Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಡುತ್ತಿರುವ ಮರಳು ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ಅಗತ್ಯ: ಕೆ. ಪ್ರತಾಪ್‌ಚಂದ್ರ ಶೆಟ್ಟಿ
    ಊರ್ಮನೆ ಸಮಾಚಾರ

    ಕಾಡುತ್ತಿರುವ ಮರಳು ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ಅಗತ್ಯ: ಕೆ. ಪ್ರತಾಪ್‌ಚಂದ್ರ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ : ಇಲ್ಲಿನ ಆರ್‌ಎನ್‌ ಶೆಟ್ಟಿ ಸಭಾಭವನದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳ ಸಭೆ ಜರುಗಿತು.

    Click Here

    Call us

    Click Here

    ಈ ಸಭೆಯನ್ನು ಉದ್ದೇಶಿಸಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹಾಗೂ ವಿಧಾನಪರಿಷತ್‌ ಸದಸ್ಯ ಕೆ.ಪ್ರತಾಪ್‌ಚಂದ್ರ ಶೆಟ್ಟಿರವರು ಮಾತನಾಡಿ ಜಿಲ್ಲೆಯಲ್ಲಿ ಮರಳು ತೆಗೆಯ ಬಾರದು ಎಂದು ನಿರ್ಬಂಧ ವಿಧಿಸುವ ಅಧಿಕಾರಿಗಳು ಜಿಲ್ಲೆಯ ಜನರಿಗೆ ಅಗತ್ಯವಾಗಿರುವ ಮರಳನ್ನು ಒದಗಿಸಬೇಕು ಎನ್ನುವ ಬದ್ದತೆಯನ್ನು ಪ್ರದರ್ಶಿಸಬೇಕು. ಜಿಲ್ಲೆಯ ಜನ ಸಾಮಾನ್ಯರ ಪರ ರೈತ ಸಂಘದ ಧ್ವನಿ ಇರುತ್ತದೆ ಹೊರತು ಇನ್ನಾರದ್ದೋ ಹಿತಾಸಕ್ತಿಯನ್ನು ಕಾಯುವ ಅನಿವಾರ್ಯತೆ ನಮಗಿಲ್ಲ ಎಂದು ಹೇಳಿದರು.

    ಕಪ್ಪು ಹಣದಿಂದ ಮನೆ ಹಾಗೂ ಕಟ್ಟಡ ನಿರ್ಮಿಸುವವರಿಗೆ ಮರಳು ಸಮಸ್ಯೆ ಬಾಧಿಸುವುದಿಲ್ಲ. ಕಷ್ಟದಿಂದ ದುಡಿಮೆ ಮಾಡಿ ಜೀವನದಲ್ಲಿ ಮೊದಲ ಬಾರಿ ಸ್ವಂತ ಮನೆ ಮಾಡುವವರನ್ನು ಹಾಗೂ ಸರ್ಕಾರದ ಯೋಜನೆಯ ಸಹಕಾರದಿಂದ ಮನೆ ಕಟ್ಟಿಕೊಳ್ಳುವವರನ್ನು ಇಲ್ಲಿನ ಮರಳು ಸಮಸ್ಯೆ ಕಣ್ಣೀರು ತರುಸುತ್ತಿದೆ ಎನ್ನುವ ಸತ್ಯ ಅಧಿಕಾರಿಗಳಿಗೆ ಯಾಕೆ ಅರ್ಥವಾಗುತ್ತಿಲ್ಲ. ಹೊರ ಜಿಲ್ಲೆಗಳಿಗೆ ಮರಳು ಸಾಗಾಟಕ್ಕೆ ನಿರ್ಬಂಧ ಇದ್ದರೂ, ಇಲ್ಲಿನ ಕೆಲವು ವ್ಯವಸ್ಥೆಗಳಿಂದಾಗಿ ಇಲ್ಲಿನ ಮರಳುಗಳು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಜಿಲ್ಲೆಯ ಗಡಿ ದಾಟುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ವರಾಹಿ ನದಿ ತಟಗಳಲ್ಲಿ ದಿಬ್ಬಗಳು ಕಣ್ಣಿಗೆ ಕಾಣೋದಿಲ್ಲ ಎನ್ನುವ ಒಂದೆ ಕಾರಣಕ್ಕಾಗಿ ಸಿಹಿ ನೀರಿನ ಮರಳುಗಾರಿಕೆಗೂ ತಡೆಯುಂಟಾಗಿದೆ. ಅಧಿಕಾರಿಗಳ ತಪ್ಪು ಅಭಿಪ್ರಾಯಗಳಿಂದಾಗಿ ವರಾಹಿ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಕ್ಕೆ ಇದೀಗ ಮರಳುಗಾರಿಕೆಯೂ ಬಲಿಯಾಗುತ್ತಿರುವುದು ನಮ್ಮ ವ್ಯವಸ್ಥೆಯ ದುರಂತ ಎಂದು ಖಾರವಾಗಿ ಹೇಳಿದರು.

    ಜಿಲ್ಲೆಯ ಜನರನ್ನು ಬಿಡದಂತೆ ಕಾಡುತ್ತಿರುವ ಮರಳು ಸಮಸ್ಯೆಗೆ ಒಂದು ಶಾಶ್ವತವಾದ ಪರಿಹಾರ ಬೇಕು. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಇಬ್ಬಗೆಯ ನೀತಿಯಿಂದ ಸಮಸ್ಯೆ ಪರಿಹಾರವಾಗೋದಿಲ್ಲ. ಕಾಣದ ವ್ಯಕ್ತಿಗಳ ಹಿತಾಸಕ್ತಿ ಕಾಯುವ ಅನೀವಾರ್ಯತೆಯನ್ನು ಬಿಟ್ಟು ತೀರ್ಮಾನ ಕೈಗೊಳ್ಳಬೇಕು. ಮನೆಯ ಎದುರೇ ಮರಳು ದೊರಕುತ್ತಿದ್ದರೂ, ವಿದೇಶದಿಂದ ಬಂದ ಮರಳು ಚೀಲಗಳನ್ನು ಹೆಚ್ಚು ದುಡ್ಡು ಕೊಟ್ಟು ಖರೀದಿ ಮಾಡಬೇಕಾದ ಸ್ಥಿತಿ ನಮಗೆ ನಾಚೀಕೆಯನ್ನು ಉಂಟು ಮಾಡುತ್ತಿದೆ. ಈ ಸಮಸ್ಯೆಯ ಪರಿಕಾರಕ್ಕೆ ಪಕ್ಷಬೇಧ ಮರೆತು ಎಲ್ಲ ಸ್ತರದ ಜನಪ್ರತಿನಿಧಿಗಳು ಸಂಘಟಿತ ಪ್ರಯತ್ನ ಮಾಡಬೇಕು. ಈ ಪ್ರಯತ್ನದಲ್ಲಿ ಯಶಸ್ಸು ಕಾಣದೆ ಇದ್ದರೆ ಸಮಾನ ಮನಸ್ಕರೊಡಗೂಡಿ ಸಮಸ್ಯೆಯ ಪರಿಕಾರಕ್ಕಾಗಿ ಜಿಲ್ಲಾ ರೈತ ಸಂಘ ಗ್ರಾಮ ಮಟ್ಟದಲ್ಲಿ ಹೋರಾಟ ಸಂಘಟಿಸಲಿದೆ ಎಂದು ಎಚ್ಚರಿಕೆ ನೀಡಿದರು.

    ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡುತ್ತಿರುವ ವಿದ್ಯುತ್‌ ಕಣ್ಣು ಮುಚ್ಚಾಲೆಗೆ ಕಡಿವಾಣ ಹಾಕಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಗ್ರಾಮೀಣ ಭಾಗದಲ್ಲಿ ನಿಲ್ಲಿಸಲಾಗಿರುವ ಬಸ್ಸುಗಳ ಸಂಚಾರಕ್ಕೆ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು. ರೈತರಿಗಾಗಿ ಇರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಗ್ರಾಮೀಣ ಭಾಗದಲ್ಲಿನ ರೈತರಿಗೆ ತಲುಪಲು ಅಧಿಕಾರಿಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಈ ಹಿಂದೆ ಸರ್ಕಾರ ಹೇಳಿರುವಂತೆ ಅರ್ಜಿ 50 ರ ಅಡಿಯಲ್ಲಿ ಅಕ್ರಮ–ಸಕ್ರಮ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ಕುಮ್ಕಿ ಭೂಮಿ ಇತ್ಯರ್ಥಕ್ಕೆ ಇರುವ ಕಾನೂನು ತೊಡಕುಗಳ ನಿವಾರಣೆಗೆ ಸರ್ಕಾರ ಮುಂದಾಗಬೇಕು. ಪಹಣೆ ಪತ್ರದ ಹಿಂಭಾಗದಲ್ಲಿ ಭೂಮಿಯ ನಕ್ಷೆಯನ್ನು ಮುದ್ರಿಸಲು ಕ್ರಮ ಕೈಗೊಳ್ಳಬೇಕು ಎನ್ನುವ ವಿಚಾರಗಳ ಬಗ್ಗೆ ಮಾತನಾಡಿದ ಅವರು ಈ ಎಲ್ಲ ವಿಚಾರಗಳ ಕುರಿತು ಸಂಬಂಧಿಸಿದ ಅಧಿಕಾರಿಗಳ ಹಾಗೂ ಸರ್ಕಾರದ ಪ್ರಮುಖರಿಗೆ ರೈತ ಸಂಘದ ಮೂಲಕ ಮನವಿ ಮಾಡಿ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

    Click here

    Click here

    Click here

    Call us

    Call us

    ಪ್ರಾಕೃತಿಕ ವಿಕೋಪದ ಬೆಳೆ ಹಾನಿಗೆ ಹೆಚ್ಚಿನ ಪರಿಹಾರ. ಉಡುಪಿಗೆ ಕುಡಿಯುವ ನೀರಿಗಾಗಿ ವಾರಾಹಿ ನದಿಯಿಂದ ನೀರು ಕೊಂಡೊಯ್ಯುವುದು. ರೈತರ ಸಾಲ ಮನ್ನಾ. ಕೃಷಿ ಇಲಾಖೆಯ ಸವಲತ್ತುಗಳ ಸಮಗ್ರ ಬಳಕೆ. ಮಕ್ಕಳ ಬಸ್‌ ಪಾಸುಗಳ ರದ್ದತೆ ಸೇರಿದಂತೆ ಹಲವು ವಿಚಾರಗಳು ಸಭೆಯಲ್ಲಿ ಪ್ರಸ್ತಾಪವಾದವು.

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್‌.ಪ್ರಕಾಶ್ಚಂದ್ರ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹದ್ದೂರು ರಾಜೀವ್‌ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದೇವಾನಂದ ಶೆಟ್ಟಿ ಬಸ್ರೂರು, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ ಹೆಗ್ಡೆ ಕೊಳ್ಕೆರೆ, ತಾಲ್ಲೂಕು ಟಿಎಪಿಸಿಎಂಎಸ್‌ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ ಬಿದ್ಕಲ್‌ಕಟ್ಟೆ, ನ್ಯಾಯವಾದಿ ಕೃಷ್ಣರಾಜ ಶೆಟ್ಟಿ, ರೈತ ಸಂಘದ ಪ್ರಮುಖರಾದ ಸತೀಶ್‌ ಕಿಣಿ ಬೆಳ್ವೆ, ರಾಜೇಶ್‌ ಕೆ.ಸಿ ಕುಂದಾಪುರ, ಸಂತೋಷ್‌ ಶೆಟ್ಟಿ ಬಲಾಡಿ, ಕೃಷ್ಣದೇವ ಕಾರಂತ್‌ ಕೋಣಿ, ಸದಾಶಿವ ಶೆಟ್ಟಿ ಶಂಕರನಾರಾಯಣ, ದಿನೇಶ್‌ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ, ಸೀತಾರಾಮ ಗಾಣಿಗ, ಉದಯ್‌ಕುಮಾರ ಶೆಟ್ಟಿ ವಂಡ್ಸೆ, ರಾಜೂ ಶೆಟ್ಟಿ ಶಾಡಿಗುಂಡಿ, ಕಿಶೋರ ಶೆಟ್ಟಿ ಮೈರಕೊಮೆ, ಚೇತನ್‌ ರೈ ದಾಸರಬೆಟ್ಟು, ಚೋರಾಡಿ ಅಶೋಕಕುಮಾರ ಶೆಟ್ಟಿ, ಮನೋಹರ ಶೆಟ್ಟಿ ಅಂಪಾರು, ಶೇಖರ ಶೆಟ್ಟಿ ಯಡ್ತಾಡಿ ಮುಂತಾದವರಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.