Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷಗಾನ ಜ್ಞಾನಯಜ್ಞ ತಾಳಮದ್ದಲೆ ಸಪ್ತಾಹ ಉದ್ಘಾಟನೆ
    ಊರ್ಮನೆ ಸಮಾಚಾರ

    ಯಕ್ಷಗಾನ ಜ್ಞಾನಯಜ್ಞ ತಾಳಮದ್ದಲೆ ಸಪ್ತಾಹ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಯಕ್ಷಗಾನ ಕಲಾಕ್ಷೇತ್ರದಲ್ಲಿ ತಮ್ಮದೇ ಪರಂಪರೆಯನ್ನು ಹುಟ್ಟುಹಾಕಿ ಇತಿಹಾಸ ನಿರ್ಮಿಸಿದ ಕಲಾವಿದರ ಕುರಿತಾದ ಸಾಮಗ್ರಿ ಸಿಗುತ್ತಿಲ್ಲ. ಅದರಿಂದಾಗಿ ಅವರ ಬಗೆಗೆ ಪುಸ್ತಕ ಪ್ರಕಟಿಸುವುದು ಕಷ್ಟವಾಗಿದೆ’ ಎಂದು ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎ. ಹೆಗಡೆ ಹೇಳಿದರು.

    Click Here

    Call us

    Click Here

    ಕಿರಿಮಂಜೇಶ್ವರದ ಧಾರೇಶ್ವರ ಯಕ್ಷ ಬಳಗ ಚಾರಿಟಬಲ್ ಟ್ರಸ್ಟ್ ನಾಗೂರಿನ ಕುಂಜಾಲು ಶ್ರೀ ಶೇಷಗಿರಿ ಕಿಣಿ ಭಾಗವತ ಸ್ಮರಣ ವೇದಿಕೆಯಲ್ಲಿ ಪ್ರಸ್ತುತ ಪಡಿಸುತ್ತಿರುವ ೬ನೆ ವರ್ಷದ ಯಕ್ಷಗಾನ ಜ್ಞಾನಯಜ್ಞ ತಾಳಮದ್ದಲೆ ಸಪ್ತಾಹವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

    ’ಕುಂಜಾಲು ಶೇಷಗಿರಿ ಕಿಣಿ, ತೆಕ್ಕಟ್ಟೆ ಆನಂದ ಮಾಸ್ತರ್ ಅವರು ಅಂತಹ ಪರಂಪರೆ ಸೃಷ್ಟಿಸಿದವರು. ಅವರ ಬಳಿಕದ ತಲೆಮಾರಿನ ಜನ ಅವರು ಶ್ರೇಷ್ಠ ಕಲಾವಿದರಾಗಿದ್ದರು ಎಂದಷ್ಟೆ ಹೇಳುತ್ತಾರೆ. ಅದಕ್ಕಿಂತ ಹೆಚ್ಚಿನ ವಿವರ ಅವರಿಗೆ ತಿಳಿದಿಲ್ಲ. ಹಾಗಿದ್ದರೂ ಯಾರಾದರೂ ಅಂತಹ ಕಲಾವಿದರ ಕುರಿತು ಸಂಶೋಧನೆ ನಡೆಸಿ ಪುಸ್ತಕ ಪ್ರಕಟಿಸುವುದಾದರೆ ಅಕಾಡೆಮಿ ಅವರಿಗೆ ನೆರವು ನೀಡಲಿದೆ’ ಎಂದು ಹೆಗಡೆ ಹೇಳಿದರು.

    ಟ್ರಸ್ಟ್ ಪ್ರವರ್ತಕ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಪ್ರಸ್ತಾವಿಕವಾಗಿ ಮಾತನಾಡಿದರು. ಸಾಲಿಗ್ರಾಮ ಮಕ್ಕಳ ಮೇಳದ ಸಂಸ್ಥಾಪಕ ಎಚ್. ಶ್ರೀಧರ ಹಂದೆ ಶೇಷಗಿರಿ ಕಿಣಿ ಸಂಸ್ಮರಣ ನುಡಿಗಳನ್ನಾಡಿದರು. ಹಿರಿಯ ಮದ್ದಲೆ ವಾದಕ ನಾಗೂರು ಮಹಾಬಲ ಶೇಟ್ ಅವರಿಗೆ ೨೦೧೮ರ ’ಕಲಾತಪಸ್ವಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶೇಷಗಿರಿ ಕಿಣಿ ಕುಟುಂಬದ ಪ್ರತಿನಿಧಿಗಳಾದ ಕುಂಜಾಲು ವೆಂಕಟೇಶ ಕಿಣಿ, ಕುಂಜಾಲು ಸರ್ವೋತ್ತಮ ಕಿಣಿ, ಆನಂದ ಮಾಸ್ತರ್ ಅವರ ಪತ್ನಿ ಟಿ. ಸುನಂದಾ ಶ್ಯಾನುಭಾಗ್ ಇದ್ದರು. ಗೋವಿಂದ ಮಟ್ನಕಟ್ಟೆ ಸ್ವಾಗತಿಸಿ ನಿರ್ವಹಣೆ ಮಾಡಿದರು. ಸಭೆಯ ಬಳಿಕ ’ಶ್ರೀಕೃಷ್ಣ ಸಂಧಾನ’ ಪ್ರಸಂಗದ ತಾಳಮದ್ದಲೆ ನಡೆಯಿತು.

    ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭವು ಶ್ರೇಷ್ಠ ಕಲಾವಿದರನ್ನು ಗೌರವಿಸುವ ಕಾರ್ಯಕ್ರಮ. ಆದರೆ ಅದಕ್ಕೆ ಯಕ್ಷಗಾನದ ಅಭಿಮಾನಿಗಳು ಬರುವುದಿಲ್ಲ. ಈ ಬಾರಿಯ ಪ್ರಸಸ್ತಿ ಪ್ರದಾನ ಉಡುಪಿಯಲ್ಲಿ ನಡೆಯುವುದು. ಇಲ್ಲಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು’ ಎಂದು ಪ್ರೊ. ಎಂ. ಎ. ಹೆಗಡೆ ವಿನಂತಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    ten − two =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.