Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ, ಬೈಂದೂರು ತಾಲೂಕಿನಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
    ಊರ್ಮನೆ ಸಮಾಚಾರ

    ಕುಂದಾಪುರ, ಬೈಂದೂರು ತಾಲೂಕಿನಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೇತೃತ್ವದಲ್ಲಿ ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಪಕ್ಷಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

    Click Here

    Call us

    Click Here

    ಕುಂದಾಪುರ ಪೇಟೆ, ಬೈಂದೂರು ಪೇಟೆ ಸೇರಿದಂತೆ ಪ್ರಮುಖ ಜನನಿಬಿಡ ಸ್ಥಳಗಳಲ್ಲಿ ಬಂದ್ ಯಶಸ್ವಿಯಾಗಿದ್ದರೇ ಗ್ರಾಮೀಣ ಭಾಗಗಳಲ್ಲಿ ಜನಜೀವನ ಎಂದಿನಂತೆಯೇ ಸಾಗಿತ್ತು. ಖಾಸಗಿ ಹಾಗೂ ಸರಕಾರಿ ಬಸ್‌ಗಳು ರಸ್ತೆಗಿಳಿಯಲಿಲ್ಲ. ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಸಂಘಟನೆಗಳಿಗೆ ಸೇರಿದ್ದ ರಿಕ್ಷಾ ಹಾಗೂ ಇತರ ಬಾಡಿಗೆ ವಾಹನಗಳು ಬಂದ್ ಬೆಂಬಲಿಸಿ ರಸ್ತೆಗೆ ಇಳಿದಿರಲಿಲ್ಲ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿ, ಟ್ರಕ್ ಹಾಗೂ ಪ್ರವಾಸಿ ವಾಹನಗಳ ಓಡಾಟ ಎಂದಿನಂತೆ ಇರುವುದು ಕಂಡುಬಂತು. ಕುಂದಾಪುರದಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು ಕಂಡುಬಂತು. ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ವಿದ್ಯಾರ್ಥಿಗಳ ಓಡಾಟವಿರಲಿಲ್ಲ. ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ತೆರೆದಿದ್ದರು ಜನಸಂಚಾರ ವಿರಳವಾಗಿತ್ತು.

    ಕುಂದಾಪುರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮೆರವಣಿಗೆ ನಡೆಸಿ ಅಂಗಡಿ, ಮುಗ್ಗಟ್ಟು ಹಾಗೂ ವಾಣಿಜ್ಯ ಬ್ಯಾಂಕ್ ಬಂದು ಮಾಡುವಂತೆ ಕೇಳಿಕೊಂಡರು. ಬಲವಂತದ ಬಂದ್ ಆಕ್ಷೇಪಿಸಿ ಬಿಜೆಪಿ ಕಾರ್ಯಕರ್ತರು ಮಳಿಗೆಗಳನ್ನು ಪುನಹ ತೆರೆಯಲು ಮನವಿ ಮಾಡಿದ್ದರಿಂದ ಬೆರಳೆಣಿಕೆ ಅಂಗಡಿಗಳು ಹಾಗೂ ವಾಣಿಜ್ಯ ಬ್ಯಾಂಕ್‌ಗಳು ಪುನಹಾ ವಹಿವಾಟು ಆರಂಭಿಸಿತು. ಕೋಟೇಶ್ವರದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿಸಲು ಮುಂದಾದಾಗ ಅಂಗಡಿ ಮಾಲೀಕರು ಹಾಗೂ ಕಾಂಗ್ರೆಸ್ ಕಾರ‍್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳಕ್ಕೆ ಆಗಮಿಸಿದ ಡಿಎಸ್ಪಿ ಬಿ.ಪಿ.ದಿನೇಶ್ ಕೂಮಾರ್ ಗುಂಪುಗಟ್ಟಿದ್ದ ಜನರ ಚದುರಿಸಿ, ಬಲವಂತದ ಬಂದ್ ಮಾಡಿಸದಂತೆ ಎಚ್ಚರಿಕೆ ನೀಡಿದರು.

    ಬೈಂದೂರಿನಲ್ಲಿ ಪ್ರತಿಭಟನೆ:
    ಬೈಂದೂರು ಬೈಪಾಸ್ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಲಾಯಿತು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಮುಖಂಡ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ನಾಗರಾಜ ಬಂಕೇಶ್ವರ, ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ತಾಪಂ ಸದಸ್ಯರಾದ ಜಗದೀಶ್ ದೇವಾಡಿಗ, ಗ್ರೀಷ್ಮಾ ಬಿಡೆ, ಪ್ರಮೀಳಾ ದೇವಾಡಿಗ, ಯುವಮೋರ್ಚಾ ಅಧ್ಯಕ್ಷರುಗಳಾದ ಶೇಖರ ಪೂಜಾರಿ, ಸತೀಶ್ ದೇವಾಡಿಗ, ಮುಖಂಡರುಗಳಾದ ವಾಸುದೇವ ಯಡಿಯಾಳ್, ರಿಯಾಜ್ ಅಹಮ್ಮದ್, ಮೋಹನ ಪೂಜಾರಿ, ಬೈಂದೂರು ಜೆಡಿಎಸ್ ಮುಖಂಡರಾದ ಸಂದೇಶ್ ಭಟ್, ರವಿ ಶಟ್ಟಿ ನಿತಿನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

    ಕುಂದಾಪುರದಲ್ಲಿ ಪ್ರತಿಭಟನೆ:
    ಶಾಸ್ತ್ರಿ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ, ತೈಲ ಬೆಲೆ ಇಳಿಸಲು ಒತ್ತಾಯಿಸಿತು. ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಪುರಸಭೆಯ ಸದಸ್ಯರಾದ ನಿತ್ಯಾಂದ ಕೆ.ಜಿ, ದೇವಕಿ ಪಿ. ಸಣ್ಣಯ್ಯ, ಚಂದ್ರಶೇಖರ ಖಾರ್ವಿ, ಶ್ರೀಧರ ಶೇರುಗಾರ, ಪಕ್ಷದ ಪ್ರಮುಖರಾದ ಜೇಕಬ್ ಡಿಸೋಜಾ, ವಿಕಾಸ್ ಹೆಗ್ಡೆ, ಹಾರೂನ್ ಸಾಹೇಬ್, ಹರಿಪ್ರಸಾದ್ ಶೆಟ್ಟಿ ಬಿದ್ಕಲ್‌ಕಟ್ಟೆ, ಚಂದ್ರ ಎ ಅಮೀನ್, ಗಣೇಶ್ ಶೇರುಗಾರ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

    Click here

    Click here

    Click here

    Click Here

    Call us

    Call us

    ಪೊಲೀಸರೊಂದಿಗೆ ಮಾತಿನ ಚಕಮಕಿ:
    ಕುಂದಾಪುರ ಹಾಗೂ ಬೈಂದೂರಿನಲ್ಲಿ ಪೊಲೀಸರೊಂದಿಗೆ ಪ್ರತಿಭಟನಾ ನಿರತರ ಮಾತಿನ ಚಕಮಕಿ ನಡೆಯಿತು. ರಸ್ತೆ ತಡೆ ಮಾಡಲು ಅವಕಾಶ ನೀಡದ ಪೊಲೀಸರ ಹಾಗೂ ೧೦ ನಿಮಿಷವಾದರೂ ರಸ್ತೆ ತಡೆ ನಡೆಸಿಯೇ ಸಿದ್ಧ ಎಂದು ಕಾರ್ಯಕರ್ತರುಗಳ ನಡುವೆ ವಾಗ್ವಾದಗಳು ನಡೆಯಿತು. ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದ ಪೊಲೀಸರು ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026
    Leave A Reply Cancel Reply

    1 × 4 =

    Call us

    Click Here

    Call us

    Call us

    Call us
    Highest Viewed Recently
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.