ಗಂಗೊಳ್ಳಿ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಠೋಬ ಭಜನಾ ಮಂಡಳಿ ಕೊಚ್ಚಿನ್ ಇವರಿಂದ ಭಜನಾ ಸೇವೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಅಧಿಕ ಮಾಸದ ಪ್ರಯುಕ್ತ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವಿಠೋಬ ಭಜನಾ ಮಂಡಳಿ ಕೊಚ್ಚಿನ್ ಇವರಿಂದ ಭಜನಾ ಸೇವೆ ನೆರವೇರಿತು.

Call us

Click Here

ಕೊಚ್ಚಿನ್‌ನಿಂದ ಆಗಮಿಸಿದ ಶ್ರೀ ವಿಠೋಬ ಭಜನಾ ಮಂಡಳಿ ಸದಸ್ಯರು ನರೇಶ ಪೈ ನೇತೃತ್ವದಲ್ಲಿ ಸುಮಾರು 2 ಗಂಟೆ ಕಾಲ ಭಜನೆ ಹಾಡಿ ಭಜನಾ ಸೇವೆಯನ್ನು ಶ್ರೀದೇವರಿಗೆ ಸಮರ್ಪಿಸಿದರು.

ಗಂಗೊಳ್ಳಿ ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ ಸ್ವಾಗತಿಸಿದರು. ದೇವಳದ ಆಡಳಿತ ಮಂಡಳಿ ಸದಸ್ಯ ವೇದಮೂರ್ತಿ ಜಿ.ವೇದವ್ಯಾಸ ಕೆ.ಆಚಾರ್ಯ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ನಿನಾದ ಸಂಸ್ಥೆಯ ಪದಾಧಿಕಾರಿಗಳು, ಜಿಎಸ್‌ಬಿ ಸಮಾಜಬಾಂಧವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Leave a Reply