ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಜಿ.ಎಸ್.ವಿ.ಎಸ್ ಅಸೋಷಿಯೇಷನ್ 2017-18ರ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಅಭಿನಂದನಾ ಕಾರ‍್ಯಕ್ರಮ ಜರುಗಿತು.

Call us

Click Here

ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಂಬೈನ ದೇವೂ ಟೂಲ್ಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕರಾದ ದೇವರಾಯ ಎಮ್ ಶೇರುಗಾರ್ ಮಾತನಾಡಿ ಈಗಿನ ಜಗತ್ತಿನಲ್ಲಿ ವಿದ್ಯಾರ್ಥಿಗಳ ಉನ್ನತಿಗೆ ಹೇರಳ ಅವಕಾಶಗಳು ಲಭ್ಯವಿದೆ.ಅವುಗಳನ್ನು ವಿಶ್ಲೇಷಿಸಿ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಖಚಿತಪಡಿಸಿಕೊಂಡು ಅದನ್ನು ಸಾಧಿಸುವಲ್ಲಿ ಅಗತ್ಯವಾದ ಪರಿಶ್ರಮವನ್ನು ಧಾರೆಯೆರೆಯಬೇಕು ಆಗ ನಿಖರ ಯಶಸ್ಸು ಸಿಗುತ್ತದೆ ಎಂದು ಹೇಳಿದರು.

ನಾವು ಬಾಲ್ಯದ ಎಲ್ಲಾ ಅನುಭವಗಳನ್ನು ಧನಾತ್ಮಕವಾಗಿ ಸ್ವೀಕರಿಸಿ ಸುತ್ತಲಿನ ಪ್ರೇರಣೆಗಳನ್ನು ಬಳಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ಹೊಂದುವುದು ಪ್ರತಿಯೊಬ್ಬರ ಮೊದಲ ಆದ್ಯತೆಯಾಗಬೇಕು ಎಂದು ಅವರು ಹೇಳಿದರು

ಚಿನ್ಮಯೀ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಉಮೇಶ್ ಪುತ್ರನ್ ಶುಭ ಹಾರೈಸಿ ತಮ್ಮ ವತಿಯಿಂದ ಸರಸ್ವತಿ ವಿದ್ಯಾಲಯದ ವಿಜ್ಞಾನದ ಎರಡು ವಿಭಾಗಗಳಲ್ಲಿನ ಪ್ರಥಮ ಸ್ಥಾನಿಗಳಾದ ಚೈತ್ರಾ ಶ್ಯಾನುಭಾಗ್ ಮತ್ತು ಸುಜನ ಇವರಿಗೆ ತಲಾ 25,000 ರೂಪಾಯಿಗಳ ನಗದು ಬಹುಮಾನವನ್ನು ವಿತರಿಸಿದರು.ಇದೇ ಸಂದರ್ಭದದಲ್ಲಿ ನಗರ ಕೃಷ್ಣಾನಂದ ನಾಯಕ್ ಕೊಡಮಾಡಿದ 25,000 ರೂಪಾಯಿಗಳ ನಗದು ಬಹುಮಾನವನ್ನು ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸ್ನೇಹಾ ಅವರಿಗೆ ನೀಡಲಾಯಿತು.

ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಅಧ್ಯಕ್ಷ ಡಾ.ಕಾಶೀನಾಥ್ ಪೈ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಕಾರ‍್ಯದರ್ಶಿ ಹೆಚ್. ಗಣೇಶ್ ಕಾಮತ್ ಅತಿಥಿಗಳನ್ನು ಪರಿಚಯಿಸಿದರು. ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಧ್ಯಾಯರಾದ ಕೆ ಸದಾನಂದ ವೈದ್ಯ. ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಭಾರ ಮುಖ್ಯೋಪಧ್ಯಾಯಿನಿ ಸುಜಾತ ದೇವಾಡಿಗ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ದೇವರಾಯ ಎಮ್ ಶೇರುಗಾರ್ ಮತ್ತು ಡಾ. ಉಮೇಶ್ ಪುತ್ರನ್ ಅವರನ್ನು ಸನ್ಮಾನಿಸಲಾಯಿತು.

Click here

Click here

Click here

Click Here

Call us

Call us

ಸರಸ್ವತಿ ವಿದ್ಯಾಲಯ ವಿದ್ಯಾ ಸಂಸ್ಥೆಗಳ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಿ.ಎಸ್.ವಿ.ಎಸ್ ಅಸೋಷಿಯೇಷನ್ ನ ಸದಸ್ಯ ರಾಮನಾಥ ನಾಯಕ್ ಸ್ವಾಗತಿಸಿದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ‍್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲೆ ಕವಿತಾ ಎಮ್ ಸಿ ಧನ್ಯವಾದಗೈದರು.

 

Leave a Reply