ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಂಗಕರ್ಮಿ, ಶಿಕ್ಷಕ ಕೂರಾಡಿ ಸೀತಾರಾಮ ಶೆಟ್ಟಿ ಅವರು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ ೬೮ ವರ್ಷ ವಯಸ್ಸಾಗಿತ್ತು.
ಕೂರಾಡಿ ಸೀತಾರಾಮ ಶೆಟ್ಟಿ ನಿವೃತ್ತ ಅಧ್ಯಾಪಕರಾಗಿದ್ದು ಬಿ.ಎಂ.ಎಂ. ಹೈಸ್ಕೂಲ್ ಕೂರಾಡಿ ಶಾಲೆಯಿಂದ ನಿವೃತ್ತರಾಗಿದ್ದರು. ಕೂರಾಡಿಯವರು ಹಲವು ನಾಟಕಗಳನ್ನು ನಿರ್ದೇಶಿಸಿದ್ದರು.
ರಾಜ್ಯ ಉತಮ ಶಿಕ್ಷಕ ಪ್ರಶಸ್ತಿಯನ್ನು ಗಳಿಸಿದ್ದ ಅವರು ಕೆಲವು ಸಮಯದಿಂದ ಅನಾರೋಗ್ಯ ಹೊಂದಿದ್ದರು. ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಕುಟುಂಬ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.










