Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಒತ್ತಿನೆಣೆ ಗುಡ್ಡದ ತಳಭಾಗದಲ್ಲಿ ಕುಸಿತ
    ಊರ್ಮನೆ ಸಮಾಚಾರ

    ಬೈಂದೂರು ಒತ್ತಿನೆಣೆ ಗುಡ್ಡದ ತಳಭಾಗದಲ್ಲಿ ಕುಸಿತ

    Updated:11/06/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಸ್ಲೋಪ್ ಪ್ರೋಟೆಕ್ಷನ್ ವಾಲ್ ಪ್ಲಾಪ್, ಆತಂಕದಲ್ಲಿ ಹೆದ್ದಾರಿ ಪ್ರಯಾಣಿಕರು

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಮಳೆಯ ಅಬ್ಬರಕ್ಕೆ ಒತ್ತಿನೆಣೆ ಗುಡ್ಡದ ತಳಭಾಗ ಬಿರುಕು ಬಿಟ್ಟಿದೆ.ಗುಡ್ಡ ಕುಸಿಯದಂತೆ ಅಳವಡಿಸಿದ ಹೈಟೆಕ್ ತಂತ್ರಜ್ಞಾನದ ಸ್ಲೋಪ್ ಪ್ರೋಟೆಕ್ಷನ್ ವಾಲ್ ಪ್ಲಾಪ್ ಆಗಿದೆ.ಕಾಂಕ್ರೀಟ್ ಅಳವಡಿಸಿದ ಜಾಗದಲ್ಲಿ ನೀರು ಜಿನುಗಲು ಪ್ರಾರಂಭವಾಗಿರುವುದು ಕಳೆದ ವರ್ಷದ ಘಟನೆ ಮರುಕಳಿಸುವುದೇ ಎನ್ನುವ ಆತಂಕ ಸಾರ್ವಜನಿಕರಲ್ಲಿ ಕಾಡುತ್ತಿದೆ.

    ಬೈಂದೂರಿನ ಪಾಲಿಗೆ ಅಧಿಕಾರಿಗಳ ನಿರ್ಲಕ್ಷವೇ ಇಂತಹ ಅವೈಜ್ಞಾನಿಕ ಕಾಮಗಾರಿಗೆ ಕಾರಣವಾಗಿದೆ.ಇಲ್ಲಿನ ಭೌಗೋಳಿಕ ಅಂಶಗಳ ಜ್ಞಾನವಿಲ್ಲದ ತಂತ್ರಜ್ಞರ ಯೋಜನೆಯಿಂದ ಪ್ರತಿ ವರ್ಷ ಸಮಸ್ಯೆ ಮರುಕಳಿಸುವಂತೆ ಮಾಡಿದೆ.ಗುರುವಾರ ರಾತ್ರಿ ಸುರಿದ ಮಳೆಗೆ ಗುಡ್ಡದ ಅಂಚಿನಲ್ಲಿ ಮಣ್ಣು ಜಾರದಂತೆ ನಿರ್ಮಿಸಿದ ಕಾಂಕ್ರೀಟ್ ದಂಡೆ ಕೊಚ್ಚಿ ಹೋಗಿದೆ.ಮಾತ್ರವಲ್ಲದೆ ಸಂಪೂರ್ಣ ಸ್ಲೋಪ್ ಪ್ರೋಟೆಕ್ಷನ್ ವಾಲ್ ಬಿರುಕು ಬಿಡುವ ಸಾಧ್ಯತೆಗಳಿವೆ. ಗುಡ್ಡದ ಶೇಡಿ ಮಣ್ಣು ಚರಂಡಿಗೆ ಇಳಿಯುತ್ತಿದೆ.ಕಾಂಕ್ರೀಟ್ ಹೊದಿಕೆ ಕುಸಿಯುವ ಸಾಧ್ಯತೆಗಳಿವೆ. ಪ್ರಾರಂಭದಲ್ಲೂ ಗುಡ್ಡ ಕುಸಿಯುವ ಭೀತಿಯಲ್ಲಿರುವ ಕುರಿತು ಹಾಗೂ ಮಳೆಗಾಲದಲ್ಲಿ ಕಳೆದ ವರ್ಷದ ಘಟನೆ ಮರುಕಳಿಸುವ ಸಾಧ್ಯತೆ ಬಗ್ಗೆ ಉದಯವಾಣಿ ಬೆಳಕು ಚೆಲ್ಲಿತ್ತು. ಒಂದೆರಡು ದಿನ ನಿರಂತರ ಮಳೆ ಸುರಿದರೆ ಸಂಪೂರ್ಣ ರಸ್ತೆ ತಡೆ ಉಂಟಾಗುವ ಸಾಧ್ಯತೆಗಳಿವೆ. ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.

    ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಒತ್ತಿನೆಣೆ ಗುಡ್ಡವನ್ನು ಕೊರೆದು ಇಬ್ಬಾಗ ಮಾಡಲಾಗಿದೆ. ಮೇಲ್ಭಾಗದಲ್ಲಿ ಮ್ಯಾಂಗನೀಸ್ ಕಲ್ಲಿನ ಪೊಟೆರೆಗಳಿದ್ದರು ಸಹ ಅಡಿಭಾಗದಲ್ಲಿ ಸಂಪೂರ್ಣ ಶೇಡಿ ಮಣ್ಣಿನಿಂದ ಆವೃತವಾಗಿದೆ.ಮಾತ್ರವಲ್ಲದೆ ಗುಡ್ಡದ ಅಂಚಿನಲ್ಲಿ ಜಿನುಗುವ ನೀರಿನ ಸೆಲೆಯಿಂದಾಗಿ ಮಣ್ಣಿನ ಅಂಟಿನ ಸಾಂದ್ರತೆ ಕಡಿಮೆಯಾಗಿ ಕಳೆದ ಬಾರಿ ಸಂಪೂರ್ಣ ಗುಡ್ಡವೆ ಕುಸಿದು ಬಿದ್ದಿತ್ತು.ಹೀಗಾಗಿ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದ ಐ.ಆರ್.ಬಿ. ಕಂಪೆನಿ ಗುಡ್ಡವನ್ನು ಕೊರೆದು ಕಬ್ಬಿಣದ ರಾಡ್ ಹಾಗೂ ಮೆಶ್ ಅಳವಡಿಸಿ ಅದರ ಮೇಲೆ ಸಂಪೂರ್ಣ ಕಾಂಕ್ರೀಟ್ ಮಾಡಲಾಗಿದೆ.ಇದರಿಂದ ಮಳೆಗಾಲದಲ್ಲಿ ನೀರು ಇಂಗದೆ ಸರಾಗವಾಗಿ ಹರಿದು ಹೋಗುತ್ತದೆ.ಮಾತ್ರವಲ್ಲದೆ ಗುಡ್ಡದ ಕೆಳಭಾಗದಲ್ಲಿ ಕಾಂಕ್ರಿಟ್ ಚರಂಡಿ ನಿರ್ಮಿಸಲಾಗಿದೆ.ಇದು ಬಂದೂರಿನಲ್ಲಿ ಮೊದಲ ಬಾರಿ ಅಳವಡಿಸಲಾಗಿದೆ.ಕಾಂಕ್ರಿಟ್ ಅಳವಡಿಸಿದ ಪಕ್ಕದಲ್ಲಿ ಲವಂಚ ಮಾದರಿಯ ಹುಲ್ಲುಗಳನ್ನು ನೆಡಲಾಗಿದೆ.ಇದರ ಬೇರುಗಳು ಆಳಕ್ಕೆ ಇಳಿಯುವುದರಿಂದ ಮಣ್ಣು ಕದಲದಂತೆ ಹಿಡಿದಿಟ್ಟುಕೊಳ್ಳುತ್ತದೆ ಎನ್ನುವುದು ಕಂಪೆನಿಯ ಲೆಕ್ಕಾಚಾರವಾಗಿದೆ.

    ಈ ಕುರಿತು ಪ್ರತಿಕ್ರಯಿಸಿದ ಐ.ಆರ್.ಬಿ ಪ್ರೋಜೆಕ್ಟ್ ಮೆನೇಜರ್ ಯೋಗೇಂದ್ರಪ್ಪ ಗುಡ್ಡ ಕುಸಿಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಅಳವಡಿಸಿದ್ದೇವೆ.ಗುಡ್ಡದ ಪಕ್ಕದಲ್ಲಿ ಬೆಳೆಸಿದ ಆಸ್ಟ್ರೇಲಿಯನ್ ಮೂಲದ ಗಿಡಗಳು ಬೆಳೆಯಲು ಕನಿಷ್ಟ ಆರರಿಂದ ಹತ್ತು ತಿಂಗಳು ಬೇಕಾಗುತ್ತದೆ.ಒಂದು ತಿಂಗಳ ಹಿಂದೆ ನೆಟ್ಟಿರುವುದರ ಪರಿಣಾಮ ಬೇರು ಮಣ್ಣನ್ನು ಸೇರಿಕೊಳ್ಳದೆ ಕುಸಿಯುತ್ತಿದೆ.ಕಾಂಕ್ರಿಟ್ ಅಳವಡಿಕೆಯ ಸ್ಲೋಪ್ ಪ್ರೋಟೆಕ್ಷನ್ ವಾಲ್ ಕುಸಿಯುವ ಬಗ್ಗೆ ಆತಂಕ ಬೇಡ ಯಾವುದೇ ರೀತಿಯಲ್ಲೂ ಸಹ ಕಳೆದ ವರ್ಷದಂತೆ ಘಟನೆ ಮರುಕಳಿಸುವುದಿಲ್ಲ .ಮಳೆಗಾಲದಲ್ಲಿ ಮುನ್ನೆಚ್ಚರಿಕೆ ವಹಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ಇಲ್ಲಿನ ಒತ್ತಿನೆಣೆ ಗುಡ್ಡ ಕುಸಿತಕ್ಕೆ ಸಮೀಪದಲ್ಲಿರುವ ರಾಘವೇಂದ್ರ ಸ್ವಾಮಿಗಳ ಮುನಿಸು ಕಾರಣವೆಂದು ಸ್ಥಳೀಯರ ಅಭಿಪ್ರಾಯವಾಗಿದೆ.ಈ ಬಾರಿ ಐ.ಆರ್.ಬಿ ಕಂಪೆನಿ ಅಧಿಕಾರಿಗಳು ರಾಘವೇಂದ್ರ ಮಠಕ್ಕೆ ಪ್ರತ್ಯೇಕ ರಸ್ತೆ ನಿರ್ಮಿಸಿ ಕೊಟ್ಟಿದ್ದಾರೆ. ಆದರೆ ಆ ರಸ್ತೆಯೂ ಮಳೆಯಿಂದ ಕೊರೆದು ಹೋಗಿದೆ.

    ಸ್ಥಳಕ್ಕೆ ಎ.ಸಿ , ಶಾಸಕರ ಭೇಟಿ

    ಒತ್ತಿನೆಣೆ ಗುಡ್ಡ ಕುಸಿತ ಸ್ಥಳಕ್ಕೆ ಕುಂದಾಪುರ ಉಪವಿಭಾಗಾಧಿಕಾರಿ ಭೂಬಾಲನ್ ಹಾಗೂ ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿಯವರು ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

    ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ ಪುರಂದರ ಹೆಗ್ಡೆ, ಬೈಂದೂರು ಆರಕ್ಷಕ ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್, ಗ್ರಾಮಕರಣಿಕ ಮಂಜುನಾಥ ಬಿಲ್ಲವ ಹಾಜರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    5 + 4 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.