Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತ್ ಬಂದ್ : ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ
    ಬೈಂದೂರು

    ಭಾರತ್ ಬಂದ್ : ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಪೆಟ್ರೋಲ್. ಡೀಸಿಲ್, ಅನಿಲ ಸೇರಿದಂತೆ ಜೀವನಾವಶ್ಯಕ ಸಾಮಗ್ರಿಗಳ ಬೆಲೆ ಏರಿಕೆ ವಿರೋಧಿಸಿ ನೀಡಲಾದ ಭಾರತ್ ಬಂದ್ ಕರೆ ಅಂಗವಾಗಿ ಬೈಂದೂರಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸೋಮವಾರ ಕೆಲಕಾಲ ಹೆದ್ದಾರಿ ತಡೆ ನಡೆಸಿದರು. ಹೆದ್ದಾರಿ ಮೇಲೆ ಕುಳಿತು ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿ ಮೋದಿ ವಿರುದ್ಧ ಘೋಷಣೆ ಕೂಗಿದರು.

    Click Here

    Call us

    Click Here

    ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್‌ಕುಮಾರ್, ಧುರೀಣರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ರಿಯಾಜ್ ಅಹಮದ್, ಎಸ್. ರಾಜು ಪೂಜಾರಿ, ಜೆಡಿಎಸ್ ನಾಯಕ ರವಿ ಶೆಟ್ಟಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಗಗನಕ್ಕೇರಿರುವುದರಿಂದ, ಅದರ ಫಲವಾಗಿ ಅನ್ಯ ಜೀವನಾವಶ್ಯಕ ವಸ್ತುಗಳ ಬೆಲೆಯೂ ಹೆಚ್ಚುತ್ತಿರುವುದರಿಂದ ಜನ ಸಾಮಾನ್ಯದ ಬದುಕು ದುಸ್ತರವಾಗಿದೆ. ದೇಶದ ಅಭಿವೃದ್ಧಿಯೊಂದಿಗೆ ಬೆಲೆ ಹತೋಟಿಯ ಭರವಸೆ ನೀಡಿ ಅಧಿಕಾರಕ್ಕೇರಿದ ಬಿಜೆಪಿ ನೇತೃತ್ವದ ಮೋದಿ ಸರ್ಕಾರ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಯಾವುದನ್ನೂ ಈಡೇರಿಸಿಲ್ಲ. ರೂಪಾಯಿ ಬೆಲೆ ಪಾತಾಳಕ್ಕೆ ಕುಸಿದ ಕಾರಣ ಜನರ ಖರೀದಿ ಸಾಮರ್ಥ್ಯ ಕುಸಿದಿದೆ. ಕೇಂದ್ರ ಸರ್ಕಾರದ ಹಲವು ನೀತಿಗಳು ಜನವಿರೋಧಿಯಾಗಿವೆ. ದೇಶದಲ್ಲಿ ಇಂಧನ ಬೆಲೆ ಏರಿಕೆಯಾಗುತ್ತಿದ್ದರೆ, ನೇಪಾಲ, ಬಾಂಗ್ಲಾ ದೇಶಗಳಿಗೆ ಕಡಿಮೆ ಬೆಲೆಯಲ್ಲಿ ಅದನ್ನು ಒದಗಿಸಲಾಗುತ್ತಿದೆ. ಬೆಲೆ ಇಳಿಕೆಗೆ ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.

    ಪತ್ರಕರ್ತರ ಜತೆ ಪ್ರತ್ಯೇಕವಾಗಿ ಮಾತನಾಡಿದ ಗೋಪಾಲ ಪೂಜಾರಿ ಈಚೆಗೆ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಚುನಾವಣೆ ಎದುರಿಸಲು ’ಅಜೇಯ ಭಾರತ, ಅಟಲ್ ಬಿಜೆಪಿ’ ಘೋಷಣೆ ಹೊರಡಿಸಲಾಗಿದೆ. ಮೋದಿ ಅವರ ವರ್ಚಸ್ಸು ಕುಸಿದಿರುವುದನ್ನು ಅರ್ಥಮಾಡಿಕೊಂಡಿರುವ ಅವರು ಈಗ ಅಟಲ್ ಅವರ ಹೆಸರನ್ನು ಮುನ್ನೆಲೆಗೆ ತಂದು ಮತ ಗಳಿಸುವ ತಂತ್ರ ನಡೆಸುತ್ತಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ನೊಂದಿರುವ ಮತದಾರರು ಈ ತಂತ್ರಕ್ಕೆ ಮರುಳಾಗುವುದಿಲ್ಲ ಎಂದರು. ಇಂದಿನ ಬಂದ್ ಆರಂಭ ಮಾತ್ರ. ಬೆಲೆ ಏರಿಕೆ, ಹೆದ್ದಾರಿ ಯೋಜನೆ ಅನುಷ್ಠಾನದಲ್ಲಿ ಆಗಿರುವ ಲೋಪ ಖಂಡಿಸಿ ಇದೇ 18ರಂದು ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪರೇಶ್ ಮೇಸ್ತನ ಸಾವಿನ ತನಿಖೆ ನಡೆಸಲು ಸಿಬಿಐ ವೈಫಲ್ಯವನ್ನು ಖಂಡಿಸಿ ಬೈಂದೂರಿನಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದರು.

    Congress
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖಂಬದಕೋಣೆ ಸೊಸೈಟಿ: ನಿವೃತ್ತ ಶಾಖಾ ವ್ಯವಸ್ಥಾಪಕರಿಗೆ ಬೀಳ್ಕೊಡುಗೆ, ಸನ್ಮಾನ

    20/05/2026

    ಮಕ್ಕಳಿಗೆ ಪೋಷಕರೇ ಮಾದರಿ – ಪ್ರಾಶಸ್ತನ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸುನಿಲ್ ಹೆಚ್. ಜಿ

    17/04/2026

    ಎ.19ರಂದು ಹಳಗೇರಿ ಶ್ರೀ ಕೊಕ್ಕೇಶ್ವರ ವನದುರ್ಗಾ ದೇವಾಸ್ಥಾನದ ವರ್ಧಂತ್ಯುತ್ಸವ

    16/04/2026
    Leave A Reply Cancel Reply

    sixteen + 20 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.