Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿವಮೊಗ್ಗ ಲೋಕಸಭಾ ಉಪ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ
    ಊರ್ಮನೆ ಸಮಾಚಾರ

    ಶಿವಮೊಗ್ಗ ಲೋಕಸಭಾ ಉಪ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

    Updated:07/10/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ, ಅ.07: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೂ ಅನ್ವಹಿಸುವಂತೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.  ಬೈಂದೂರು ವಿಧಾನಸಭಾ ಕ್ಷೇತ್ರವನ್ನೊಳಗೊಂಡಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 3ರಂದು ಮತದಾನ ನಡೆಯಲಿದೆ.

    Click Here

    Call us

    Click Here

    ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ ಭಾನುವಾರ ಸಂಜೆ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಟಿ. ಭೂಬಾಲನ್ ಅವರು ಈ ಬಗ್ಗೆ ಮಾಹಿತಿ ನೀಡಿದರು.

    ಅ.9 ಮಂಗಳವಾರ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅ.16ರ ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಅ.17ರಂದು ನಾಮಪತ್ರ ಪರಿಶೀಲನೆ, ಅ.20ರಂದು ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.03ರಂದು ಮತದಾನ ನಡೆಯಲಿದೆ. ನ.06ರಂದು ಮತ ಎಣಿಕೆ, ನ.11ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅಲ್ಲಿಯ ತನಕ ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿರುವ ಉಡುಪಿ ಜಿಲ್ಲೆಯಲ್ಲಿಯೂ ನೀತಿಸಂಹಿತೆ ಜಾರಿಯಲ್ಲಿರಲಿದೆ.

    ಮತದಾರ ಪಟ್ಟಿ ಪರಿಷ್ಕರಣೆಗೆ 2 ದಿನ ಅವಕಾಶ:
    ದಿ. 01.01.2018 ಅನ್ವಯಿಸುವಂತೆ ಮತದಾನ ಮಾಡಲು ಅರ್ಹರಿರುವ ಮತದಾರರ ಪಟ್ಟಿ ಪರಿಷ್ಕರಿಸಲು ಅ.09ರ ಮಧ್ಯಾಹ್ನದ ತನಕ ಅವಕಾಶ ಕಲ್ಪಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಮತದಾರರು ನೇರವಾಗಿ ಬೈಂದೂರು ತಹಶೀಲ್ದಾರರ ಕಛೇರಿಗೆ ತೆರಳಿ ಹೆಸರು ಸೇರ್ಪಡೆ, ಬದಲಾವಣೆ, ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ.

    ನೀತಿ ಸಂಹಿತೆ ಜಾರಿ:
    ಅ.09ರಿಂದಲೇ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಸ್ತುತ ಹಾಕಲಾಗಿರುವ ಅನಧಿಕೃತ ಹಾಗೂ ರಾಜಕೀಯ ನಾಯಕರುಗಳ ಹೆಸರಿರುವ ಕಟೌಟ್ ಮತ್ತು ಸರಕಾರಿ ಕಾರ್ಯಕ್ರಮಗಳ ಜಾಹೀರಾತಿರುವ ಕಟೌಟುಗಳನ್ನು ತೆಗೆಸಲು ಎ.ಸಿ ಅವರು ತಿಳಿಸಿದ್ದಾರೆ. ನವರಾತ್ರಿ ಉತ್ಸವದ ಫ್ಲೆಕ್ಸ್ಗಳಲ್ಲಿ ರಾಜಕೀಯ ನಾಯಕರ ಹೆಸರು ಇಲ್ಲಿದ್ದರೆ ಅವುಗಳನ್ನು ಸ್ಥಳೀಯ ಗ್ರಾಮ ಪಂಚಾಯತ್ ಅನುಮತಿಯೊಂದಿಗೆ ಹಾಕಲು ಅವಕಾಶವಿದೆ. ಕುಂದಾಪ್ರ ಡಾಟ್ ಕಾಂ.

    Click here

    Click here

    Click here

    Click Here

    Call us

    Call us

    ಸಹಾಯಕ ಚುನಾವಣಾ ಅಧಿಕಾರಿಯಾಗಿ ಶ್ರೀನಿವಾಸ್ ಅವರು ಕಾರ್ಯನಿರ್ವಹಿಸಲಿದ್ದು, ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಸ್ವಾಡ್ಗಳನ್ನು ನೇಮಕ ಮಾಡಲಾಗಿದೆ. ರಾಜಕೀಯ ಪಕ್ಷಗಳು ವಿವಿಧ ಅನುಮತಿಗಾಗಿ ಆನ್ಲೈನ್ ಮೂಲಕ ಅನುಮತಿ ಪಡೆದುಕೊಳ್ಳಬೇಕಿದೆ. ಸಭೆ ನಡೆಸಲು ಸುವಿಧಾ ವೆಬ್ಸೈಟ್ ಮೂಲಕ, ದೂರು, ಮಾಹಿತಿ ನೀಡಲು ಸಮಾಧಾನ್ ವೆಬ್ಸೈಟ್ ಮೂಲಕ ಹಾಗೂ ವಾಹನ ಅನುಮತಿ ಪಡೆಯಲು ಸುಗಮ ವೆಬ್ಸೈಟ್ ಮೂಲಕ ಅನುಮತಿ ಪಡೆದುಕೊಳ್ಳಬೇಕಿದೆ. ಕುಂದಾಪ್ರ ಡಾಟ್ ಕಾಂ.

    ಚುನಾವಣಾ ಸಂಬಂಧಿ ದೂರುಗಳ ಸ್ವೀಕಾರಕ್ಕಾಗಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಂಪ್ಲೆಂಟ್ ಮಾನಿಟರಿಂಗ್ ಸೆಲ್ ತೆರೆಯಲಾಗಿದ್ದು 08202574920ಗೆ ಅಥವಾ ಬೈಂದೂರು ತಾಲೂಕು ಕಛೇರಿ 08254251657 ಸಂಖ್ಯೆಗೆ ಕರೆಮಾಡಬಹುದು ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬೈಂದೂರು ತಹಶೀಲ್ದಾರ್ ಕಿರಣ ಗೌರಯ್ಯ ಅವರಿದ್ದರು. /ಕುಂದಾಪ್ರ ಡಾಟ್ ಕಾಂ/

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    eighteen + seventeen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.