Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಧನದಾಹಿತ್ವ ತೊರೆದು ಗುಣಗ್ರಾಹಿತ್ವ ಬೆಳೆಸಿಕೊಳ್ಳಬೇಕು: ಪ್ರಜ್ಞಾ ಪ್ರಭು
    alvas nudisiri

    ಧನದಾಹಿತ್ವ ತೊರೆದು ಗುಣಗ್ರಾಹಿತ್ವ ಬೆಳೆಸಿಕೊಳ್ಳಬೇಕು: ಪ್ರಜ್ಞಾ ಪ್ರಭು

    Updated:16/11/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಿದ್ಯಾಗಿರಿ: ಆಧುನಿಕ ಜಗತ್ತಿನಲ್ಲಿ ಮಾನವನ ದಿನಚರಿಯು ಅನಾರೋಗ್ಯ ಸ್ವರೂಪವನ್ನು ಪಡೆಯುತ್ತಿದ್ದು ಇದನ್ನು ಬದಲಿಸಿಕೊಳ್ಳಬೇಕಾದ್ದು ತುಂಬಾ ಮುಖ್ಯ ಎಂದು ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಜ್ಞಾ ಪ್ರಭು ಅಭಿಪ್ರಾಯಿಸಿದರು.

    Click Here

    Call us

    Click Here

    ೧೫ನೇ ಆಳ್ವಾಸ್ ನುಡಿಸಿರಿಯ ಪ್ರಯುಕ್ತ ನಡೆದ ವಿದ್ಯಾರ್ಥಿಸಿರಿಯಲ್ಲಿ `ದಿನಚರಿ: ಹಿಂದುಮುಂದು’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದ ಅವರು, ಹುಟ್ಟು, ಜೀವನ ಹಾಗೂ ಮರಣ ನಮ್ಮ ಬದುಕಿನ ದಿನಚರಿಯಾದರೆ ಇದಕ್ಕೆ ಪೂರಕವಾಗಿ ನಮ್ಮ ನಿತ್ಯ ಚಟುವಟಿಕೆಗಳು ನಡೆಯಬೇಕು. ಅದರೆ ಇಂದು ಮಾನವನು ಸಂಪತ್ತಿನ ಜೀವನದೆಡೆಗೆ ಮುಖಮಾಡಿ ನಿಂತಿದ್ದಾನೆ. ತನ್ನ ಸುತ್ತ ನಡೆಯುವಂತಹ ಯಾವುದೇ ಘಟನೆಗಳ ಬಗ್ಗೆ ಅರಿತುಕೊಳ್ಳದಾಗದಷ್ಟು ಮಾನವ ಬದಲಾಗಿದ್ದು, ಆತನ ನಿತ್ಯದ ಜೀವನ ಶೈಲಿಯು ಮಾರ್ಪಡಾಗುತ್ತಲೇ ಹೋಗುತ್ತಿದೆ ಎಂದರು.

    ಬದಲಾಗುತ್ತಿರುವ ಜೀವನಶೈಲಿಯ ಬಗ್ಗೆ ವಿಶ್ಲೇಷಿಸಿದ ಪ್ರಜ್ಞಾ ಪ್ರಭು, ಇಂದಿನ ಕೈಗಾರಿಕಾ ಕ್ರಾಂತಿ, ಯಾಂತ್ರೀಕೃತ ಬದುಕು ಮನುಷ್ಯ ಅನಾರೋಗ್ಯಕರ ಜೀವನ ವಿಧಾನವನ್ನು ಹೊಂದುವಂತೆ ಮಾಡುತ್ತಿವೆ ಎಂದು ತಿಳಿಸಿದರು. ಇಂತಹ ದಿನಚರಿಗಳು ಬದಲಾಗಬೇಕಿದ್ದು, ಓದು, ಬರಹ, ಸಾಹಿತ್ಯದೆಡೆಗೆ ಇಂದಿನ ಯುವಜನತೆ ಮುಖ ಮಾಡಬೇಕಿದೆ. ಜೀವನದ ಯಾನ ಅನ್ನುವಂತದ್ದು ಅರ್ಥಪೂರ್ಣವಾಗಿರಬೇಕೆಂದರೆ, ಬೇರೆಯವರು ನೆನಪಿಟ್ಟುಕೊಳ್ಳುಬೇಕಂತಿದ್ದರೆ ನಮ್ಮ ಚಟುವಟಿಕೆಗಳು ಬಹಳ ಪರಿಶುದ್ದವಾಗಿ, ಅಚ್ಚುಕಟ್ಟಾಗಿ ಇರಬೇಕಾದದ್ದು ಬಹಳ ಮುಖ್ಯವಾಗಿರುತ್ತದೆ. ನಮ್ಮ ದಿನಚರಿಯು ಪರಿಶುದ್ಧ ಹಾಗೂ ಅರ್ಥಗರ್ಭಿತವಾಗಿದ್ದಲ್ಲಿ ಮಾತ್ರ ಏಳಿಗೆ ಸಾಧ್ಯ ಎಂದು ತಿಳಿಸಿದರು. ವಿದ್ಯಾರ್ಥಿಸಿರಿಯ ಸಮ್ಮೇಳನಾಧ್ಯಕ್ಷೆ ಸನ್ನಿಧಿ ಟಿ.ರೈ ಪೆರ್ಲ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.