Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಈಶಾನ್ಯ ರಾಜ್ಯದ ವಿದ್ಯಾರ್ಥಿಗಳು ಹೆಚ್ಚಿನ ಅವಕಾಶಗಳಿಗೆ ತೆರೆದುಕೊಳ್ಳಬೇಕು: ಪಿ.ಬಿ ಆಚಾರ‍್ಯ
    Uncategorized

    ಈಶಾನ್ಯ ರಾಜ್ಯದ ವಿದ್ಯಾರ್ಥಿಗಳು ಹೆಚ್ಚಿನ ಅವಕಾಶಗಳಿಗೆ ತೆರೆದುಕೊಳ್ಳಬೇಕು: ಪಿ.ಬಿ ಆಚಾರ‍್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡಬಿದಿರೆ: ಈಶಾನ್ಯ ಭಾಗದ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಪಡೆದ ನಂತರ ತಮ್ಮ ರಾಜ್ಯಕ್ಕೆ ತೆರಳಿ, ಅಲ್ಲಿನ ಅಭಿವೃದ್ದಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ನಾಗಲ್ಯಾಂಡ್ ನ ರಾಜ್ಯಪಾಲ ಪಿ.ಬಿ ಆಚಾರ‍್ಯ ತಿಳಿಸಿದರು.

    Click Here

    Call us

    Click Here

    ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಅಭ್ಯಸಿಸುತ್ತಿರುವ ಈಶಾನ್ಯ ರಾಜ್ಯದ ವಿದ್ಯಾರ್ಥಿಗಳ ಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಬೃಹತ್ ನೈಸಗಿಕ ಸಂಪನ್ಮೂಲವನ್ನು ಹೊಂದಿರುವ ಈಶಾನ್ಯ ರಾಜ್ಯಗಳು, ಅಭಿವೃದ್ದಿಯಲ್ಲಿ ನಮ್ಮ ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಿರೀಕ್ಷಿತ ಬೆಳವಣಿಗೆ ಹೊಂದಿಲ್ಲ. ಆ ಹಿನ್ನಲೆಯಲ್ಲಿ ಈಶಾನ್ಯ ರಾಜ್ಯದ ಯುವ ಜನತೆ ಕಾರ‍್ಯಪ್ರವೃತ್ತರಾಗಿ, ತಮ್ಮ ರಾಜ್ಯಗಳನ್ನು ಭಾರತ ದೇಶದ ಭೂಪಾಟದಲ್ಲಿ ವಿಶಿಷ್ಟ ಸ್ಥಾನ ಲಭಿಸುವಲ್ಲಿ ಶ್ರಮಿಸಬೇಕು ಎಂದರು. ತಾವು ಪಡೆದ ಜ್ಞಾನದಿಂದ ತಮ್ಮ ಕುಟುಂಬ, ಸಮುದಾಯ, ಸಮಾಜವನ್ನು ಉನ್ನತಿಗೇರಿಸುವಂತೆ ಆಗಬೇಕು. ಒಟ್ಟು ಭಾರತದ ೨೯ ರಾಜ್ಯಗಳನ್ನು ಒಂದು ಕಟ್ಟಡದ ಅಡಿಪಾಯದ ಕಂಬಿಗಳಿಗೆ ಹೊಲಿಸಿದ ಅವರು, ಆ ಕಂಬಿಗಳಲ್ಲಿ ಒಂದು ಕಂಬಿ ದುರ್ಬಲವಾದರೂ, ಕಟ್ಟಡದ ಬಾಳಿಕೆ ಕ್ಷೀಣಿಸುವಂತೆ, ಭಾರತದ ಏಕತೆಯ ದೃಷ್ಟಿಯಲ್ಲಿ ಎಲ್ಲಾ ರಾಜ್ಯಗಳು ಅಭಿವೃದ್ದಿಯಲ್ಲಿ ಸಮಾನತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದರು.

    ಒಂದು ದೇಶದ ಅಭಿವೃದ್ದಿಯಲ್ಲಿ ತ್ರಿ ’ಇ’ ಕ್ಯೂಬ್‌ಗಳಾದ, ಎಜುಕೇಶನ್, ಇಲೆಕ್ಟ್ರೀಸಿಟಿ, ಎಂಪ್ಲಾಯ್ಮೆಂಟ್ ಹೆಚ್ಚಿನ ಪ್ರಾದಾನ್ಯತೆಯನ್ನು ಪಡೆದಿವೆ. ಭಾರತದ ಪ್ರದಾನಿ ನರೇಂದ್ರ ಮೋದಿಯವರ ಆಶಯವಾದ ಸ್ವಾತಂತ್ರ್ಯದ ಫಲ ಈ ದೇಶದಲ್ಲಿ ಎಲ್ಲರಿಗೂ ಸಮಾನವಾಗಿ ಸಿಗುವಂತಾಗಬೇಕು. ಸರ್ವ ಶ್ರೇಷ್ಠ ಹಾಗೂ ಸಂಪದ್ಭರಿತ ಭಾರತದ ನಿರ್ಮಾಣದಲ್ಲಿ ನಾವೆಲ್ಲರೂ ಕೈಜೋಡಿಸಬೇಕು ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಈಶಾನ್ಯದ ಒಟ್ಟು ೮ ರಾಜ್ಯಗಳಲ್ಲಿನ ಏಳು ರಾಜ್ಯಗಳ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಎಂಟೂ ರಾಜ್ಯಗಳ ವಿದ್ಯಾರ್ಥಿಗಳು ಅಭ್ಯಸಿಸುವಂತಾಗಬೇಕು ಎಂದರು.

    ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಪೂರ್ವಂಚಲ ಸೀಮೆಯ ಅಭಿವೃದ್ದಿಯಲ್ಲಿ ಪಿ. ಬಿ. ಆಚಾರ‍್ಯರ ಕೊಡುಗೆ ಅಪಾರ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆ ಭಾಗದ ವಿದ್ಯಾರ್ಥಿಗಳೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ ಎಂದರು.

    Click here

    Click here

    Click here

    Call us

    Call us

    ಕಾರ‍್ಯಕ್ರಮದಲ್ಲಿ ಪಿ.ಬಿ ಆಚಾರ‍್ಯರ ಧರ್ಮಪತ್ನಿ ಕವಿತಾ ಆಚಾರ‍್ಯ, ಅಲಹಾಬಾದ್ ಐಐಐಟಿಯ ನಿರ್ದೇಶಕ ಡಾ ಪಿ ನಾಗಭೂಷಣ ಉಪಸ್ಥಿತರಿದ್ದರು. ಆಳ್ವಾಸ್ ಪದವಿಪೂರ್ವ ವಿದ್ಯಾರ್ಥಿನಿ ಮಣಿಪುರದ ಮಿರ್ಧಾನಿ ಶರ್ಮ ಕನ್ನಡದಲ್ಲಿ ನಿರೂಪಣೆ ಮಾಡಿದರು.

    ಈಶಾನ್ಯ ರಾಜ್ಯದ ವಿದ್ಯಾರ್ಥಿಗಳು ಹೆಚ್ಚಿನ ಅವಕಾಶಗಳಿಗೆ ತೆರೆದುಕೊಂಡು, ತಮ್ಮ ಅಭಿವೃದ್ಧಿಯ ಜೊತೆಗೆ ತಮ್ಮ ರಾಜ್ಯದ ಉನ್ನತೀಕರಣದಲ್ಲಿ ತೊಡಗಬೇಕು. ಇಲ್ಲಿನ ಯುವ ಜನತೆ ತಮ್ಮ ರಾಜ್ಯದಲ್ಲಿರುವ ನೈಸರ್ಗಿಕ ಸಂಪನ್ಮೂಲವನ್ನು ಬಳಸಿಕೊಂಡು ಉದ್ಯಮದಲ್ಲಿ ಹೆಚ್ಚು ತೊಡಗಿಕೊಳ್ಳವ ಅವಶ್ಯಕತೆ ಇದೆ. ಆ ಮೂಲಕ ಇನ್ನೊಬ್ಬರಿಗೆ ಉದ್ಯೋಗವನ್ನು ನೀಡುವಂತಾಗಬೇಕು ಎಂದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d