನಾವಣೆಯಲ್ಲಿ ಕನಿಷ್ಠ ೨೫ ಗ್ರಾಪಂ ಬಿಜೆಪಿ ಪಕ್ಷ ಕಾರ್ಯಕರ್ತರ ವಶವಾಗುವ ವಿಶ್ವಾಸವಿದೆ ಎಂದು ಅವರು ಹೇಳಿದರು.
    ಪಕ್ಷದ ಜಿಲ್ಲಾಧ್ಯಕ್ಷ ವಿಕ್ರಮಾರ್ಜುನ ಹೆಗ್ಡೆ ಮಾತನಾಡಿದರು. ಪಕ್ಷದ ಪ್ರಮುಖರಾದ ಗುರುರಾಜ ಗಂಟಿಹೊಳೆ, ಗೀತಾಂಜಲಿ ಸುವರ್ಣ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.