Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ನಮೃತಾ ಜಿಲ್ಲೆಗೆ ಪ್ರಥಮ
    ವಿಶೇಷ ವರದಿ

    ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ನಮೃತಾ ಜಿಲ್ಲೆಗೆ ಪ್ರಥಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಇಲ್ಲಿನ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಮೃತಾ ಜಿ. ನಾಯ್ಕ್ ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸುವ(592) ಮೂಲಕ ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಕುಂದಾಪುರ ತಾಲೂಕಿಗೆ ಕೀರ್ತಿ ತಂದಿದ್ದಾರೆ.

    Click Here

    Call us

    Click Here

    ಜಿ.ಬಿ. ನಾಯ್ಕ್ ಹಾಗೂ ಗಾಯತ್ರಿ ನಾಯ್ಕ್ ದಂಪತಿಯ ಪುತ್ರಿಯಾಗಿರುವ ನಮೃತಾ ಮೂಲತಃ ಬೈಂದೂರಿನವರಾಗಿದ್ದು ಪ್ರಸ್ತುತ ಕುಂದಾಪುರ ಚಿಕನ್ ಸಾಲ್ ರಸ್ತೆಯಲ್ಲಿನ ನಿವಾಸದಲ್ಲಿ ತನ್ನ ಅಜ್ಜಿಯಯೊಂದಿಗೆ ವಾಸವಾಗಿದ್ದಾರೆ. ಈಕೆಯ ತಂದೆ ಗೋವಾದ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು ತಾಯಿಯೂ ಅವರೊಂದಿಗೆ ನೆಲೆಸಿದ್ದಾರೆ.

    ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುವ ನಮೃತಾ, ತನ್ನ ತಂದೆ ತಾಯಿ ಮುಖ್ಯವಾಗಿ ಅಜ್ಜಿಯ ನಿರಂತರ ಪ್ರೋತ್ಸಾಹ ತನ್ನನ್ನು ಕಲಿಕೆಯನ್ನು ಹೆಚ್ಚು ತೊಡಗಿಸಿಕೊಳ್ಳುವಂತೆ ಮಾಡಿತ್ತು ಎಂದಿದ್ದಾರಲ್ಲದೇ, ಕುಂದಾಪುರ ಆರ್‌.ಎನ್‌. ಶೆಟ್ಟಿ ಪ.ಪೂ. ಕಾಲೇಜಿನ ತನ್ನ ಶಿಕ್ಷಕರ ಸಹಕಾರದಿಂದಾಗಿ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಹೇಳಿಕೊಂಡಿದ್ದಾರೆ.

    ಏರೋನಾಟಿಕಲ್ ವಿಭಾಗದಲ್ಲಿ ಎಂಜಿನಿಯರಿಂಗ್‌ ಮಾಡುವ ಬಯಕೆ ವ್ಯಕ್ತಪಡಿಸಿರುವ ನಮೃತಾ, ಸಿಇಟಿಯಲ್ಲಿಯೂ ಉತ್ತಮ ರ್ಯಾಂಕ್ ಗಳಿಸುವ ಭರವಸೆ ಹೊಂದಿದ್ದಾಳೆ. ಭಾಷಣ, ಡ್ರಾಯಿಂಗ್‌, ಟೇಬಲ್‌ ಟೆನ್ನಿಸ್‌ ಆಡುವುದು ಮುಂತಾದ ಹವ್ಯಾಸಗಳನ್ನು ಹೊಂದಿದ್ದರೂ ಅವುಗಳ ಜೊತೆಗೆ ಅಜ್ಜಿಯ ಮನೆಯಲ್ಲಿ ಹಾಗೂ ಕಾಲೇಜಿನಲ್ಲಿ ಕಲಿಕೆಗೆ ಪೂರಕ ವಾತಾವರಣ ದೊರೆತದ್ದು ಉತ್ತಮ ಅಂಕ ಗಳಿಸಲು ಸಾಧ್ಯವಾಯಿತು ಎಂದಿದ್ದಾಳೆ.

    ಆರ್. ಎನ್. ಶೆಟ್ಟಿ ಕಾಲೇಜಿಗೆ: ಶೆ.98 ಫಲಿತಾಂಶ

    Click here

    Click here

    Click here

    Call us

    Call us

    ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.98.18 ಫಲಿತಾಂಶ ಪಡೆದಿದ್ದು 276 ವಿದ್ಯಾರ್ಥಿಗಳ ಪೈಕಿ 271 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ನಮೃತಾ ಜಿ, ನಾಯ್ಕ್ 592 ಅಂಕ ಗಳಿಸುವ ಮೂಲಕ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

    ವಿದ್ಯಾರ್ಥಿಗಳ ಸಾಧನೆಯನ್ನು ಕುಂದಾಪುರ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಸುಕುಮಾರ್ ಶೆಟ್ಟಿ ಹಾಗೂ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ನವೀನಕುಮಾರ್ ಶೆಟ್ಟಿ ಪ್ರಶಂಸಿಸಿದ್ದಾರೆ.

    ಕುಂದಾಪ್ರ ಡಾಟ್ ಕಾಂ- editor@kundapra.com 

     ಕುಂದಾಪುರ ತಾಲೂಕಿನ ಸಮಗ್ರ ಸುದ್ದಿ, ಮಾಹಿತಿಗಾಗಿ ನಿಮ್ಮ ‘ಕುಂದಾಪ್ರ ಡಾಟ್ ಕಾಂ’ ನೋಡಿ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d