Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಕೆ. ಪ್ರತಾಪಚಂದ್ರ ಶೆಟ್ಟಿ ಆಯ್ಕೆ
    ಊರ್ಮನೆ ಸಮಾಚಾರ

    ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಕೆ. ಪ್ರತಾಪಚಂದ್ರ ಶೆಟ್ಟಿ ಆಯ್ಕೆ

    Updated:11/12/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    1983 ರಿಂದ 1999ರ ವರೆಗೆ ಸತತವಾಗಿ 4ಬಾರಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ ಅವರು 2003ರಿಂದ ಇಂದಿನ ತನಕವೂ ವಿಧಾನಪರಿಷತ್ ಸದಸ್ಯರಾಗಿ ಜನಸೇವೆಯಲ್ಲಿ ಸಕ್ರಿಯರು. ಹುಯ್ಯಾರು ಪಟೇಲ್ ಹಿರಿಯಣ್ಣ ಶೆಟ್ಟಿ ಮತ್ತು ಕೊಳ್ಕೆಬೈಲು ಗುಲಾಬಿ ಶೆಡ್ತಿಯವರ ಸುಪುತ್ರನಾಗಿ 1949 ಸೆಪ್ಟೆಂಬರ್‌ 4ರಂದು ಜನಿಸಿದ ಪ್ರತಾಪ್ ಶೆಟ್ಟರು ಬಿ.ಎ ಪದವಿದರರು. ಪದವಿ ಪಡೆದ ನಂತರ ವಿಜಯಾ ಬ್ಯಾಂಕ್ ನ ಉದ್ಯೋಗಿ ಯಾಗಿ ಪುಣೆ ಹಾಗೂ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸಿ ಆ ನಂತರ ತಂದೆಯವರ ಮರಣದ ತರುವಾಯ ಬ್ಯಾಂಕ್ ಉದ್ಯೋಗ ತೊರೆದು ಊರಿಗೆ ವಾಪಾಸಾಗಿ ಆ ನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯರಾಗಿ ತನ್ನ ರಾಜಕೀಯ ಜೀವನವನ್ನು ಜನಸೇವೆಯ ಮೂಲಕ ಆರಂಬಿಸಿದ್ದರು.

    ಆ ನಂತರ ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿಯ ಉಪಾಧ್ಯಕ್ಷರಾಗಿ,ಎಐಸಿಸಿಯ ಸದಸ್ಯರಾಗಿ ಶಾಸಕರಾಗಿ, ವಿಧಾನಪರಿಷತ್ ಸದಸ್ಯರಾಗಿ ದೀರ್ಘಾವಧಿಯ ಕಾಲ ಜನತೆಯ ಹಾಗೂ ಪಕ್ಷದ ಸೇವೆ ಸಲ್ಲಿಸಿದ ಕೀರ್ತಿ ಇವರದ್ದಾಗಿದೆ.

    ಕಳೆದ ಭಾರಿ ವಿಧಾನ ಪರಿಷತ್ ಚುನಾವಣೆಯ ವೇಳೆ ರಾಜಕೀಯ ಜೀವನ ಸಾಕು. ಮತ್ತೆ ಚುನಾವಣೆಗೆ ಸ್ವರ್ಧಿಸುವುದಿಲ್ಲ ಎಂದು ಹೇಳಿಕೊಂಡಿದ್ದ ಶೆಟ್ಟಿರು ಕಾರ್ಯಕರ್ತರ ಒತ್ತಡಕ್ಕೆ ಮಣಿದು, ವರಿಷ್ಠರ ತೀರ್ಮಾನ ಕಟ್ಟುಬಿದ್ದು ಮತ್ತೆ ಸ್ವರ್ಧಿಸಿ ಗೆದ್ದು ಬಂದಿದ್ದರು. ಸತತ 33ವರ್ಷಗಳ ಕಾಲ ಎರಡೂ ಸದನಗಳ ಆಗುಹೋಗುಗಳನ್ನು ಹತ್ತಿರದಿಂದ ಗಮನಿಸಿದವರು. ನಾಲ್ಕು ವರ್ಷಗಳ ಹಿಂದೆ ವಾರಾಹಿ ಯೋಜನೆ ಹಳ್ಳ ಹತ್ತುತ್ತಿರುವಾಗ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸ್ವತಃ ತಾವೇ ಪ್ರತಿಭಟನೆ ಕುಳಿತು ವಾರಾಹಿ ಯೋಜನೆ ವೇಗ ಪಡೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

    ಹಿಂದಿನ ಕಾಂಗ್ರೆಸ್ ಸರಕಾರವಿರುವಾಗ, ಈಗಿನ ಮೈತ್ರಿ ಸರಕಾರವಿರುವಾಗ ಸಚಿವ ಸ್ಥಾನ ಒಲಿಯುವ ಮಾತುಗಳು ಕೇಳಿ ಬಂದಿದ್ದರೂ, ಪ್ರತಾಪಚಂದ್ರ ಶೆಟ್ಟಿ ಯಾವುದಕ್ಕೂ ತಲೆಕೆಡಿಸಿಕೊಳ್ಳದೇ, ಸರಕಾರದ ಮೇಲೆ ಒತ್ತಡವನ್ನೂ ತರದೇ ಸುಮ್ಮನಾಗಿದ್ದರು.

    Click here

    Click here

    Click here

    Click Here

    Call us

    Call us

    ಕೆಲವು ತಿಂಗಳ ಹಿಂದಷ್ಟೇ ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಆಯ್ಕೆಯಾಗಿದ್ದರು. ಪರಿಷತ್ತಿನ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ಪ್ರಬಲ ಹುದ್ದೆಗಳು ಕರಾವಳಿ ಮೂಲಕ ನಾಯಕರಿಗೆ ಒಲಿದಿರುವುದು ಹೆಮ್ಮೆಯ ಸಂಗತಿಯೇ ಸರಿ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    15 + twelve =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.