ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ವೆಬ್‌ಸೈಟ್ ಲೋಕಾರ್ಪಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ನೂತನ ವೆಬ್‌ಸೈಟ್ ಲೋಕಾರ್ಪಣೆ ಕಾರ್ಯಕ್ರಮದ ಶುಕ್ರವಾರ ದೇವಳದ ವಠಾರದಲ್ಲಿ ಜರುಗಿತು.

Call us

Click Here

ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ದೇವಳದ ವೆಬ್‌ಸೈಟ್ www.vatthinakattemahasathi.com ಲೊಕಾರ್ಪಣೆಗೊಳಿಸಿ ಮಾತನಾಡಿ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನವು ಕಾರಣಿಕ ಸ್ಥಳವಾಗಿದ್ದು, ಸಾವಿರಾರು ಭಕ್ತರು ನಂಬಿ ಬಂದಿದ್ದಾರೆ. ದೇವಸ್ಥಾನದ ಐತಿಹ್ಯ, ಕಾರ್ಯಕ್ರಮಗಳ ಮಾಹಿತಿಗಳನ್ನೊಳಗೊಂಡ ವೆಬ್‌ಸೈಟ್ ಆರಂಭಿಸಿರುವುದು ಭಕ್ತರಿಗೆ ಅನುಕೂಲವಾಗಿದೆ ಎಂದರು.

ಈ ಸಂದರ್ಭ ದೇವಸ್ಥಾನದ ವತಿಯಿಂದ ಶಾಸಕರನ್ನು ಗೌರವಿಸಲಾಯಿತು. ಈ ಸಂದರ್ಭ ಬಿ. ಮಾಧವ ರಾವ್, ನಾರಾಯಣ ದೇವಾಡಿಗ, ಶ್ರೀನಿವಾಸ್, ರವೀಂದ್ರ ಶಾನುಭೋಗ್, ದೀಪಕ್‌ಕುಮಾರ್ ಶೆಟ್ಟಿ, ಸೇವಾ ಸಮಿತಿ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಬಿ. ಕೃಷ್ಣಮೂರ್ತಿ ನಾವಡ, ಸದಸ್ಯರಾದ ಶಂಕರ ಮೊಗವೀರ, ಸತ್ಯಪ್ರಸನ್ನ, ವೆಬ್‌ಸೈಟ್ ರೂಪಿಸಿದ ಸಮಷ್ಠಿ ಮೀಡಿಯಾ ವೆಂಚರ‍್ಸ್ ಸಂಸ್ಥೆಯ ಸುನಿಲ್ ಹೆಚ್. ಜಿ. ಬೈಂದೂರು ಮೊದಲಾದವರು ಉಪಸ್ಥಿತರಿದ್ದರು.

Leave a Reply