ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಮಲೇರಿಯಾ ನಿರ್ಮೂಲನಾ ಮಾಸಾಚರಣೆ ಕಾರ್ಯಕ್ರಮ ಜರುಗಿತು.
ಇದರ ಅಂಗವಾಗಿ ಕುಂದಾಪುರ ಸರಕಾರಿ ಆಸ್ಪತ್ರೆಯ ಹಿರಿಯ ಆರೋಗ್ಯ ಸಹಾಯಕ ಅಧಿಕಾರಿಗಳಾದ ಸದಾನಂದ ಹೆಬ್ಬಾರ್ ಇವರು ಮಲೇರಿಯಾ ರೋಗದ ಲಕ್ಷಣಗಳು, ಪರಿಣಾಮ ಮತ್ತು ಮಲೇರಿಯಾವನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಸೂಕ್ತ ಮಾಹಿತಿ ನೀಡಿದರು.
ನಾಗರೀಕ ಸಹಾಯವಾಣಿ ಕೇಂದ್ರದ ಅಧಿಕಾರಿಯಾದ ಕು. ಶಾರದಾ ಇವರು ಸಾರ್ವಜನಿಕರಿಗೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದೊರೆಯವ ವಿವಿಧ ಆರೋಗ್ಯ ಸೇವೆಗಳು ಮತ್ತು ಸೌಲಭ್ಯಗಳ ಬಗ್ಗೆ ತಿಳಿಸಿದರು. .
ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ, ಉಪನ್ಯಾಸಕರಾದ ರವಿ ಉಪಾಧ್ಯಾಯ, ಕುಮಾರಿ ಕವಿತಾ ಆಚಾರ್ಯ ಹಾಗೂ ಸಿಬ್ಬಂದಿಗಳಾದ ಮಂಜುನಾಥ ಶೆಟ್ಟಿ ಮತ್ತು ನಾಗರಾಜ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹಿಂದಿ ಉಪನ್ಯಾಸಕಿ ಜಯಶೀಲಾ ಪೈ ಕಾರ್ಯಕ್ರಮ ನಿರ್ವಹಿಸಿದರು.