Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಮ್ಮಾಡಿ: ಅಪಘಾತ ಮೃತರಾದ ಯುವಕನ ಅಂಗಾಂಗ ದಾನ
    ಊರ್ಮನೆ ಸಮಾಚಾರ

    ಹೆಮ್ಮಾಡಿ: ಅಪಘಾತ ಮೃತರಾದ ಯುವಕನ ಅಂಗಾಂಗ ದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕಳೆದ ಐದು ದಿನಗಳ ಹಿಂದೆ ಸ್ಕೂಟರ್ ಹಾಗೂ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ಹೆಮ್ಮಾಡಿಯಲ್ಲಿ ವರದಿಯಾಗಿದೆ. ಹೆಮ್ಮಾಡಿ ನಿವಾಸಿ ಸದಾನಂದ ಪೈ ಹಾಗೂ ವಿಜಯಲಕ್ಷ್ಮೀ ಪೈಯವರ ಏಕೈಕ ಪುತ್ರ ವಾಸುದೇವ ಪೈ(25) ಸಾವನ್ನಪ್ಪಿದ ದುರ್ದೈವಿ.

    Click Here

    Call us

    Click Here

    ಮಣಿಪಾಲದ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾಸುದೇವ ಪೈ ಶುಕ್ರವಾರ ಬೆಳಗ್ಗೆ ಮನೆಯಿಂದ ಕೆಲಸಕ್ಕೆ ತೆರಳುತ್ತಿರುವಾಗ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ಲಾರಿ ಢಿಕ್ಕಿಯಾಗಿತ್ತು. ಅಪಘಾತದ ತೀವ್ರತೆಗೆ ವಾಸುದೇವ್ ಅವರ ಕಾಲಿಗೆ ತೀವ್ರವಾದ ಗಾಯಗಳಾಗಿದ್ದರಿಂದ ಅವರನ್ನು ಕುಂದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಐದು ದಿನಗಳ ಕಾಲ ಸಾವು-ಬದುಕಿನ ಹೋರಾಟ
    ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಿದ ಬಳಿಕ ಕೋಮಾಕ್ಕೆ ಜಾರಿದ್ದರು. ಐದು ದಿನಗಳ ಕಾಲ ಸಾವು-ಬದುಕಿನ ಹೋರಾಟ ನಡೆಸಿದ ವಾಸುದೇವ್ ಕೊನೆಗೂ ಚಿಕಿತ್ಸೆ ಫಲಕರಿಯಾಗದೆ ಕೊನೆಯುಸಿರೆಳೆದಿದ್ದಾರೆ.

    ಮೊದಲು ಕೆಲಸಕ್ಕಾಗಿ ಮಣಿಪಾಲಕ್ಕೆ ದಿನಾಲು ಬಸ್ಸಿನಲ್ಲಿ ತೆರಳುತ್ತಿದ್ದ ವಾಸುದೇವ್‌ಗೆ ತಂದೆ ಸದಾನಂದ ಪೈ ಸ್ಕೂಟರ್ ಉಡುಗೆಯಾಗಿ ನೀಡಿದ್ದರು. ವಾಸುದೇವ್ ಕೆಲಸಕ್ಕೆ ಹೋದ ವೇಳೆಯಲ್ಲಿ ಸರ್‌ಫ್ರೈಸ್ ಆಗಿ ಹೊಸ ಸ್ಕೂಟರ್ ಅನ್ನು ಮನೆಗೆ ತಂದಿದ್ದರು. ವಾಸುದೇವ್ ದಿನನಿತ್ಯ ಹೆಮ್ಮಾಡಿಯಿಂದ-ಕುಂದಾಪುರದವೆರೆಗೆ ಸ್ಕೂಟರ್‌ನಲ್ಲಿ ಸಾಗಿ ಬಳಿಕ ಕುಂದಾಪುರದಿಂದ ಮಣಿಪಾಲಕ್ಕೆ ಬಸ್‌ನಲ್ಲಿ ಸಂಚರಿಸುತ್ತಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ವಾಸುದೇವ್ ಶುಕ್ರವಾರ ಬೆಳಗ್ಗೆ ಮೊಬೈಲ್ ಮನೆಯಲ್ಲೇ ಬಿಟ್ಟು ಮನೆಯಿಂದ ಕೆಲಸಕ್ಕೆ ತೆರಳಿದ್ದರು. ತಲ್ಲೂರು ಸಮೀಪಿಸುತ್ತಿದ್ದಂತೆ ಮೊಬೈಲ್ ಬಿಟ್ಟು ಬಂದಿರುವುದು ಗಮನಕ್ಕೆ ಬಂದಿದ್ದು ವಾಪಾಸು ಮನೆಗೆ ತೆರಳಿ ಮೊಬೈಲ್ ತೆಗೆದುಕೊಂಡು ಕೆಲಸಕ್ಕೆ ವಾಪಾಸಾಗಿದ್ದರು. ಸಮಯ ಹೊಂದಾಣಿಕೆ ಮಾಡಿಕೊಳ್ಳುವ ಭರದಲ್ಲಿ ಸ್ಕೂಟರ್ ಅನ್ನು ವೇಗವಾಗಿ ಚಲಾಯಿಸಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

    Click here

    Click here

    Click here

    Call us

    Call us

    ಮೃತರ ಕಣ್ಣು ಕಿಡ್ನಿ ದಾನ:
    ಚಿಕಿತ್ಸೆ ಫಲಿಸದೇ ಮೃತಪಟ್ಟ ವಾಸುದೇವ ಪೈ ಅವರ ಕಣ್ಣು ಹಾಗೂ ಕಿಡ್ನಿಯನ್ನು ಕುಟುಂಬದವರು ಕೆಎಂಸಿ ಆಸ್ಪತ್ರೆಗೆ ದಾನ ಮಾಡಲು ಸಮ್ಮತಿ ಸೂಚಿಸಿ ನೋವಿನಲ್ಲಿಯೂ ಇನ್ನೋರ್ವರ ಬಾಳಿಗೆ ಬೆಳಕಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಊರಿಡೀ ಶೋಕ:
    ವಾಸುದೇವ್ ಊರ ಜನರ ಪ್ರೀತಿಗೆ ಪಾತ್ರರಾಗಿದ್ದರು.  ಫೋಟೋಗ್ರಫಿಯಲ್ಲಿ ಆಸಕ್ತಿ ಹೊಂದಿದ್ದ ಅವರು ಯಕ್ಷ ಛಾಯಗ್ರಾಹಕನಾಗಿ ಯಕ್ಷಗಾನದ ಪಾತ್ರಧಾರಿಗಳು, ಚೆಂಡೆ, ಭಾಗವತರು, ಮದ್ದಳೆಗಾರರ ಫೋಟೋ ತೆಗೆದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಆಗಾಗ ಶೇರ್ ಮಾಡಿಕೊಳ್ಳುತ್ತಿದ್ದರು. ಅಲ್ಲದೇ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯನಾಗಿದ್ದ ವಾಸುದೇವ್ ಪರಿಸರ ಪ್ರೇಮಿಯೂ ಹೌದು. ವಾಸುದೇವ್ ಅಕಾಲಿಕ ಮರಣಕ್ಕೆ ಊರಿಡೀ ಶೋಕ ವ್ಯಕ್ತವಾಗಿದ್ದು, ಸಂಬಂಧಿಕರು, ಸ್ನೇಹಿತರು, ಯಕ್ಷಾಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭ

    15/12/2025

    ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    15/12/2025

    ಕೋಟ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ? ನಾಲ್ವರು ವಶಕ್ಕೆ

    15/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭ
    • ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    • ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ
    • ಕೋಟ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ? ನಾಲ್ವರು ವಶಕ್ಕೆ
    • ಸಮುದ್ಯತಾ ಸಂಸ್ಥೆ ಉದ್ಯಮ ಕ್ಷೇತ್ರವಲ್ಲದೆ ಸಾಂಸ್ಕೃತಿಕ ರಂಗದಲ್ಲಿಯೂ ಮುನ್ನುಡಿ ಬರೆಯುತ್ತಿದೆ: ಆನಂದ್ ಸಿ. ಕುಂದರ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.