Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊರಗ ಮಕ್ಕಳ ಬಿಲ್ಲು ವಿದ್ಯೆ ತರಬೇತಿ ಶಿಬಿರ ಸಮಾರೋಪ
    ಊರ್ಮನೆ ಸಮಾಚಾರ

    ಕೊರಗ ಮಕ್ಕಳ ಬಿಲ್ಲು ವಿದ್ಯೆ ತರಬೇತಿ ಶಿಬಿರ ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಬುಡಕಟ್ಟು ಸಮುದಾಯಕ್ಕೆ ಸೇರಿದ ಕೊರಗ ಮಕ್ಕಳಲ್ಲಿ ಅಭಿಜಾತ ಪ್ರತಿಭೆ ಇದೆ. ಬಿಲ್ಲುವಿದ್ಯೆಯಲ್ಲಿ ಅವರು ತೋರಿದ ಪರಿಶ್ರಮ ಇದಕ್ಕೆ ನಿದರ್ಶನ. ಅವರು ಪಡೆದ ಶಿಕ್ಷಣ ಸಂಬಂಧಿತ ಚಟುವಟಿಕೆಗಳನ್ನು ಕೈಬಿಡದೆ ಮುಂದುವರಿಸಿದರೆ ಆ ಕೌಶಲ ವೃದ್ಧಿಸುತ್ತದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.

    Click Here

    Call us

    Click Here

    ಕುಂಭಾಶಿಯ ಡಾ. ಬಿ. ಆರ್. ಅಂಬೇಡ್ಕರ್ ನಗರದ ’ಮಕ್ಕಳಮನೆ’ಯಲ್ಲಿ ನಡೆದ ಕೊರಗ ಮಕ್ಕಳ ಬಿಲ್ಲುವಿದ್ಯೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ಕುಂಭಾಶಿಯ ಕೊರಗರ ’ಮಕ್ಕಳ ಮನೆ’ಯಲ್ಲಿ ವಿಶೇಷ ಅನುಭವ ನೀಡುವ ವಾತಾವರಣ ಇದೆ. ಈ ಕಾರ್ಯಕ್ರಮ ಒಂದು ಕನಸಿನ ಲೋಕದಲ್ಲಿ ನಡೆದಿದೆ. ಇಲ್ಲಿ ಕ್ರಿಯಾಶೀಲತೆ ಇದೆ. ಇದು ಸರ್ಕಾರಿ ಇಲಾಖೆಗಳ ಕಾರ್ಯಕ್ರಮಗಳಲ್ಲಿ ಅಲಭ್ಯ. ಅನ್ಯ ಸಮುದಾಯದ ಮಕ್ಕಳಿಗೆ ಇಂತಹ ಅನುಭವ ಸಿಗದಿರುವ ಬಗ್ಗೆ ಬೇಸರವಿದೆ. ಇಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಕ್ಕೆ ಕರೆದರೂ ಬರುವೆನೆಂದ ಜಿಲ್ಲಾಧಿಕಾರಿ, ಕೊರಗ ಸಮುದಾಯದ ಸದಸ್ಯರು ಸರ್ಕಾರದ ಸೌಲಭ್ಯಗಳು ಸಿಕ್ಕಿಲ್ಲ ಎಂದು ದೂರಿದ್ದಿಲ್ಲ. ಅವರು ಮುಂದೆಬಂದು ತಮ್ಮ ಅಗತ್ಯಗಳ ಬಗೆಗೆ ಬೇಡಿಕೆ ಮಂಡಿಸಬೇಕು. ಅವರ ಕಲ್ಯಾಣ ಕಾರ್ಯಕ್ರಮಗಳಿಗೆ ಯಾವತ್ತೂ ಹಣದ ಕೊರತೆ ಆಗದು. ಅವರ ನೈಜ ಅಗತ್ಯಗಳನ್ನು ಖಂಡಿತ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

    ವನವಾಸಿ ಕಲ್ಯಾಣದ ಕಾರ್ಯದರ್ಶಿ ಶಾಂತಾರಾಮ ಸಿದ್ಧಿ ಸಂಸ್ಥೆಯ ವಿವಿಧ ಚಟುವಟಿಕೆಗಳನ್ನು ವಿವರಿಸಿದರು. ರಾಷ್ಟ್ರೀಯ ಬಿಲ್ವಿದ್ಯೆ ತರಬೇತಿದಾರ ಪ್ರಬೋದ್‌ನಂದ, ತರಬೇತಿದಾರ ಬೊಮ್ಮು ಪಾಟೀಲ್, ಮಕ್ಕಳಮನೆಯ ಗೌರವ ಶಿಕ್ಷಕ ಅನಂತ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಕುಂಭಾಶಿ ರವಿರಾಜ ಉಪಾಧ್ಯಾಯ, ಮರವಂತೆ ಕೊರಗ ತನಿಯ ಕಲಾವೇದಿಕೆಯ ಅಧ್ಯಕ್ಷ ಶೇಖರ ಮರವಂತೆ, ಕುಂದಾಪುರದ ಪ್ಲೆಸೆಂಟ್ ಉದ್ಯಮದ ಮಾಲೀಕ ಅಬ್ದುಲ್ ಬಶೀರ್, ಮರವಂತೆ ಗ್ರಾಪಂ ಮಾಜಿ ಅಧ್ಯಕ್ಷ ಎಸ್. ಜನಾರ್ದನ ಶುಭ ಹಾರೈಸಿದರು. ವಿದ್ಯಾರ್ಥಿಗಳಾದ ಸಾವಿತ್ರಿ, ಕೃಷ್ಣ, ಭರತ್, ಸುಪರ್ಣಾ, ಸ್ನೇಹಾ ಶಿಬಿರದ ಅನುಭವ ವಿವರಿಸಿದರು. ಸುಷ್ಮಿತಾ ಸ್ವಾಗತಿಸಿದರು. ಗಣೇಶ್ ಬಾರ್ಕೂರು ವಂದಿಸಿದರು. ನಳಿನಿ ನಿರೂಪಿಸಿದರು. ತಾಲೂಕು ಕೊರಗ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ವಿ. ಗಣೇಶ ಇದ್ದರು.

    ಅ.೭ರಿಂದ ೧೩ರ ವರೆಗೆ ನಡೆದ ಸನಿವಾಸ ತರಬೇತಿ ಶಿಬಿರದಲ್ಲಿ ೧೮ ಬಾಲಕರು, ೧೪ ಬಾಲಕಿಯರು ಭಾಗವಹಿಸಿದ್ದರು. ಪಶ್ಚಿಮ ಬಂಗಾಳದ ಸಿಲಿಗುರಿಯ ವನವಾಸಿ ಕಲ್ಯಾಣದ ರಾಷ್ಟ್ರೀಯ ಬಿಲ್ವಿದ್ಯೆ ತರಬೇತಿದಾರ ಪ್ರಬೋಧ್ ನಂದ, ಸಹಾಯಕ ತರಬೇತಿದಾರರಾದ ಕುಮಟಾದ ಅಮಿತ್ ಗೌಡ, ಅಂಕೋಲೆಯ ಕುಮಾರ್ ತರಬೇತಿ ನೀಡಿದ್ದರು. ತರಬೇತಿ ಅಂತ್ಯದಲ್ಲಿ ನಡೆದ ಸ್ಪರ್ಧೆಯಲ್ಲಿ ತೇರ್ಗಡೆಯಾಗಿ, ಚಾಮರಾಜನಗರದಲ್ಲಿ ನಡೆಯುವ ರಾಜ್ಯ ಮಟ್ಟದ ಬಿಲ್ವಿದ್ಯೆ ಸ್ಪರ್ಧೆಯಲ್ಲಿ ಭಾಗವಹಿಸುವ ಸಬ್ ಜೂನಿಯರ್ ವಿಭಾಗದ ಐಶ್ವರ್ಯಾ, ಸುಮನಾ, ಸುಜನ್ಯಾ, ಸುಪ್ರೀತಾ, ಕೃಷ್ಣ, ರೋಶನ್, ವಿಶು, ಸುದೀಪ್ ಮತ್ತು ಜೂನಿಯರ್ ವಿಭಾಗದ ಸುಪರ್ಣಾ, ಸಾವಿತ್ರಿ, ನಳಿನಿ, ಸುಮನಾ, ಭರತ್, ಅಭಿಲಾಷ್ ಅವರಿಗೆ ಬಹುಮಾನ ವಿತರಿಸಲಾಯಿತು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.