Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿಯಿಂದ ಗ್ರಾಮ ಪಂಚಾಯತ್‌ಗೆ ಮನವಿ
    ಊರ್ಮನೆ ಸಮಾಚಾರ

    ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿಯಿಂದ ಗ್ರಾಮ ಪಂಚಾಯತ್‌ಗೆ ಮನವಿ

    Updated:27/06/2018No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಗಂಗೊಳ್ಳಿ: ಗಂಗೊಳ್ಳಿಯ ಬಂದರು ಪ್ರದೇಶದ ಸಮೀಪ ನಿರ್ಮಿಸಲಾಗಿರುವ ಘನ ದ್ರವ ತ್ಯಾಜ್ಯ ವಿಂಗಡಣ ಕೇಂದ್ರ ನಿರ್ಮಾಣ ಕಾಮಗಾರಿಯ ತನಿಖೆ ಮತ್ತು ಅವ್ಯವಹಾರದ ತನಿಖೆ ನಡೆಸುವಂತೆ ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿ ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ ಬುಧವಾರ ಮನವಿ ಸಲ್ಲಿಸಿದೆ.

    Click Here

    Call us

    Click Here

    ಗಂಗೊಳ್ಳಿಯಲ್ಲಿ ಘನ ದ್ರವ ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಕಾರ್ಯಕ್ರಮ ನಡೆಸಲು ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದ ಸಮೀಪದಲ್ಲಿ ರೋಟರಿ ಸಂಸ್ಥೆಯವರು ನಿರ್ಮಿಸಿದ ಶೌಚಾಲಯ ಪ್ರದೇಶದಲ್ಲಿ ಸುಮಾರು 7.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಘನ ದ್ರವ ತ್ಯಾಜ್ಯ ವಿಂಗಡಣ ಕೇಂದ್ರ ನಿರ್ಮಾಣ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿ ಕೂಡ ಕಳಪೆಯಾಗಿದೆ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಎಚ್.ಎಸ್.ಚಿಕ್ಕಯ್ಯ ಪೂಜಾರಿ ಅವರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸೀತಾರಾಮ ಶೆಟ್ಟಿ ಅವರಿಗೆ ಗ್ರಾಮ ಪಂಚಾಯತ್ ಕಛೇರಿಯಲ್ಲಿ  ಮನವಿ ಸಲ್ಲಿಸಿದ್ದಾರೆ.

    ಶೌಚಾಲಯದ ಪ್ರಥಮ ಅಂತಸ್ತಿನಲ್ಲಿರುವ ಸ್ನಾನಗೃಹದ ಎಲ್ಲಾ ಜೋಡಣೆಗಳನ್ನು ತೆಗೆದು ಹಾಕಲಾಗಿದ್ದು ಬೇರಾವುದೇ ಕಾಮಗಾರಿ ನಿರ್ವಹಿಸಿಲ್ಲ. ಇರುವ ಏಕೈಕ್ ಬಾಗಿಲು ಕೂಡ ತುಕ್ಕು ಹಿಡಿದಿದೆ. ಮೇಲಂತಸ್ತಿನ ಒಳಗೆ ನೋಡಿದರೆ ಭೂತಬಂಗಲೆ ರೀತಿಯಲ್ಲಿ ಕಾಣುತ್ತಿದೆ. ನೆಲಅಂತಸ್ತಿನ ಸ್ಥಿತಿ ಕೂಡ ಇದಕ್ಕೆ ಹೊರತಾಗಿಲ್ಲ. ಘನ ದ್ರವ ತ್ಯಾಜ್ಯ ವಿಂಗಡಣ ಕೇಂದ್ರದ ಕಛೇರಿ ಎಂದು ಹೇಳಲಾಗುತ್ತಿರುವ ಇಲ್ಲಿ ವಿದ್ಯುತ್ ಜೋಡಣೆ ಕಾಮಗಾರಿ ಸರಿಯಾಗಿ ನಡೆದಿಲ್ಲ. ವಿದ್ಯುತ್ ತಂತಿಗಳು ಕೈಗೆ ತಾಗುವಷ್ಟು ಕೆಳ ಮಟ್ಟದಲ್ಲಿದೆ. ಒಡೆದು ಹೋದ ಕಡೆಗಳಲ್ಲಿ ತೇಪೆ ಕೂಡ ಹಚ್ಚದೆ ಅದರ ಮೇಲೆ ಬಣ್ಣ ಬಳಿಯಲಾಗಿದೆ. ಕಟ್ಟಡದ ಒಳಗೆ ವಿದ್ಯುತ್ ಜೋಡಣೆ ಹೊರತುಪಡಿಸಿದರೆ ಬೇರೆ ಯಾವುದೇ ರೀತಿಯ ಬಣ್ಣ ಬಳಿಯುವ ಅಥವಾ ಇನ್ನಿತರ ಕಾಮಗಾರಿಯನ್ನು ನಿರ್ವಹಿಸಿಲ್ಲ. ಕಟ್ಟಡದ ಹೊರ ಭಾಗವನ್ನು ಮಾತ್ರ ಬಣ್ಣ ಬಳಿದು ಸುಂದರಗೊಳಿಸಲಾಗಿದೆ. ಕಟ್ಟಡದ ಹೊರಭಾಗದಲ್ಲಿ ತಗಡು ಹೊದಿಕೆಯ ಶೆಡ್ ನಿರ್ಮಾಣ ಮಾಡಿರುವುದು ಬಿಟ್ಟರೆ ಶೌಚಾಲಯ ಕಟ್ಟಡದಲ್ಲಿ ಇನ್ನಾವುದೇ ಕಾಮಗಾರಿ ಮಾಡಿರುವುದಿಲ್ಲ. ಪ್ರಸ್ತುತ ನಿರ್ವಹಿಸಿದ ಈ ಕಾಮಗಾರಿಗಳಿಗೆ ಸುಮಾರು 7.5 ಲಕ್ಷ ರೂ. ಖರ್ಚಾಗಿದೆ ಎಂದು ಹೇಳುತ್ತಿರುವುದು ತೀವ್ರ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಮನವಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ.

    ಹಳೆ ಕಟ್ಟಡವನ್ನು ನವೀಕರಣ ಮತ್ತು ಶೆಡ್ ನಿರ್ಮಾಣಕ್ಕೆ ಸುಮಾರು 7.5 ಲಕ್ಷ ರೂ. ಖರ್ಚು ಮಾಡಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದ್ದು, ಶೌಚಾಲಯ ಕಟ್ಟಡವನ್ನು ನವೀಕರಣ ಮಾಡದೇ ಕೇವಲ ಶೆಡ್ ನಿರ್ಮಾಣ ಮಾಡಲು ಲಕ್ಷಾಂತರ ರೂ. ಖರ್ಚು ಮಾಡಿರುವ ಹಿಂದೆ ಭಾರಿ ಗೋಲ್‌ಮಾಲ್ ನಡೆದಿರುವ ಶಂಕೆ ಇದ್ದು, ಕಾಮಗಾರಿ ಕೂಡ ಕಳಪೆಯಾಗಿದೆ. ಆದ್ದರಿಂದ ಕಾಮಗಾರಿ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಿ, ಕಟ್ಟಡ ವ್ಯವಸ್ಥಿತವಾಗಿ ಸಿದ್ಧಗೊಂಡ ಬಳಿಕ ಕಟ್ಟಡದ ಉದ್ಘಾಟನೆ ನಡೆಸಬೇಕು. ಈಗ ಇರುವ ಸ್ಥಿತಿಯಲ್ಲಿ ಹಾಗೂ ಕಾಮಗಾರಿ ಬಗ್ಗೆ ತನಿಖೆ ನಡೆಸದೆ ಉದ್ಘಾಟನೆ ನಡೆಸಲು ಮುಂದಾದಲ್ಲಿ ಸಾರ್ವಜನಿಕರೊಂದಿಗೆ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗುವುದು ಎಂದು ಮನವಿಯಲ್ಲಿ ತಿಳಿಸಿದೆ.

    ಮನವಿ ಸ್ವೀಕರಿಸಿ ಮಾತನಾಡಿದ ಆಡಳಿತಾಧಿಕಾರಿ ಸೀತಾರಾಮ ಶೆಟ್ಟಿ, ನಿರ್ಮಿತಿ ಕೇಂದ್ರದವರು ಕಾಮಗಾರಿಯನ್ನು ನಿರ್ವಹಿಸಿದ್ದು ಸಾರ್ವಜನಿಕರ ಆಕ್ಷೇಪಣೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕಾಮಗಾರಿಯ ತನಿಖೆ ನಡೆಸುವಂತೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

    Click here

    Click here

    Click here

    Click Here

    Call us

    Call us

    ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಿ.ಮಾಧವ, ನಾಗರಿಕ ಹೋರಾಟ ಸಮಿತಿ ಸಂಚಾಲಕ ಬಿ.ರಾಘವೇಂದ್ರ ಪೈ, ಸಮಿತಿಯ ಪ್ರಮುಖರಾದ ರತ್ನಾಕರ ಗಾಣಿಗ, ನವೀನ ದೊಡ್ಡಹಿತ್ಲು, ವಿಷ್ಣು ಕಾಂಚನ್, ವೆಂಕಟೇಶ ದೊಡ್ಡಹಿತ್ಲು, ಗಣೇಶ ಲೈಟ್‌ಹೌಸ್, ರಾಘವೇಂದ್ರ ಗಾಣಿಗ, ಯಶವಂತ ಖಾರ್ವಿ ಬೇಲಿಕೇರಿ, ಉದಯ ಖಾರ್ವಿ ಗುಡ್ಡೆಕೇರಿ, ವಿವೇಕ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    9 − nine =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.