Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತವನ್ನು ಹಸಿವು ಮುಕ್ತ ದೇಶವನ್ನಾಗಿಸಲು ಕಾಂಗ್ರೆಸ್ ಪಣ
    ಕುಂದಾಪ್ರದ್ ಸುದ್ಧಿ

    ಭಾರತವನ್ನು ಹಸಿವು ಮುಕ್ತ ದೇಶವನ್ನಾಗಿಸಲು ಕಾಂಗ್ರೆಸ್ ಪಣ

    Updated:24/05/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ರಾಜೀವ್‌ ಗಾಂಧಿ ಪಂಚಾಯತ್‌ ವ್ಯವಸ್ಥೆಗೊಂದು ಆಯಾಮ ನೀಡಿದರೆ, ಸೋನಿಯಾ ಗಾಂಧಿ ಹಸಿವು ಮುಕ್ತ ಭಾರತಕ್ಕೆ ಸಂಕಲ್ಪ ಮಾಡಿದರು. ಹಸಿವು ಮುಕ್ತ ಭಾರತ ಹಾಗೂ ಕರ್ನಾಟಕ ಕಾಂಗ್ರೆಸ್‌ ಸಂಕಲ್ಪವಾಗಿದೆ. ಇದನ್ನು ಸಹಿಸದ ಬಿಜೆಪಿ ಕಾಂಗ್ರೆಸ್‌ ಮುಕ್ತ ಭಾರತ ಎನ್ನುತ್ತಿದೆ. ಆದರೆ ಇದು ಸಾಧ್ಯವಾಗದ ಮಾತು ಎಂದು ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಹೇಳಿದರು.

    Click Here

    Call us

    Click Here

    ಅವರು ಶನಿವಾರ ಕುಂದಾಪುರದ ಆರ್‌.ಎನ್‌. ಶೆಟ್ಟಿ ಸಭಾಭವನದಲ್ಲಿ ನಡೆದ ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

    ದೇಶದಲ್ಲಿ ಪಂಚಾಯತ್‌ರಾಜ್‌ ವ್ಯವಸ್ಥೆಗೆ ಒಂದು ಸ್ವರೂಪ ಬಂದಿದ್ದು ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದಾಗ. ಜನರಿಗೆ ಸಂವಿಧಾನಬದ್ಧ ಹಕ್ಕನ್ನು ಎತ್ತಿ ಹಿಡಿಯಲು ಅವರು ಅವಕಾಶ ಮಾಡಿಕೊಟ್ಟರು. ಇದರಿಂದ ಪಂಚಾಯತ್‌ಗಳ ಬಲವರ್ಧನೆಯಾಯಿತು. ಮೇ 29ರಂದು ನಡೆಯುವ ಗ್ರಾ. ಪಂ. ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಆರಿಸಿ, ಹೊಸ ದಾಖಲೆ ನಿರ್ಮಾಣ ಮಾಡಬೇಕು. ಮತ್ತೂಮ್ಮೆ ಕಾಂಗ್ರೆಸ್‌ ಪಕ್ಷದ ನೇತೃತ್ವ ಎತ್ತಿ ಹಿಡಿಯಬೇಕು ಎಂದು ಅವರು ಹೇಳಿದರು.

    ಪ್ರಜಾಪ್ರಭುತ್ವದ ಬುನಾದಿ ಗ್ರಾ. ಪಂ. ವ್ಯವಸ್ಥೆ. ಇಲ್ಲಿ ಉತ್ತಮ ಫಲಿತಾಂಶ ಬಂದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಸುಲಭ. ಆದುದರಿಂದ ಗ್ರಾ. ಪಂ. ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.

    ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್‌ ಸೊರಕೆ ಮಾತನಾಡಿ, ಐದು ವರ್ಷ ಆಳ್ವಿಕೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೂ ದುರಾಳಿತ ನಡೆಸಿದೆ. ಇದನ್ನು ಸಹಿಸದ ಜನರು ಕಾಂಗ್ರೆಸ್‌ಗೆ ಅವಕಾಶ ನೀಡಿದ್ದಾರೆ. ಕಳೆದ ಎರಡು ವರ್ಷದ ಆಡಳಿತದಲ್ಲಿ ಸರಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಹೆಚ್ಚಿನ ಭರವಸೆಗಳನ್ನು ಈಡೇರಿಸಿದೆ. ಅನ್ನಬಾಗ್ಯ, ಕ್ಷೀರ ಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿದೆ. ಉಚಿತ ಅಕ್ಕಿ ನೀಡುವಂತಹ ಯೋಜನೆಯನ್ನು ದೇಶದಲ್ಲೇ ಮೊದಲ ಬಾರಿಗೆ ಆರಂಭಿಸಿದ್ದೇವೆ ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಕೆಪಿಸಿಸಿ ಸದಸ್ಯ ಎಂ.ಎ. ಗಫೂರ್‌, ಜಿಲ್ಲಾ ಕಾಂಗ್ರೆಸ್‌ ಸದಸ್ಯ ಅಶೋಕ್‌ ಕುಮಾರ್‌ ಕೊಡವೂರು, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಹಿರಿಯಣ್ಣ, ಪಕ್ಷದ ಮುಖಂಡರಾದ ದಿನಕರ ಶೆಟ್ಟಿ, ಮಾಣಿಗೋಪಾಲ, ದೇವಕಿ ಸಣ್ಣಯ್ಯ, ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಉಪಸ್ಥಿತರಿದ್ದರು.

    ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಕೋಣಿ ನಾರಾಯಣ ಆಚಾರ್‌ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    two × two =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.