Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ್ರಾ.ಪಂ ಚುನಾವಣೆ: ತಾಲೂನಾದ್ಯಂತ ಶಾಂತಿಯುತ ಮತದಾನ
    ಊರ್ಮನೆ ಸಮಾಚಾರ

    ಗ್ರಾ.ಪಂ ಚುನಾವಣೆ: ತಾಲೂನಾದ್ಯಂತ ಶಾಂತಿಯುತ ಮತದಾನ

    Updated:05/08/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಗ್ರಾ.ಪಂ ಚುನಾವಣೆ: ಹಲವು ಪಂಚಾಯತಿಗಳಲ್ಲಿ ರಾಜಿಯಾಟ, ಕೆಲವೆಡೆ ಮಳೆರಾಯನ ಆರ್ಭಟ, ಸಣ್ಣ ಪುಟ್ಟ ಹೊಡೆದಾಟ

    Click Here

    Call us

    Click Here

    ಕುಂದಾಪುರ: ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ಇಂದು(ಶುಕ್ರವಾರ) ಮೊದಲ ಹಂತದ ಚುನಾವಣೆ ನಡೆದಿದ್ದು, ಈ ಭಾರಿ ಕುಂದಾಪುರ ತಾಲೂಕಿನಲ್ಲಿ ಶೇ.71.19 ಮತದಾನವಾಗಿದೆ. ಅಲ್ಲಲ್ಲಿ ಮಾತಿನ ಚಕಮಕಿ, ಆರೋಪ-ಪ್ರತ್ಯಾರೋಪ ಹಾಗೂ ಒಂದೆರಡು ಕಡೆ ಹಲ್ಲೆ ಪ್ರಕರಣವನ್ನು ಹೊರತುಪಡಿಸಿದರೇ ಬಹುತೇಕ ಮತದಾನ ಶಾಂತಿಯುತವಾಗಿ ನಡೆದಿದೆ.

    142 ಸ್ಥಾನಗಳಿಗೆ ಅವಿರೋಧ ಆಯ್ಕೆ:
    ಕುಂದಾಪುರ ತಾಲೂಕಿನ ಒಟ್ಟು 62 ಪಂಚಾಯತ್‌ಗಳ 875 ಸ್ಥಾನಗಳಿಗೆ ಈ ಚುನಾವಣೆ ಘೋಷಣೆಯಾಗಿತ್ತು. ಇವುಗಳ ಪೈಕಿ 142 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದ 733 ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಿತು. ಈ ಬಾರಿ ಕುಂದಾಪುರ ತಾಲೂಕಿನಲ್ಲಿ 9 ಹೊಸ ಗ್ರಾಮಪಂಚಾಯತ್‌ಗಳ ರಚನೆಯಾಗಿತ್ತು. ಹೊಸ ಗ್ರಾಮ ಪಂಚಾಯತ್‌ಗಳಲ್ಲಿ ಕೊರ್ಗಿ ಗ್ರಾಮದ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ವಿಶೇಷವಾಗಿತ್ತು. ಉಳಿದಂತೆ ಶಿರೂರು ಗ್ರಾ.ಪಂ.ನ 44 ಸ್ಥಾನಗಳಲ್ಲಿ 2 ಸ್ಥಾನಗಳಿಗೆ, ಪಡುವರಿ ಗ್ರಾ.ಪಂ.ನ 18 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ, ಉಪ್ಪುಂದ ಗ್ರಾ.ಪಂ.ನ 28 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ, ಕೆರ್ಗಾಲ್ ಗ್ರಾ.ಪಂ.ನ 12 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ, ಕಾಲ್ತೋಡು ಗ್ರಾ.ಪಂ.ನ 13 ಸ್ಥಾನಗಳಲ್ಲಿ 4 ಸ್ಥಾನಗಳಿಗೆ, ಕಂಬದಕೋಣೆ ಗ್ರಾ.ಪಂ.ನ 14 ಸ್ಥಾನಗಳಲ್ಲಿ ಎರಡು ಸ್ಥಾನಗಳಿಗೆ, ನಾವುಂದ ಗ್ರಾ.ಪಂ.ನ 15 ಸ್ಥಾನಗಳಲ್ಲಿ 2 ಸ್ಥಾನಕ್ಕೆ, ಮರವಂತೆ ಗ್ರಾ.ಪಂ.ನ 14 ಸ್ಥಾನಗಳಲ್ಲಿ ಒಂದಕ್ಕೆ, ನಾಡ ಗ್ರಾ.ಪಂ.ನ 25 ಸ್ಥಾನಗಳಲ್ಲಿ 5 ಸ್ಥಾನಕ್ಕೆ, ಆಲೂರು ಗ್ರಾ.ಪಂ.ನ 14 ಸ್ಥಾನಗಳಲ್ಲಿ 11 ಸ್ಥಾನಗಳಿಗೆ, ಹಕ್ಲಾಡಿ ಗ್ರಾ.ಪಂ.ನ 16 ಸ್ಥಾನಗಳಲ್ಲಿ 8 ಸ್ಥಾನಗಳಿಗೆ, ತ್ರಾಸಿ ಗ್ರಾ.ಪಂ.ನ 8 ಸ್ಥಾನಗಳಲ್ಲಿ 3 ಸ್ಥಾನಗಳಿಗೆ, ಹೆಮ್ಮಾಡಿ ಗ್ರಾ.ಪಂ.ನ 11 ಸ್ಥಾನಗಳಲ್ಲಿ 4 ಸ್ಥಾನಗಳಿಗೆ, ಹಟ್ಟಿಯಂಗಡಿ ಗ್ರಾ.ಪಂ.ನ 14 ಸ್ಥಾನಗಳಲ್ಲಿ 4 ಸ್ಥಾನಗಳಿಗೆ, ಕಾವ್ರಾಡಿ ಗ್ರಾ.ಪಂ.ನ 16ಸ್ಥಾನಗಳಲ್ಲಿ 2 ಸ್ಥಾನಗಳಿಗೆ , ಆನಗಳ್ಳಿ ಗ್ರಾ.ಪಂ.ನ 8 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ, ಕೋಣಿ ಗ್ರಾ.ಪಂ.ನ 10 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ, ತೆಕ್ಕಟ್ಟೆ ಗ್ರಾ.ಪಂ. 14 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ, ಬೇಳೂರು ಗ್ರಾ.ಪಂ.ನ 9 ಸ್ಥಾನಗಳಲ್ಲಿ 2 ಸ್ಥಾನಗಳಿಗೆ, ಕೆದೂರು ಗ್ರಾ.ಪಂ.ನ 10 ಸ್ಥಾನಗಳಿಗೆ, ಕಾಳಾವರ ಗ್ರಾ.ಪಂ.ನ 17 ಸ್ಥಾನಗಳಲ್ಲಿ 7 ಸ್ಥಾನಗಳಿಗೆ, ಹೊಂಬಾಡಿ-ಮಂಡಾಡಿ ಗ್ರಾ.ಪಂ.ನ 17 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ, ಮೊಳಹಳ್ಳಿ ಗ್ರಾ.ಪಂ.ನ ಎಲ್ಲ 11 ಸ್ಥಾನಗಳಿಗೆ, ಹಾರ್ದಳ್ಳಿ-ಮಂಡಳ್ಳಿಯ ಎಲ್ಲಾ 13 ಸ್ಥಾನಗಳಿಗೆ, ಹಾಲಾಡಿ ಗ್ರಾ.ಪಂ.ನ 11 ಸ್ಥಾನಗಳಲ್ಲಿ 7 ಸ್ಥಾನಗಳಿಗೆ, ಬೆಳ್ವೆ ಗ್ರಾ.ಪಂ.ನ 18 ಸ್ಥಾನಗಳಲ್ಲಿ 17 ಸ್ಥಾನಗಳಿಗೆ, ಅಮಾಸೆಬೈಲು ಗ್ರಾ.ಪಂ.ನ ಒಟ್ಟು 19 ಸ್ಥಾನಗಳಲ್ಲಿ 2 ಸ್ಥಾನಗಳಿಗೆ, ಈಡೂರು ಕುಂಜ್ಞಾಡಿ ಗ್ರಾ.ಪಂ.ನ 12 ಸ್ಥಾನಗಳಲ್ಲಿ 1 ಸ್ಥಾನಕ್ಕೆ, ಕಟ್‌ಬೆಲ್ತೂರಿನ ಗ್ರಾ.ಪಂ.ನ 13 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ, ಗುಲ್ವಾಡಿ ಗ್ರಾ.ಪಂ.ನ 13 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ, ಗೋಪಾಡಿಯ ಒಂಭತ್ತು ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ ಹಾಗೂ ಕೊರ್ಗಿಯ ಎಲ್ಲ 9 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಈ ಪೈಕಿ ಕೊರ್ಗಿ ಗ್ರಾ.ಪಂ.ನ 9, ಮೊಳಹಳ್ಳಿ ಗ್ರಾ.ಪಂ.ನ 11, ಕೆದೂರಿನ ಗ್ರಾ.ಪಂ.ನ 10, ಹಾರ್ದಳ್ಳ್ಪಿ ಮಂಡಳ್ಳಿ ಗ್ರಾ.ಪಂ.ನ 13 ಸ್ಥಾನಗಳಿಗೆ ಪೂರ್ಣ ಪ್ರಮಾಣದ ಅವಿರೋಧ ಆಯ್ಕೆ ನಡೆದಿರೋದು ವಿಶೇಷವಾಗಿದೆ.
    ಕುಂದಾಪುರ ತಾಲೂಕಿನ ಕೋಟೇಶ್ವರ, ತೆಕ್ಕಟ್ಟೆ, ಜಪ್ತಿ, ತಲ್ಲೂರು, ಬಸ್ರೂರು, ಬೇಳೂರು, ಜಪ್ತಿ, ಪಡುವರಿ, ಶಿರೂರು, ಮುಂತಾದೆಡೆ ಬೆಳಿಗ್ಗೆಯಿಂದಲೇ ಜನ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿರುವುದು ಕಂಡುಬಂತು. ಕೊಟೇಶ್ವರ, ಕಾಳವಾರ, ಬಿಜೂರು, ಶಂಕರನಾರಾಯಣ ಮುಂತಾದೆಡೆ ಮತದಾನ ನಿಧಾನಗತಿಯಲ್ಲಿ ಸಾಗುತ್ತಿತ್ತು.

    ಜನಪ್ರತಿನಿಧಿಗಳ ಮತದಾನ:

    ಕನ್ಯಾನ ಗ್ರಾಮದ ಒಂದನೇ ವಾರ್ಡಿನಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ ಮತ ಚಲಾಯಿಸಿದರೇ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೊಟತಟ್ಟು ಗ್ರಾಮದಲ್ಲಿ, ಬಿಜೆಪಿ ಮುಖಂಡ ಸುಕುಮಾರ ಶೆಟ್ಟಿ ಬೆಳ್ಳಾಲ ಗ್ರಾಮದಲ್ಲಿ ಮತ ಚಲಾಯಿಸಿದರು. ಹಾಲಾಡಿ ಗ್ರಾ.ಪಂ ನಲ್ಲಿ ಅಭ್ಯರ್ಥಿಗಳ ನಡುವೆ ರಾಜಿಯಾದುದರಿಂದ ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಹಾಗೂ ಕೊರ್ಗಿ ಪಂಚಾಯತ್ ಅವಿರೋಧ ಆಯ್ಕೆಗಳಾದ ಕಾರಣ ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಅವರು ಕೊರ್ಗಿ ಗ್ರಾಮದಲ್ಲಿ ಮತ ಚಲಾಯಿಸುವ ಅವಕಾಶ ಕಳೆದುಕೊಂಡರು.

    Click here

    Click here

    Click here

    Call us

    Call us

    ಮಳೆಗೆ ಮತದಾರ ಕಂಗಾಲು:

    ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮೊಡ ಕವಿದ ವಾತಾವರಣವಿದ್ದು, ತಾಲೂಕಿನ ಹಲವೆಡೆ ಮಧ್ಯಾಹ್ನದ ಸುಮಾರಿಗೆ ಗುಡುಗು, ಮಿಂಚು ಸಹಿತ ಬಾರೀ ಮಳೆಯಾಗಿದೆ. ಶಿರೂರು ಬೈಂದೂರು ಕೊಲ್ಲೂರು ನಾಗೂರು, ಕೋಟೇಶ್ವರ, ಕುಂಭಾಸಿ, ತೆಕ್ಕಟ್ಟೆ, ಕೋಟ, ಕೆದೂರು, ತಲ್ಲೂರು, ಹಟ್ಟಿಯಂಗಡಿ, ಅಮಾಸೆಬೈಲು ಮೊದಲಾದೆಡೆ ಭಾರೀ ಮಳೆಯಾಗಿತ್ತು. ಮಧ್ಯಾಹ್ನ ೩ ಗಂಟೆ ಬಳಿಕ ನಂತರ ಮೋಡವಿದ್ದರೂ ಮಳೆ ನಿಂತಿದ್ದರಿಂದ ಮತದಾನ ಬಿರುಸುಗೊಂಡಿತು. ಒಟ್ಟಿನಲ್ಲಿ ಯಾವುದೇ ಗಂಭೀರ ಅಡಚಣೆಯಿಲ್ಲದೆ ಮತದಾನ ಶಾಂತಿಯುತವಾಗಿ ನಡೆಯಿತು.

    ವ್ಯಕ್ತಿಗೆ ಹಲ್ಲೆ:

    ಬೆಳ್ಳಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಮುಂದ ಶಾಲೆಯ ಮತಗಟ್ಟೆಯೊಂದರಲ್ಲಿ ಮತದಾನದ ವೇಳೆ ನಡೆದ ಚಕಮಕಿ ಹಲ್ಲೆಗೆ ತಿರುಗಿ ಬಾಲಕೃಷ್ಣ ಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾನು ಪಕ್ಷವೊಂದರ ಅಭ್ಯರ್ಥಿಯ ಜತೆ ಮಾತನಾಡುತ್ತಿದ್ದಾಗ ವಿರೋಧಿಗಳು ಹಲ್ಲೆ ನಡೆಸಿದರು ಎಂದು ಇವರು ಆರೋಪಿಸಿದ್ದಾರೆ. ತಲೆಗೆ ಗಂಭೀರ ರಕ್ತಗಾಯ ಉಂಟಾದ ಅವರು ಕುಂದಾಪುರ ಆಸ್ಪತ್ರೆಗೆ ಸೇರಿದ್ದಾರೆ. ಕುಂದಾಪುರ ಡಿ.ವೈ.ಎಸ್.ಪಿ. ಮಂಜುನಾಥ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮೋರ್ಟುವಿನಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಆರಂಭಗೊಳ್ಳಲಿದ್ದ ಗುಂಪು ಘರ್ಷಣೆಯನ್ನು ಮಧ್ಯಪ್ರವೇಶಿಸಿದ ಪೊಲೀಸರು ತಡೆದರು.

    _MG_6298 _MG_6306 _MG_6326 _MG_6341 _MG_6346

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d