Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಾಲಾಡಿ ಶ್ರೀನಿವಾಸ ಶೆಟ್ರಿಗೆ, ರವಿ ಪೂಜಾರಿಯಿಂದ ಬೆದರಿಕೆ ಕರೆ
    ವಿಶೇಷ ವರದಿ

    ಹಾಲಾಡಿ ಶ್ರೀನಿವಾಸ ಶೆಟ್ರಿಗೆ, ರವಿ ಪೂಜಾರಿಯಿಂದ ಬೆದರಿಕೆ ಕರೆ

    Updated:26/05/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆಯ ಕರೆ

    Click Here

    Call us

    Click Here

    ಕುಂದಾಪುರ: ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಇಂದು ಭೂಗತ ಪಾತಕಿ ರವಿ ಪೂಜಾರಿಯಿಂದ ಹಣದ ಬೇಡಿಕೆ ಇಟ್ಟ ಬೆದರಿಕೆ ಕರೆ ಬಂದಿದ್ದು ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಶಾಸಕರು ದೂರು ದಾಖಲಿಸಿದ್ದು, ಕರೆಯ ಸತ್ಯಾಸತ್ಯತೆಗಳ ಬಗ್ಗೆ ಪೊಲೀಸರು ತನಿಕೆ ನಡೆಸುತ್ತಿದ್ದಾರೆ.

    ಶಾಸಕರು ಸೋಮವಾರ ಮಧ್ಯಾಹ್ನ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ಮೊಬೈಲಿಗೆ ಆಸ್ಟ್ರೇಲಿಯಾದ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ಅತ್ತ ಕಡೆಯಿಂದ ಮಾತನಾಡಿದ ವ್ಯಕ್ತಿಯು ತಾನು ಡಾನ್ ರವಿ ಪೂಜಾರಿ ಎಂದು ತುಳುವಿನಲ್ಲಿ ಮಾತು ಆರಂಭಿಸಿದ್ದಾನೆ. ತಮ್ಮ ಬಳಿ ಸಾಕಷ್ಟು ಭೂಮಿ ಇರುವುದರಿಂದ ತನಗೆ 10ಕೋಟಿ ರೂ. ಹಣ ನೀಡಬೇಕು ಎಂದು ಶಾಸಕರ ಬಳಿ ಬೇಡಿಕೆಯಿಟ್ಟಿದ್ದಾನೆ. ಮಾತನಾಡುತ್ತಿದ್ದಂತೆಯೇ ಕರೆ ಕಡಿತಗೊಂಡಿದ್ದು ಸ್ಪಲ್ಪ ಹೊತ್ತಿನ ಬಳಿಕ ಬೆರೋಂದು ಸಂಖ್ಯೆಯಿಂದ ಕರೆ ಮಾಡಿದ ಅದೇ ವ್ಯಕ್ತಿ ತನಗೆ ಮೂರು ದಿನದೊಳಗೆ ಹಣ ನೀಡುವಂತೆ ಹೇಳಿದ್ದಾನೆ.

    ಆತನ ಮಾತಿಗೆ ಸೊಪ್ಪು ಹಾಕದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು, ತನ್ನದು ಯಾವುದೇ ಅವ್ಯವಹಾರವಿಲ್ಲ. ತಾನು ಯಾರಿಗೂ ಹಣ ನೀಡುವುದೂ ಇಲ್ಲ. ತನ್ನಲ್ಲಿ ಅಷ್ಟು ಹಣವೂ ಇಲ್ಲ ಎಂದು ಹೇಳಿದಾಗ, ಮೂರು ದಿನದಲ್ಲಿ 10 ಕೋಟಿ ನೀಡುವ ಬಗ್ಗೆ ಯೋಚಿಸಿ ತಿಳಿಸಬೇಕು. ಹಣ ನೀಡದಿದ್ದರೆ ಕೊಲೆಗೈಯುವುದಾಗಿ ಅತ್ತಕಡೆಯಿಂದ ಬೆದರಿಕೆವೊಡ್ಡಿದ್ದಾನೆ.

    ಸರಳ ಶಾಸಕರಿಗೆ ಮೊದಲ ಭಾರಿಗೆ ಬೆದರಿಕೆ ಕರೆ

    Click here

    Click here

    Click here

    Call us

    Call us

    ತನ್ನ ಸರಳ ಸಜ್ಜನಿಕೆಯಿಂದಲೇ ಮನೆಮಾತಾಗಿರುವ ಕುಂದಾಪುರದ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಇದೇ ಮೊದಲ ಭಾರಿಗೆ ಭೂಗತ ಲೋಕದಿಂದ ಕರೆಬಂದಿದೆ ಎನ್ನಲಾಗಿದೆ. ಆಸ್ಟ್ರೇಲಿಯಾದ ತನ್ನ ಸಂಬಂಧಿಯ ಕರೆ ಎಂದು ಸ್ವೀಕರಿಸಿದ್ದ ಶಾಸಕರಿಗೆ ಆತಂಕಕಾರಿ ಧ್ವನಿಯೊಂದು ಕೇಳಿಸಿತ್ತು. ಅತ್ತಲಿಂದ ಮಾತನಾಡಿದ ವ್ಯಕ್ತಿಯು ಕೊಲೆಯ ಬೆದರಿಕೆಯೊಡ್ಡಿದರೂ ತನ್ನ ನೇರವಾಗಿ ಹಣ ನೀಡುವುದಿಲ್ಲ ಎಂದು ಹೇಳುವ ಧೈರ್ಯ ತೋರಿದ್ದಾರೆ.

    ಶಾಸಕರಿಗೆ ಭದ್ರತೆ; ಎಸ್ಪಿ ಭೇಟಿ

    ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಶಂಕರನಾರಾಯಣ ಪೊಲೀಸರು ದೂರು ದಾಖಲಿಸಿಕೊಂಡಿದ್ದು ತನಿಕೆ ನಡೆಸುತ್ತಿದ್ದಾರೆ. ಉಡುಪಿ ಎಸ್ಪಿ ಅಣ್ಣಾಮಲೈ ಶಾಸಕರ ಮನೆಗೆ ಭೇಟಿ ನೀಡಿದ್ದು ಘಟನೆಯ ಮಾಹಿತಿ ಪಡೆದಿದ್ದಾರೆ. ಆಸ್ಟ್ರೇಲಿಯಾದಿಂದ ಮಾತನಾಡಿರುವ ವ್ಯಕ್ತಿಯು ಇಂಟರ್ನೆಟ್ ಮೂಲಕ ಕರೆ ಮಾಡಿದ್ದನೆಂದು ತಿಳಿದುಬಂದಿದ್ದು  ತನಿಕೆ ಮುಂದುವರಿಸಿದ್ದಾರೆ.

    ಕುಂದಾಪ್ರ ಡಾಟ್ ಕಾಂ- editor@kundapra.com

    threat-call-Kundapura-MLA-Shrinivas-Shetty-form-Ravi-Poojary-demanding-10crores

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.