Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಸೌಹಾರ್ದ ಕ್ರಿಸ್ಮ್‌ಸ್ ಆಚರಣೆ: ಶಾಂತಿ, ಪ್ರೀತಿ ಹಾಗೂ ಏಕತೆಯ ಸಂದೇಶ
    ಊರ್ಮನೆ ಸಮಾಚಾರ

    ಕುಂದಾಪುರದಲ್ಲಿ ಸೌಹಾರ್ದ ಕ್ರಿಸ್ಮ್‌ಸ್ ಆಚರಣೆ: ಶಾಂತಿ, ಪ್ರೀತಿ ಹಾಗೂ ಏಕತೆಯ ಸಂದೇಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಬದುಕಿನಲ್ಲಿ ಪರರ ಹಸಿವು ಹಾಗೂ ನೋವಿಗೆ ಸ್ಪಂದಿಸುವುದು ಅಗತ್ಯ. ಭ್ರಾತೃತ್ವ ಹಾಗೂ ಸಹೋದರತೆಯ ಮೂಲಕ ಸ್ವಸ್ಥ ಸಮಾಜವನ್ನು ಕಟ್ಟಲು ನಾವೆಲ್ಲರೂ ಪಣ ತೊಡಬೇಕಾಗಿದೆ ಎಂದು ಶ್ರೀ ಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಅವರು ಕಥೊಲಿಕ್ ಸಭಾ ಉಡುಪಿ ಪ್ರದೇಶ್, ಕುಂದಾಪುರ ವಲಯ ಸಮಿತಿ ಆಶ್ರಯದಲ್ಲಿ ಭಾನುವಾರ ಕುಂದಾಪುರ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡ ಸೌಹಾರ್ದ ಕ್ರಿಸ್ಮಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂದಿನ ಬದುಕು ಯಾಂತ್ರಿಕತೆಯತ್ತ ಸಾಗುತ್ತಿದೆ. ಮಾನವೀಯತೆ ಇಲ್ಲದ ಪ್ರಪಂಚದಲ್ಲಿ ಬದುಕಿತ್ತಿದ್ದೇವೆ ಎಂದು ಭಾಸವಾಗುತ್ತಿದೆ. ಇವನ್ನೆಲ್ಲಾ ಮೀರಿ ಏಕತೆಯ ಮಂತ್ರವನ್ನು ಪಠಿಸುವುದು ಅಗತ್ಯವಾಗಿದೆ ಎಂದರು.

    ಉಡುಪಿ ಧರ್ಮ ಪ್ರಾಂತ್ಯ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ಕ್ರಿಸ್ಮಸ್ ಸಂದೇಶ ನೀಡಿ, ಪ್ರೀತಿ ಮತ್ತು ಶಾಂತಿ ದೇವರು ಕಲಿಸಿದ ಭಾಷೆ. ಭಾರತದಲ್ಲಿ ಬೇರೆ ಬೇರೆ ಧರ್ಮಗಳಿದ್ದರೂ ಎಲ್ಲದರ ಗುರಿಯೂ ದೇವರೊಂದಿಗೆ ಇರುವುದೇ ಆಗಿದೆ. ಎಲ್ಲಾ ಧರ್ಮಗಳೂ ಶಾಂತಿ, ಪ್ರೀತಿ, ದಯೆ ಕರುಣೆಯ ಸಂದೇಶವನ್ನು ಸಾರುತ್ತವೆ. ಪ್ರತಿಯೊಂದು ಧರ್ಮವು ಪರರನ್ನು ಗೌರವಿಸಲು ಹೇಳುತ್ತವೆ ನಾವೆಲ್ಲರೂ ಒಂದೇ ಮನುಕುಲಕ್ಕೆ ಸೇರಿದವರು ಎಂಬುದನ್ನು ಪ್ರತಿಪಾದಿಸುತ್ತದೆ ಎಂದರು.

    ಸದ್ಭಾವನಾ ವೇದಿಕೆ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ಮಾತನಾಡಿ ದೇಶದಲ್ಲಿ ನಮ್ಮನ್ನು ಒಡೆಯುವ, ಕಂದಕ ಸೃಷ್ಟಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಆದರೆ ದೇಶ ಕಟ್ಟುವ ಹಾಗೂ ಹೃದಯಗಳನ್ನು ಬೆಸೆಯುವ ಕೆಲಸ ಅಗತ್ಯವಾಗಿ ಆಗಬೇಕಿದೆ. ನಮ್ಮ ಪ್ರಕೃತಿಯೇ ವಿವಿಧತೆಯಲ್ಲಿ ಏಕತೆಯನ್ನು ಕಾಣಲು ಬಯಸುತ್ತದೆ. ನಮ್ಮ ಧರ್ಮವನ್ನು ಪಾಲಿಸುತ್ತಾ, ಮತ್ತೊಂದು ಧರ್ಮವನ್ನು ಗೌರವಿಸುವ ಧರ್ಮ ನಿರಪೇಕ್ಷತೆ ಪ್ರತಿಯೊಬ್ಬರಲ್ಲಿಯೂ ಬರಬೇಕಿದೆ. ದೇಶಕ್ಕೆ ಬೇಕಿರುವುದು ಮಂದಿರ, ಮಸೀದಿ, ಚರ್ಚುಗಳಲ್ಲ. ಬದಲಿಗೆ, ಬಹುತ್ವಕ್ಕೆ ಮನ್ನಣೆ ನೀಡುವ, ಪರಸ್ಪರರನ್ನು ಗೌರವಿಸುವ ಗುಣ. ನಿಜವಾದ ಧರ್ಮವಿರುವುದು ಮಂದಿರ, ಮಸೀದಿ, ಚರ್ಚುಗಳಲ್ಲಲ್ಲ. ಅದಿರುವುದು ಮನುಷ್ಯನ ಒಂದು ಹಿಡಿ ಹೃದಯದಲ್ಲಿ ಎಂದು ಮಾರ್ಮಿಕವಾಗಿ ನುಡಿದರು.

    ಸಮಾಜ ಸೇವಕರುಗಳಾದ ಬಿ. ವಾಸುದೇವ ಹಂದೆ, ಕೆ. ಸಿರಾದಿಲ್ (ಸಿರಾಜ್), ಲಿಪ್ಟನ್ ಒಲಿವೇರಾ ತ್ರಾಸಿ ಅವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಅತಿಥಿಗಳಾಗಿ ಕುಂದಾಪುರ ವಲಯ ಪ್ರಧಾನ ಧರ್ಮಗುರು ವಂದನೀಯ ಗುರು ಸ್ಟ್ಯಾನಿ ತಾವ್ರೊ, ಕುಂದಾಪುರ ಸಿ.ಎಸ್.ಐ ಕೃಪಾ ಚರ್ಚ್ ಸಭಾಪಾಲಕ ರೆವರೆಂಡ್ ಕಿಶೋರ್ ಕುಮಾರ್, ಜಡ್ಕಲ್ ಸೈಂಟ್ ಜೋರ್ಜ್ ಚರ್ಚ್ ಧರ್ಮಗುರು ವಂದನೀಯ ಗುರು ವರ್ಗೀಸ್ ಪುದಿಯಡತ್ತ್, ಸಾಸ್ತಾನ ಸೈಂಟ್ ಥೋಮಸ್ ಓರ್ಥೋಡೆಕ್ಸ್ ಸಿರಿಯನ್ ಚರ್ಚ್ ಧರ್ಮಗುರು ವಂದನೀಯ ಗಉರು ನೊಯಲ್ ಲೂವಿಸ್ ಉಪಸ್ಥಿತರಿದ್ದರು. ಕುಂದಾಪುರ ವಲಯ ಸಮಿತಿ ಅಧ್ಯಕ್ಷ ಮೈಕಲ್ ಪಿಂಟೊ, ಕಾರ್ಯದರ್ಶಿ ಲೀನಾ ತಾವ್ರೊ, ಕಾರ್ಯಕ್ರಮ ಸಂಚಾಲಕ ಎಲ್‌ರೋಯಿ ಕಿಶನ್ ಕ್ರಾಸ್ಟೊ, ನಿಯೋಜಿತ ಅಧ್ಯಕ್ಷೆ ಮೇಬಲ್ ಡಿಸೋಜಾ ಮೊದಲಾದವರು ಇದ್ದರು.

    ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷ ಅಲ್ವಿನ್ ಕ್ವಾಡ್ರಸ್ ಸ್ವಾಗತಿಸಿದರು. ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿ ಮಾಜಿ ಅಧ್ಯಕ್ಷ ಜಾನ್ಸನ್ ಡಿ. ಅಲ್ಮೆಡಾ ವಿಶೇಷವಾಗಿ ಜ್ಯೋತಿ ಪ್ರಜ್ವಲನದ ವ್ಯವಸ್ಥೆ ಮಾಡಿದ್ದರು. ಸಿ. ಫೈವನ್ ಡಿಸೋಜಾ ಹಾಗೂ ಮಾಬೆಲ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.